ಶ್ರೀಬಸವೇಶ್ವರ ಆಂಗ್ಲಮಾಧ್ಯಮ ಶಾಲೆ ಶೇ. 93 ಫಲಿತಾಂಶ
ರಿಪ್ಪನ್ಪೇಟೆ : ಇಲ್ಲಿನ ಶ್ರೀಬಸವೇಶ್ವರ ಅಂಗ್ಲಮಾಧ್ಯಮ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಶೇ. 93 ರಷ್ಟು ಫಲಿತಾಂಶಗಳಿಸಿದೆ ಎಂದು ಮುಖ್ಯೋಪಾಧ್ಯಾಯ ಚಂದ್ರಪ್ಪ ತಿಳಿಸಿದರು.
ಬಸವೇಶ್ವರ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ನಿಶಾದ್ 625 ಕ್ಕೆ 597 ಅಂಕ ಗಳಿಸಿದ್ದಾನೆ.ಇವರು ರಿಪ್ಪನ್ಪೇಟೆಯ ವಿನಾಯಕನಗರದ ಅಬ್ದುಲ್ ರವೂಫ್ ಹಾಗೂ ವಹೀದಾ ದಂಪತಿಗಳ ಪುತ್ರನಾಗಿದ್ದಾರೆ.
ಒಟ್ಟು 28 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತ್ತಿದ್ದು 26 ವಿದ್ಯಾರ್ಥಿಗಳು ಉತ್ತಿರ್ಣಾರಾಗಿದ್ದಾರೆ. ಅತ್ಯುನ್ನತ 11, ಪ್ರಥಮ ಸ್ಥಾನದಲ್ಲಿ 6, ದ್ವಿತೀಯ ಸ್ಥಾನ 4 ಮತ್ತು ತೃತೀಯ ಸ್ಥಾನದಲ್ಲಿ 5 ವಿದ್ಯಾರ್ಥಿಗಳು ಉತ್ತೀರ್ಣಾರಾಗಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
———————————————————–
ರಿಪ್ಪನ್ಪೇಟೆ ಸರ್ಕಾರಿ ಪ್ರೌಡಶಾಲೆಗೆ 79.40% ಫಲಿತಾಂಶ
ರಿಪ್ಪನ್ಪೇಟೆ : ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪಬ್ಲಿಕ್ ಪರೀಕ್ಷೆಯಲ್ಲಿ ರಿಪ್ಪನ್ಪೇಟೆ ಸರ್ಕಾರಿ ಪ್ರೌಢಶಾಲೆಗೆ ಶೇ. 79.40 ರಷ್ಟು ಫಲಿತಾಂಶ ಬಂದಿದೆ ಎಂದು ಉಪಪ್ರಾಚಾರ್ಯ ಕೆಸವಿನಮನೆ ರತ್ನಾಕರ್ ತಿಳಿಸಿದರು.
ಶಾಲೆಯ ವಿದ್ಯಾರ್ಥಿ ಸುಮುಖ 625ಕ್ಕೆ 593 ಅಂಕವನ್ನು ಪಡೆದಿರುತ್ತಾನೆ
165 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತ್ತಿದ್ದು 131 ವಿದ್ಯಾರ್ಥಿಗಳು ಉತ್ತೀರ್ಣಾರಾಗಿದ್ದಾರೆ. ಅತ್ಯುನ್ನತ ಶ್ರೇಣಿಯಲ್ಲಿ 4, ಪ್ರಥಮ ಸ್ಥಾನದಲ್ಲಿ 17, ದ್ವಿತೀಯ ಸ್ಥಾನದಲ್ಲಿ 42, ತೃತೀಯ ಸ್ಥಾನದಲ್ಲಿ 68, ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆಂದರು.
—————————————————-
ಬೆಳ್ಳೂರು ಸರ್ಕಾರಿ ಪ್ರೌಢಶಾಲೆ 96% ರಷ್ಟು ಫಲಿತಾಂಶ
ರಿಪ್ಪನ್ಪೇಟೆ : ಇಲ್ಲಿನ ಬೆಳ್ಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 96 ರಷ್ಟು ಫಲಿತಾಂಶ ಬಂದಿದೆ ಎಂದು ಮುಖ್ಯೋಪಾಧ್ಯಾಯ ಸೋಮಶೇಖರ ಬಂಡಿ ತಿಳಿಸಿದರು.
ಪರೀಕ್ಷೆಗೆ ಕುಳಿತವರು 27 ಉತ್ತೀರ್ಣಾರಾದವರು 26 ವಿದ್ಯಾರ್ಥಿಗಳು ಅದರಲ್ಲಿ ಅತ್ಯುನ್ನತ ಶ್ರೇಣಿ 5, ಪ್ರಥಮ ಸ್ಥಾನ 17, ದ್ವಿತೀಯ ಸ್ಥಾನ 4. ಒಟ್ಟು 26 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆಂದರು.
SSLC ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆಗೈದ ಎಲ್ಲಾ ವಿದ್ಯಾರ್ಥಿಗಳಿಗೆ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆ ವತಿಯಿಂದ ಅಭಿನಂದನೆಗಳು…….
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್