Ripponpete | ಪಟ್ಟಣದ ಹೆಸರಾಂತ ವೈದ್ಯ ಡಾ. ಮಂಜುನಾಥ್ ರಾವ್ (ಕಿರಣ್ ಡಾಕ್ಟರ್) ನಿಧನ
ರಿಪ್ಪನ್ಪೇಟೆ ; ವಿಶ್ರಾಂತ ವೈದ್ಯರೂ ಹಾಗೂ ಜಿ ಎಸ್ ಬಿ ಸಮಾಜದ ಹಿರಿಯರಾದ ಡಾ. ಮಂಜುನಾಥ್ ರಾವ್ ( ಕಿರಣ್ ಡಾಕ್ಟರ್) ಇಂದು ಬೆಳಗ್ಗೆ 3:30 ಕ್ಕೆ ತೀರ್ಥಹಳ್ಳಿಯಲ್ಲಿರುವ ನಿವಾಸದಲ್ಲಿ ದೈವಾಧೀನರಾಗಿದ್ದಾರೆ.
ರಿಪ್ಪನ್ಪೇಟೆಯಲ್ಲಿ ಕಿರಣ್ ಕ್ಲಿನಿಕ್ ಎಂಬ ಹೆಸರಿನ ಚಿಕಿತ್ಸಾ ಕೇಂದ್ರದಲ್ಲಿ ಮೂವತ್ತು ವರ್ಷಕ್ಕೂ ಅಧಿಕ ಕಾಲ ಜನರ ಸೇವೆ ಸಲ್ಲಿಸಿದ್ದರು.ಬಡವರಿಗೆ ಉಚಿತವಾಗಿ ಸೇವೆ ನೀಡುತಿದ್ದರು. ವೈದ್ಯಕೀಯ ವೃತ್ತಿಯಲ್ಲಿ ಗಣನೀಯ ಸೇವೆ ಸಲ್ಲಿಸಿದ್ದ ಮಂಜುನಾಥ್ ರಾವ್ ರವರ ಕ್ಲಿನಿಕ್ ಗೆ ಆ ಕಾಲದಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ರೋಗಿಗಳು ಬರುತಿದ್ದರು.
ತೀರ್ಥಹಳ್ಳಿಯ ಕಿರಣ್ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ. ಗಣೇಶ್ ನಾಯಕ್ ರವರ ತಂದೆ ಡಾ.ಮಂಜುನಾಥ್ ರಾವ್(ಕಿರಣ್ ಡಾಕ್ಟರ್) ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 3:00 ಘಂಟೆಗೆ ತೀರ್ಥಹಳ್ಳಿಯಲ್ಲಿ ನೆರವೇರಲಿದೆ ಎಂದು ಅವರ ಕುಟುಂಬದ ಮೂಲದವರು ತಿಳಿಸಿದ್ದಾರೆ.
ಸಂತಾಪ :
ರಿಪ್ಪನ್ಪೇಟೆ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳ ಜನರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಗಣನೀಯ ಸೇವೆ ಸಲ್ಲಿಸಿದ್ದ ಡಾ. ಮಂಜುನಾಥ್ ರಾವ್ (ಕಿರಣ್ ಡಾಕ್ಟರ್) ರವ ನಿಧನಕ್ಕೆ ಪಟ್ಟಣದ ಸಂಘ ಸಂಸ್ಥೆಗಳು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್