Ripponpete | ಧರ್ಮ ಜಾಗೃತಿಗಾಗಿ ಶ್ರೀಶೈಲ ಜಗದ್ಗುರು ನಡಿಗೆ ಮಲೆನಾಡ ಕಡೆಗೆ

Ripponpete | ಧರ್ಮ ಜಾಗೃತಿಗಾಗಿ ಶ್ರೀಶೈಲ ಜಗದ್ಗುರು ನಡಿಗೆ ಮಲೆನಾಡ ಕಡೆಗೆ


ರಿಪ್ಪನ್‌ಪೇಟೆ: ಗುರು-ವಿರಕ್ತವರ್ಗ ಬೇರೆಬೇರೆ ಎಂಬ ಭಾವನೆ ಸರಿಯಾದುದಲ್ಲ. ಗುರು-ವಿರಕ್ತ ಪರಂಪರೆ ಒಂದೇ ಆಗಿದ್ದು, ಸಮಾಜದ ಧಾರ್ಮಿಕ ಭಾವನೆಗೆ ಎರಡೂ ಕಣ್ಣುಗಳಿದ್ದಂತೆ ಎಂಬ ಹಿನ್ನೆಲೆಯಲ್ಲಿ ಧರ್ಮದ ಪ್ರಬೋದನೆ ಮತ್ತು ಧರ್ಮ ಜಾಗೃತಿ ಸಾರುವ ನಿಟ್ಟಿನಲ್ಲಿ ಗುರು-ವಿರಕ್ತರು ಸಮಾಗಮಗೊಳ್ಳುತ್ತಿರುವುದಾಗಿ ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಅಭಿಪ್ರಾಯಪಟ್ಟರು.


ಪಟ್ಟಣದ ಸಮೀಪದ ಬೆಳಕೋಡು ಹಾಲಸ್ವಾಮಿಗೌಡರು ಮಂಗಳವಾರ ಆಯೋಜಿಸಲಾಗಿದ್ದ ಇಷ್ಟಲಿಂಗ ಮಹಾಪೂಜೆ ಮತ್ತು ಧರ್ಮಜಾಗೃತಿ ಸಮಾರಂಭದ ದಿವ್ಯಸಾನಿಧ್ಯವಹಿಸಿ ಆಶೀರ್ವಚನ ನೀಡಿ ವಿರಕ್ತ ಪರಂಪರೆಗೂ ಪಂಚಾಚಾರ್ಯ ಪರಂಪರೆಗೂ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಎಲ್ಲಾ ಸಮುದಾಯದವರು ಮತ್ತು ಮಲ್ಲವ ಸಮುದಾಯದವರು ಮಲ್ಲಿಕಾರ್ಜುನ ಸ್ವಾಮಿಯ ಭಕ್ತರೇ. ಶ್ರೀಶೈಲಾಕ್ಕೂ ಮಲೆನಾಡಿನ ಮಲ್ಲವರಿಗೂ ಅವಿನಾಭಾವ ಸಂಬAಧವಿದೆ. ಅಲ್ಲಮಾಪ್ರಭುರವರ ಶ್ರೀಶೈಲದಲ್ಲಿ ಐಕ್ಯರಾಗಿದ್ದು ಈ ಎಲ್ಲಾಭಕ್ತರ ಅಪೇಕ್ಷೆಯು ಧರ್ಮದ ತಿಳುವಳಿಕೆ ಮತ್ತು ಧರ್ಮ ಜಾಗೃತಿಯೊಂದಿಗೆ ಭಕ್ತರ ಮನೆಯಲ್ಲಿ ಧರ್ಮ ಪ್ರಚಾರವನ್ನು ಮಾಡುವ ಮೂಲಕ ಶ್ರೀಶೈಲ ಶ್ರೀಗಳ ನಡಿಗೆ ಮಲೆನಾಡ ಭಕ್ತರಕಡೆಗೆ ಎಂಬ ಧ್ಯೇಯದೊಂದಿಗೆ ಒಂದು ವಾರಗಳ ಕಾಲ ಮಲೆನಾಡಿನ ವ್ಯಾಪ್ತಿಯ ಭಕ್ತರ ಮನೆಮನೆಗಳಿಗೆ ಭೇಟಿನೀಡಿ ಧರ್ಮಬೋಧನೆಯಲ್ಲಿ ತೊಡಗಿಕೊಂಡಿರುವುದಾಗಿ ತಿಳಿಸಿದರು.


ಆನಂದಪುರ ಮುರುಘರಾಜೇಂದ್ರ ಮಠದ ಜಗದ್ಗುರು ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿಯವರು ಸಾನಿಧ್ಯವಹಿಸಿ ಆಶೀರ್ಚಚನ ನೀಡಿ ವ್ಯಕ್ತಿ ಕ್ರಿಯಾಶೀಲವಾಗಿ ಸಾಮಾಜಿಕ ಮತ್ತು ಸಮಾಜದ ಸೇವೆಯಲ್ಲಿ ಸಕ್ರೀಯರಾಗಿ ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಳ್ಳುವುದರಿಂದ ಶ್ರೇಯಸ್ಸು ದೊರೆಯುವುದೆಂದು ಹೇಳಿದರು. ಗುರು-ವಿರಕ್ತ ಪರಂಪರೆಯಲ್ಲಿ ಬೇಧಭಾವವಿಲ್ಲ ಕೆಲವು ಭಕ್ತರೇ ನಮ್ಮಗಳ ಮಧ್ಯೆ ಗೊಂದಲಸೃಷ್ಠಿಸುವ ಕೆಲಸ ಮಾಡಬಾರದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಕೋಣಂದೂರು ಬೃಹನ್ಮಠದ ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಮೂಲೆಗದ್ದೆ ಸದಾನಂದ ಶಿವಾಶ್ರಮದ ಅಭಿನವ ಚನ್ನಬಸವ ಸ್ವಾಮೀಜಿ, ಬಿಜಾಪುರ ಜಿಲ್ಲೆ ಬಾಗೇವಾಡಿ ಮಠದ ಷ.ಬ್ರ.ರೇಣುಕಾ ಶಿವಾಚಾರ್ಯ ಸ್ವಾಮೀಗಳು, ಮಾಜಿ ಸಚಿವ ಆರಗ ಜ್ಞಾನೇಂದ್ರ, ಮುಖಂಡ ಟಿ.ಡಿ. ಮೇಘರಾಜ್, ಉದ್ಯಮಿ ಕೆ.ಆರ್. ಪ್ರಕಾಶ್ ಕೋಣಂದೂರು, ಬೆಳಕೋಡು ಹಾಲಸ್ವಾಮಿಗೌಡರು, ವೀರೇಶ, ಉಮೇಶ, ಗಿರೀಶ ಇನ್ನಿತರರಿದ್ದರು.

ಹಾಲಸ್ವಾಮಿಗೌಡರ ಮನೆಯಲ್ಲಿ ಜಗದ್ಗುರುಗಳ ಇಷ್ಟಲಿಂಗ ಪೂಜೆ ಜರುಗಿತು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

2 days ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

2 days ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

2 days ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

2 days ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

2 days ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

2 days ago