Ripponpete | ಪಟ್ಟಣದಲ್ಲಿ ಅಬ್ಬರಿಸಿದ ಮಳೆರಾಯ – ಹೋಂಡಾ ಶೋರೂಂ , ಮನೆಗಳಿಗೆ ನುಗ್ಗಿದ ನೀರು
ರಿಪ್ಪನ್ಪೇಟೆ : ಪಟ್ಟಣದಾದ್ಯಂತ ಜೋರು ಮಳೆಯಾಗುತ್ತಿದ್ದು ಹಲವು ಕಡೆ ಮನೆ ಹಾಗೂ ಅಂಗಡಿಗಳಿಗೆ ನೀರು ನುಗ್ಗಿರುವ ಘಟನೆ ನಡೆದಿದೆ.
ಸಾಗರ ರಸ್ತೆಯ ಕಾಮಗಾರಿ ನಡೆಯುತಿದ್ದು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆ ಬದಿಯ ಮನೆ, ಅಂಗಡಿಗಳಿಗೆ ನುಗ್ಗಿ ಆವಾಂತರ ಸೃಷ್ಟಿಯಾಗಿದೆ.
ಸಾಗರ ರಸ್ತೆಯ ಹೋಂಡಾ ಬೈಕ್ ಶೋರೂಮ್ ಗೆ ನೀರು ನುಗ್ಗಿದ್ದು ಹಲವಾರು ಬೈಕ್ ಗಳು ಜಲಾವೃತ್ತಗೊಂಡಿವೆ, SBI ಬ್ಯಾಂಕ್ ಬಳಿಯಿರುವ ಶಾಲಿಮಾರ್ ಹೊಟೇಲ್ ಒಳಗೆಲ್ಲಾ ನೀರು ತುಂಬಿಕೊಂಡಿವೆ.ಹೊಸನಗರ ರಸ್ತೆಯ ಮಾಡ್ರನ್ ಮಿಲ್ ಮುಂಭಾಗದ ಬಾಬಣ್ಣ ಎಂಬುವವರ ಮನೆಗೆ ನೀರು ನುಗ್ಗಿದೆ.
ಸಾಗರ ರಸ್ತೆಯಲ್ಲಿ ರಸ್ತೆ ಮೇಲೆ ನೀರು ನದಿಯಂತೆ ಹರಿಯುತಿದ್ದು ವಾಹನ ಸಂಚಾರಕ್ಕೆ ಅಡಚಣೆಯುಂಟು ಮಾಡಿದೆ.
ಇವತ್ತು ಬೆಳಗ್ಗೆ ಕೆಲ ಹೊತ್ತು ಮೋಡ ಕವಿದ ವಾತಾವರಣ ಇತ್ತು. ಬಳಿಕ ಬಿಸಿಲು ಜೋರಾಗಿತ್ತು. ಸಂಜೆ ವೇಳೆಗೆ ದಟ್ಟ ಮೋಡ ಆವರಿಸಿ, ಜೋರು ಮಳೆ ಶುರುವಾಗಿದೆ.
ಸಾರ್ವಜನಿಕರ ಆಕ್ರೋಶ :
ಸಾಗರ ರಸ್ತೆಯಲ್ಲಿ ರಸ್ತೆ ಕಾಮಗಾರಿ ಕೆಲಸ ಆಮೆಗತಿಯಲ್ಲಿ ನಡೆಯುತಿದ್ದು ಒಂದು ಕಿ ಮೀ ರಸ್ತೆಯನ್ನು ಒಂದು ವರ್ಷವಾದರೂ ಕಾಮಗಾರಿ ಪೂರ್ಣಗೊಂಡಿಲ್ಲ ,ಚರಂಡಿ ಕಾಮಗಾರಿ ಅವೈಜ್ಞಾನಿಕವಾಗಿರುವ ಹಿನ್ನಲೆಯಲ್ಲಿ ನೀರು ರಸ್ತೆ ಮೇಲೆ ಹರಿದು ಅಂಗಡಿ ಮನೆಗಳಿ ನುಗ್ಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್