ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈವರೆಗಿನ ಶೇಕಡವಾರು ಮತದಾನದ ವಿವರ |
ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದ್ದು ಬಿಸಿಲು ಝಳಕ್ಕೆ ಬೆದರಿ ಮತದಾರರು ಬೆಳಗ್ಗೆಯೇ ಮತಗಟ್ಟೆಗಳತ್ತ ಉತ್ಸಾಹದಿಂದ ಧಾವಿಸಿ ಮತ ಚಲಾಯಿಸುತ್ತಿದ್ದಾರೆ. ಮಧ್ಯಾಹ್ನ 03 ಗಂಟೆವರೆಗೆ ಒಟ್ಟು ಶೇ.58.04 ಮತದಾನವಾಗಿದೆ.
ಎಲ್ಲೆಲ್ಲಿ ಎಷ್ಟೆಷ್ಟು ?
ಬೈಂದೂರು : 58.41
ಭದ್ರಾವತಿ : 53.28
ಸಾಗರ : 59.26
ಶಿಕಾರಿಪುರ : 60.75
ಶಿವಮೊಗ್ಗ : 53.16
ಶಿವಮೊಗ್ಗ ಗ್ರಾಮಾಂತರ : 61.63
ಸೊರಬ : 59.58
ತೀರ್ಥಹಳ್ಳಿ : 60.01
ಉತ್ಸಾಹದಿಂದ ಮತಗಟ್ಟೆಯಲ್ಲಿ ಜಮಾಯಿಸಿದ ಮತದಾರರು | ಮತಗಟ್ಟೆಗೆ ಬಂದು ಮತ ಚಲಾಯಿಸಿದ 96ವರ್ಷದ ನಾಗಮ್ಮ
ರಿಪ್ಪನ್ಪೇಟೆ;-ಶಿವಮೊಗ್ಗ ಲೋಕಸಭಾ ಚುನಾವಣೆಯ ಅಂಗವಾಗಿ ಇಂದು ಬೆಳಗ್ಗೆ ಮತದಾರರು ಮತಗಟ್ಟೆಯಲ್ಲಿ ಮುಂಜಾನೆಯಿAದಲೇ ಸರತಿಸಾಲಿನಲ್ಲಿ ಮತದಾನಕ್ಕೆ ಉತ್ಸುಕರಾಗಿ ನಿಂತು ಮತದಾನ ಮಾಡುತ್ತಿದ್ದು ವಿಶೇಷವಾಗಿತು.
ಬೇಸಿಗೆ ಬಿಸಿಲ ಕಾರಣ ಮತದಾರರು ತಂಪಾದ ಸಮಯದಲ್ಲಿ ಮತಹಾಕಿ ಮನೆ ಸೇರಿಕೊಂಡರಾಯಿತು ಎಂದು ಮುಂಜಾನೆಯೇ ವಯೋವೃದ್ದರು ಮಹಿಳೆಯರು ಹೊಸದಾಗಿ ಸೇರ್ಪಡೆಯಾದ ಹೊಸ ಮತದಾರರು ಸರತಿ ಸಾಲಿನಲ್ಲಿ ಮತಗಟ್ಟೆಯಲ್ಲಿ ನಿಂತು ಮತದಾನ ಮಾಡಿ ಮತಹಾಕಿದ ಬಗ್ಗೆ ತಮ್ಮ ಬೆರಳನ್ನು ಎತ್ತಿ ಹಿಡಿದುಕೊಂಡು ಹೊರಬರುತ್ತಿದ್ದುದ್ದು ವಿಶೇಷವಾಗಿತು.
ಇಲ್ಲಿನ ಬರುವೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅವರಣದಲ್ಲಿ ಮೂರು ಮತಗಟ್ಟೆಗಳಿದ್ದು ಈ ಎಲ್ಲ ಮತದಾನ ಕೇಂದ್ರದಲ್ಲಿ ಮತದಾನ ಮಾಡಲು ಬಂದು ಹೋಗುವವರನ್ನು ರಾಷ್ಟ್ರೀಯ ಪಕ್ಷಗಳಾ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರುಗಳು ಹಸ್ತಲಾಘವ ಮಾಡಿ ಶುಭಕೋರುತ್ತಿದ್ದರು.
ಇನ್ನೂ ಪಕ್ಷೇತರ ಅಭ್ಯರ್ಥಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನವರ ಕಡೆಯವರು ನಾವುಗಳು ಏನು ಕಡಿಮೆ ಎಂಬಂತೆ ಮತದಾನಕ್ಕೆ ಬರುವವರನ್ನು ಸ್ವಾಗತಿಸಿ ತಮ್ಮ ಪರ ಮತಮಾಡಲು ಪ್ರೇರಪಿಸುತ್ತಿರುವುದು ಕಂಡು ಬಂತು.
ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಮತಗಟ್ಟೆಯಲ್ಲಿ 96 ವರ್ಷದ ನಾಗಮ್ಮ ಶಿವಪ್ಪಗೌಡ ಕಗ್ಗಲಿ ರವರು ಮತಗಟ್ಟೆಗೆ ಬಂದು ಮತ ಚಲಾಯಿಸಿ ತಮ್ಮ 96 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು ವಿಶೇಷವಾಗಿತ್ತು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್