ರಿಪ್ಪನ್ಪೇಟೆ : ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟಲ್ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ ದೀಪಾ ಎಸ್.ಹೆಬ್ಬಾರ್, ಹೆಚ್.ಎಸ್.ಸುದೀಂದ್ರಹೆಬ್ಬಾರ್ ಮತ್ತು ಸಹೋದರಿಯರು ರಜತ ಉತ್ಸವದ ಗಣಪತಿ ಮೂರ್ತಿಯನ್ನು’ ದೇವಸ್ಥಾನಕ್ಕೆ ಇಂದು ಮೆರವಣಿಗೆಯ ಮೂಲಕ ತರುವುದರೊಂದಿಗೆ ಸಮರ್ಪಿಸಿದರು.
ಚಂಡೆ ವಾದ್ಯಮೇಳದೊಂದಿಗೆ ಶಿವಮೊಗ್ಗ ರಸ್ತೆಯಲ್ಲಿರುವ ಮನೆಯಿಂದ ರಜತ ಉತ್ಸವ ಮೂರ್ತಿಯನ್ನು ಹೆಚ್.ಎಸ್ ಸುದೀಂದ್ರ ಹೆಬ್ಬಾರ್ ಹೊತ್ತು ಮೆರವಣಿಗೆ ಮೂಲಕ ಸಿದ್ದಿವಿನಾಯಕ ದೇವಸ್ಥಾನಕ್ಕೆ ತಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯವರಿಗೆ ಹಸ್ತಾತರಿಸಿದರು. ನಂತರ ಶಿವಮೊಗ್ಗದ ವೇ.ಬ್ರ.ವಸಂತಭಟ್ ಮತ್ತು ದೇವಸ್ಥಾನದ ಪ್ರಧಾನ ಅರ್ಚಕರಾದ ಚಂದ್ರಶೇಖರ್ಭಟ್.ಮತ್ತು ಗುರುರಾಜಭಟ್ ಇವರು ಉತ್ಸವಮೂರ್ತಿಗೆ ಧಾರ್ಮಿಕ ವಿಧಿವಿಧಾನದೊಂದಿಗೆ ಪೂಜಾ ಕೈಂಕರ್ಯ ನೆರವೇರಿಸಿ ಕಲಾತತ್ವವನ್ನು ತುಂಬಿದರು.
ಈ ಸಂದರ್ಭದಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಈಶ್ವರಶಟ್ಟಿ, ಎನ್.ಸತೀಶ್, ಗಣೇಶ್ಕಾಮತ್, ಎಂ.ಡಿ.ಇಂದ್ರಮ್ಮ, ಎಸ್.ಎನ್.ಬಾಲಚಂದ್ರ,ಹೆಚ್.ಎಸ್.ಕಾಮಾಕ್ಷಿ, ಹೆಚ್.ಎಸ್.ಮೀನಾಕ್ಷಿಕಾರಂತ್, ಕುಸುಮಾಬಾಲಚಂದ್ರ,ಪದ್ಮಾಸುರೇಶ್,ನಿವೃತ್ತ ಶಿಕ್ಷಕ ರಾಧಾಕೃಷ್ಣ, ಆರ್ ರಾಘವೇಂದ್ರ,ರಂಜಿತ್, ಮುರುಳೀಧರ ಜೋಯ್ಸ್, ವೈ.ಜೆ.ಕೃಷ್ಣ,ಜಯಲಕ್ಷಿ ಮೋಹನ್, ದೇವಸ್ಥಾನ ಸೇವಾ ಸಮಿತಿಯವರು ಗ್ರಾಮಸ್ಥರು ಹಾಜರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್