93 ವರ್ಷದ ಹಿರಿಯ ಪತ್ರಕರ್ತ ಎಸ್.ಜಿ.ರಂಗನಾಥ ದಂಪತಿಯಿಂದ ಮತದಾನ | ಶೃಂಗಾರಗೊಂಡ ಸಖಿ ಪಿಂಕ್ ಮತಗಟ್ಟೆ ಕೇಂದ್ರ

93 ವರ್ಷದ ಹಿರಿಯ ಪತ್ರಕರ್ತ ಎಸ್.ಜಿ.ರಂಗನಾಥ ದಂಪತಿಯಿಂದ ಮತದಾನ


ರಿಪ್ಪನ್‌ಪೇಟೆ;- ಆರಸಾಳಿನ ಹಿರಿಯ ಪತ್ರಕರ್ತ 93 ವರ್ಷದ ಎಸ್.ಜಿ.ರಂಗನಾಥ ಮತ್ತು ಹಿರಿಯ ಸ್ವಾತಂತ್ರ ಹೋರಾಟಗಾರ ದಿ.ಹುಂಚ ರಂಗರಾಯರ ಮಗಳು ನನ್ನ ಪತ್ನಿ 85 ವರ್ಷದ ಶ್ರೀಮತಿ ಶಾಂತಾರೊಂದಿಗೆ ಅರಸಾಳಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಯಾರ ಸಹಾಯವೂ ಇಲ್ಲದೆ ಮತಚಲಾವಣೆ ಮಾಡಿದರು.

1957 ರಲ್ಲಿ ನಡೆದ ದೇಶದ ಎರಡನೇ ಸಾರ್ವತ್ರಿಕ ಚುನಾವಣೆಯಿಂದಲೂ ಮತದಾನ ಮಾಡುತ್ತಿರುವುದಾಗಿ ತಮ್ಮ ಅನುಭವವನ್ನು ಮಾಧ್ಯಮ ಪ್ರತಿನಿಧಿಗಳ ಬಳಿ ಹಂಚಿಕೊಂಡ ಅವರು 1957 ರ ಚುನಾವಣೆಯಲ್ಲಿ ಅರಸಾಳು ಮತಗಟ್ಟೆಯಲ್ಲಿ ಶೇಕಡಾ 97 ರಷ್ಟು ಪಕ್ಕದ ಕೆಂಚನಾಲ ಮತಗಟ್ಟೆಯಲ್ಲಿ ಶೇಕಡಾ 99 ರಷ್ಟು ಮತದಾನವಾಗಿದ್ದನ್ನು ನೆನಪುಮಾಡಿಕೊಂಡರು.

ಶೃಂಗಾರಗೊಂಡ ಸಖಿ ಮತಗಟ್ಟೆ


ರಿಪ್ಪನ್‌ಪೇಟೆ ; ಮೇ. 7 ರಂದು ನಡೆದ ಶಿವಮೊಗ್ಗ ಲೋಕಸಭಾ ಚುನಾವಣೆಯ ಕೆರೆಹಳ್ಳಿ ಮತಗಟ್ಟೆಯನ್ನು ಸಖಿ ಮತಗಟ್ಟೆಯಾಗಿ ಪರಿವರ್ತನೆಗೊಳಿಸಿದ್ದು ಇಲ್ಲಿ.ಪಿ.ಆರ್.ಓ. ಎಪಿಆರ್‌ಓ ಮತಗಟ್ಟೆ ಸಿಬ್ಬಂದಿಗಳು ಮಹಿಳೆಯರೇ ಅಗಿದ್ದು ಒಟ್ಟು 583 ಮತದಾರರಿದ್ದು ಪುರುಷ ಮತದಾರ 291 ಮಹಿಳಾ ಮತದಾರ 292 ಸಂಖ್ಯೆಯಲ್ಲಿದ್ದರು.ಶೇಕಡ 80 ಮತದಾನ ಅಗಿದೆ.

ಕೆರೆಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಪಟ್ಟಣ ಪ್ರದೇಶದಲ್ಲಿ ಶೇಕಡಾ 75 ಗ್ರಾಮೀಣ ಪ್ರದೇಶದಲ್ಲಿ ಶೇಕಡಾ 80 ರಷ್ಟು ಮತದಾನವಾಗಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

5 hours ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

11 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

1 day ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

1 day ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

1 day ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

1 day ago