Ripponpete | ಪರಿಷತ್ ಚುನಾವಣೆ ಬಿಜೆಪಿ -ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಆರಗ ಜ್ಞಾನೇಂದ್ರ
ರಿಪ್ಪನ್ಪೇಟೆ;-ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ಜೂನ್ ೩ ರಂದು ನಡೆಯುಲಿರುವ ಚುನಾವಣೆಯಲ್ಲಿ ಮೈತ್ರಿ ಆಭ್ಯರ್ಥಿಗಳಾದ ಡಾ.ಧನಂಜಯ ಸರ್ಜಿ ಮತ್ತು ಎಸ್.ಎಲ್. ಭೋಜೆ ಗೌಡರ ಗೆಲುವು ನಿಶ್ಚಿತ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ರಿಪ್ಪನ್ಪೇಟೆಯಲ್ಲಿ ಮಾಧ್ಯಮದರೊಂದಿಗೆ ಮಾತನಾಡಿ ಮೇಲ್ಮನೆ ಹಿರಿಯ ಆನುಭವಿಗಳ ಸದನ ಆಲ್ಲಿಗೆ ಪ್ರಜ್ಞಾವಂತರ ಹಾಗೂ ಪ್ರಮಾಣಿಕ ಸೇವೆಸಲ್ಲಿಸುವ ಮನೋಭಾವ ಹೊಂದಿರುವವರ ಆಯ್ಕೆ ಇಂದಿನ ಅಗತ್ಯವಾಗಿದೆ ಆ ನಿಟ್ಟಿನಲ್ಲಿ ಪಕ್ಷ ಸಮರ್ಥ ಆಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದು ಪಕ್ಷದ ಕಾರ್ಯಕರ್ತರು ಮತದಾರರ ಮನ ತಲುಪುವಲ್ಲಿ ಸಫಲರಾಗಿದ್ದಾರೆ.ಮೈತ್ರಿ ಆಭ್ಯರ್ಥಿಗಳಾದ ವೈದ್ಯಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಈಗಾಗಲೇ ಮೇಲ್ಮನೆಯಲ್ಲಿ ಸೇವೆ ಸಲ್ಲಿಸಿರುವ ಅನುಭವಿ ರಾಜಕಾರಣಿ ಬೋಜೇಗೌಡರು ಶಿಕ್ಷಕರ ಹಾಗೂ ಉಪನ್ಯಾಸಕರ ಬೇಡಿಕೆಗಳ ಕುರಿತು ಸದನದಲ್ಲಿ ಮಾತನಾಡಿ ಅವರುಗಳ ಅನೇಕ ಬೇಡಿಕೆಗಳನ್ನು ಸರ್ಕಾರದಿಂದ ಅನುಷ್ಠಾನಗೊಳಿಸುವಲ್ಲಿ ಹಾಗೂ ಈಡೇರಿಸುವಲ್ಲಿ ಯಶಸ್ವಿಯಾಗಿದ್ದಾರೆ ಹಾಗೆಯೇ ತಮ್ಮ ಕ್ಷೇತ್ರದಲ್ಲಿನ ಶಾಲಾ ಕಾಲೇಜುಗಳ ಅಭಿವೃದ್ಧಿಗೆ ಅನುದಾನವನ್ನು ನೀಡಿದ್ದಾರೆ.ಈ ಕ್ಷೇತ್ರದ ಮತದಾರರ ಮನಮುಟ್ಟುವಲ್ಲಿ ಸಫಲರಾಗಿದ್ದಾರೆ.
ನಾನು ಈಗಾಗಲೇ ಪ್ರವಾಸ ಮಾಡಿದಡೆಯಲ್ಲಿ ಉತ್ತಮ ವಾತವರಣ ನಿರ್ಮಾಣವಾಗಿದ್ದು ಈ ಆಭ್ಯರ್ಥಿಗಳ ಗೆಲುವು ನಿಶ್ಚಿತವೆಂದರು.
ಇದೇ ಸಂದರ್ಭದಲ್ಲಿ ಸರ್ಕಾರಿ ಪದವಿ ಕಾಲೇಜ್ಗೆ ಭೇಟಿ ನೀಡಿ ಮೈತ್ರಿ ಆಭ್ಯರ್ಥಿಗಳ ಪರ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಸ್ಥಳೀಯ ಪಕ್ಷದ ಮುಖಂಡರು ಕಾರ್ಯಕರ್ತರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್