Arasalu | ಜಮೀನಿಗೆ ತೆರಳುವ ರಸ್ತೆಗೆ ಅಡ್ಡಿ – ತೆರವುಗೊಳಿಸುವಂತೆ ರೈತರಿಂದ ಮನವಿ
ಹೊಸನಗರ : ಖಾಸಗಿ ವ್ಯಕ್ತಿಗಳು ರೈತರು ಜಮೀನುಗಳಿಗೆ ಹೋಗುವ ದಾರಿಗೆ ಬೇಲಿಯನ್ನು ಕಟ್ಟಿ ತೊಂದರೆ ಮಾಡಿದ್ದು ಸದರಿ ಬೇಲಿ ತೆರವುಗೊಳಿಸಿ ವ್ಯವಸಾಯ ಮಾಡಲು ಅನುವು ಮಾಡಿ ಕೊಡಬೇಕೆಂದು ಅರಸಾಳು ಗ್ರಾಮದ ರೈತರು ಹೊಸನಗರದ ಗ್ರೇಡ್ 2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ರವರಿಗೆ ಮನವಿ ಸಲ್ಲಿಸಿದರು.
ಅರಸಾಳು ಗ್ರಾಮದ ಸರ್ವೆ ನಂ. 5 ರಿಂದ 16, 8, 11 ರ ಮುಖಾಂತರ ಬೆನವಳ್ಳಿಗೆ ಹೋಗುವ ನಕಾಶೆ ಕಂಡ ದಾರಿ ಹಾಗೂ ಗ್ರಾಮಠಾಣ ಜಾಗದಲ್ಲಿ ಸರ್ವೆ ನಂ. 5 ರಿಂದ ಒತ್ತುವರಿಮಾಡಿ ಬೇಲಿಕಟ್ಟಿದ್ದು, ಸರ್ವೆ ನಂ. 4, 3, 2, 1 ರ ಖಾತೆದಾರರ ಜಮೀನಿಗೆ ಹೋಗುವ ದಾರಿಯನ್ನು ಖಾಸಗಿ ವ್ಯಕ್ತಿಗಳು ಬೇಲಿಕಟ್ಟಿ ಗ್ರಾಮಠಾಣ ಮತ್ತು ನಕಾಶೆ ಕಂಡ ಎರಡೂ ದಾರಿಯನ್ನು ಬೇಲಿಕಟ್ಟಿ ಅಡ್ಡಿಪಡಿಸಿರುತ್ತಾರೆ.
ಈ ಬಗ್ಗೆ ಸಂಬಂಧಪಟ್ಟ ತಮ್ಮ ಇಲಾಖೆ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿರುತ್ತೇವೆ. ಹಾಗೂ ಪಂಚಾಯ್ತಿಯ ಗ್ರಾಮ ಠಾಣಾ ದಾರಿಯನ್ನು ತೆರವುಗೊಳಿಸಲು ಹಲವಾರು ಬಾರಿ ಮನವಿಯನ್ನು ಮಾಡಿದ್ದು ಯಾವುದೇ ಪ್ರಯೋಜನವಾಗಿರುವುದಿಲ್ಲ ಹಾಗಾಗಿ ಕೂಡಲೇ ಜಮೀನಿಗೆ ಅಡ್ಡ ಕಟ್ಟಿರುವ ಬೇಲಿಯನ್ನು ತೆರವುಗೊಳಿಸಿ ಕೊಡಬೇಕು ಎಂದು ರೈತರು ಮನವಿ ಮಾಡಿದ್ದಾರೆ.
ಈ ಸಂಧರ್ಭದಲ್ಲಿ ರಮೇಶ್ ಅರಸಾಳು , ಸುಬ್ಬೋಜಿ , ಗುರುರಾಜ್ ಸೇರಿದಂತೆ ಅನೇಕ ರೈತರು ಇದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್