ಸ್ವಂತ ತಂದೆಗೆ ಆಶ್ರಯ ಕೊಡಲಾಗದ ಕುಮಾರ ಬಂಗಾರಪ್ಪರಿಂದ ನೀತಿ ಪಾಠ ಸಲ್ಲದು – ಶಾಸಕ ಗೋಪಾಲ ಕೃಷ್ಣ ಬೇಳೂರು ವಾಗ್ದಾಳಿ |Election

ಸ್ವಂತ ತಂದೆಗೆ ಆಶ್ರಯ ಕೊಡಲಾಗದ ಕುಮಾರ ಬಂಗಾರಪ್ಪರಿಂದ ನೀತಿ ಪಾಠ ಸಲ್ಲದು – ಶಾಸಕ ಗೋಪಾಲ ಕೃಷ್ಣ ಬೇಳೂರು ವಾಗ್ದಾಳಿ


ಶಿವಮೊಗ್ಗ: ‘ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರಿಗೆ ಆಶ್ರಯ ಕೊಡಲಾಗದ ಕುಮಾರ ಬಂಗಾರಪ್ಪ ಅವರು, ಸ್ವಂತ ತಂದೆಯನ್ನು ಮನೆಯಿಂದ ಹೊರ ದೂಡಿದರು. ಇಂತವರಿಂದ ನೀತಿ ಪಾಠದ ಅವಶ್ಯಕತೆ ನನಗಿಲ್ಲ’ ಎಂದು ಸಾಗರ ಕ್ಷೇತ್ರದ ಶಾಸಕ ಗೋಪಾಲ ಕೃಷ್ಣ ಬೇಳೂರು ವಾಗ್ದಾಳಿ ನಡೆಸಿದರು‌.

ಸಾಗರ ತಾಲ್ಲೂಕಿನ ಆವಿನಳ್ಳಿಯಲ್ಲಿ ಬುಧವಾರ ಆಯೋಜಿಸಿದ್ದ ಗೀತಾ ಶಿವರಾಜಕುಮಾರ ಪರ ಮತಯಾಚನೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.


ಇತ್ತೀಚೆಗೆ ಮಾಧ್ಯಮಗಳ ಎದುರು ‘ಬಂಗಾರಪ್ಪ ಅವರ ಹಾಗೆ ಕನ್ನಡಕ ಧರಿಸಿದರೆ, ಗೋಪಾಲ ಕೃಷ್ಣ ಬೇಳೂರು ಅವರು ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಆಗಲ್ಲ ಎಂದು ಟೀಕಿಸಿದ್ದಾರೆ. ಹೌದು! ‘ನಾನು ಬಂಗಾರಪ್ಪ ಆಗುವುದಕ್ಕೆ ಸಾಧ್ಯವಿಲ್ಲ, ಆದರೆ, ಬಂಗಾರಪ್ಪ ಅವರ ನಿಷ್ಠಾವಂತ ಶಿಷ್ಯನಾಗುತ್ತೇನೆ. ಈ ಸ್ಥಾನ ಪಡೆಯಲು ಕುಮಾರ ಬಂಗಾರಪ್ಪ ಅವರಿಂದ ಸಾಧ್ಯವೆ? ಎಂದು ಪ್ರಶ್ನಿಸಿದರು.

ಕುಮಾರ ಬಂಗಾರಪ್ಪ ಅವರಲ್ಲಿ ‘ಬಂಗಾರಪ್ಪ’ ಎನ್ನುವ ಹೆಸರು ಕಿತ್ತು ಬದಿಗಿಟ್ಟರೆ, ಅವರದು ನಾಯಿ ಪಾಡಾಗಲಿದೆ. ಬಂಗಾರಪ್ಪ ಅವರು ನಿಧನ ಹೊಂದಿದಾಗ ಸ್ವಂತ ತಂದೆಯ ಪಾರ್ಥೀವ ಶರೀರ ಹೊರುವ ಸೌಭಾಗ್ಯ ಕೂಡ ಅವರಿಗೆ ಸಿಗಲಿಲ್ಲ. ಆದರೆ, ಇಲ್ಲಿ ಬಂಗಾರಪ್ಪ ಅವರ ಪಾರ್ಥೀವ ಶರೀಕಕ್ಕೆ ನಾನು ಹೆಗಲು ಕೊಟ್ಟಿದ್ದೇನೆ. ಇದು ನನ್ನ ಸೌಭಾಗ್ಯ ಎಂದರು.

ಹಿಂದೆಲ್ಲಾ ಮಾಜಿ ಶಾಸಕ ಹಾಲಪ್ಪ ಕೂಡ ಇದೇ ರೀತಿ ನಾಲಿಗೆ ಹರಿ ಬಿಡುತ್ತಿದ್ದರು. ಕ್ಷೇತ್ರದ ಜನರು ಬಾಲ ಬಿಚ್ಚದಂತೆ ಮಾಡಿದ್ದಾರೆ. ಕುಮಾರ ಬಂಗಾರಪ್ಪ ಎಚ್ಚರಿಕೆಯಿಂದ ವರ್ತಿಸಬೇಕು ಎಂದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…

5 hours ago

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ Arasalu's Kavanasree H.M. earns two more Guinness…

5 hours ago

ಸರ್ಕಾರಿ ಜಾಗದಲ್ಲಿ ಖಾಸಗಿ ಬೇಲಿ; ಕಂದಾಯ ಅಧಿಕಾರಿಗಳಿಂದ ತೆರವು – ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ

ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…

7 hours ago

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

1 day ago

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…

1 day ago

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…

1 day ago