Anandapura | ಅಡಿಕೆ ಕಳ್ಳರ ಬಂಧನ – ಲಕ್ಷಾಂತರ ರೂ ಮೌಲ್ಯದ ಅಡಿಕೆ ವಶಕ್ಕೆ
ಅಡಿಕೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ 8 ಪ್ರಕರಣಗಳನ್ನು ಪತ್ತೆ ಮಾಡಿ 5 ಆರೋಪಿಗಳನ್ನು ಬಂಧಿಸಿ ಅವರಿಂದ ₹ 15.19 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಹೇಳಿದರು.
ಶಿಕಾರಿಪುರ ತಾಲ್ಲೂಕಿನ ಹರಗುವಳ್ಳಿ ಗ್ರಾಮದ ತುಕ್ರಾಜ್ (24), ಹಣಮಂತ (24), ರಾಕೇಶ್ (20), ಅಭಿಷೇಕ್ (20), ಶಿವಕುಮಾರ್ (23) ಬಂಧಿತರು.
ಸಾಗರ ಗ್ರಾಮಾಂತರ, ಆನಂದಪುರ, ಕಾರ್ಗಲ್ ಮತ್ತು ಸೊರಬ ಠಾಣಾ ವ್ಯಾಪ್ತಿಯಲ್ಲಿ ಈಚೆಗೆ ಅಡಿಕೆ ಕಳವು ಪ್ರಕರಣಗಳು ಹೆಚ್ಚು ದಾಖಲಾಗಿದ್ದವು. ಹೀಗಾಗಿ ಆರೋಪಿಗಳ ಪತ್ತೆಗಾಗಿ ವಿಶೇಷ ಪೊಲೀಸ್ ತಂಡ ರಚನೆ ಮಾಡಲಾಗಿತ್ತು. ತಂಡವು ಭಾನುವಾರ 5 ಆರೋಪಿಗಳನ್ನು ಬಂಧಿಸಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಎಸ್ಪಿ ಜಿ.ಕೆ. ಮಿಥುನ್ ಕುಮಾರ್ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರೆಡ್ಡಿ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ-2 ಕಾರಿಯಪ್ಪ ಎ.ಜಿ. ಮಾರ್ಗದರ್ಶನದಲ್ಲಿ ಸಾಗರ ಉಪವಿಭಾಗ ಪೊಲೀಸ್ ಅಧೀಕ್ಷಕ ಗೋಪಾಲಕೃಷ್ಣ ನಾಯ್ಕ ಅವರ ಮೇಲ್ವಿಚಾರಣೆಯಲ್ಲಿ, ಸಾಗರ ಗ್ರಾಮಾಂತರ ಪೊಲೀಸ್ ನಿರೀಕ್ಷಕ ಮಹಾಬಲೇಶ್ವರ ಎಸ್.ಎನ್., ಪಿಎಸ್ಐ ಎ.ಆರ್. ಮುಂದಿನಮನಿ, ಸಿಬ್ಬಂದಿ ಸನಾವುಲ್ಲಾ, ಷೇಖ್ ಫೈರೋಜ್ ಅಹ್ಮದ್, ರವಿಕುಮಾರ್, ಪ್ರವೀಣ್ಕುಮಾರ್, ಗುರುಬಸವರಾಜ, ಗಿರೀಶ್ ಬಾಬು, ಗುರುರಾಜ, ಇಂದ್ರೇಶ್, ವಿಜಯ್ಕುಮಾರ್ ಅವರನ್ನೊಳಗೊಂಡ ವಿಶೇಷ ತನಿಖಾ ತಂಡ ರಚಿಸಲಾಗಿತ್ತು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್