Ripponpete | ಹಾಡಹಗಲೇ ವಿನಾಯಕ ವೃತ್ತದಲ್ಲಿ ಬೈಕ್ ಕದ್ದು ಪರಾರಿಯಾದ ಕಳ್ಳ – ಸಿಸಿಟಿವಿ ಯಲ್ಲಿ ಕಳ್ಳತನದ ದೃಶ್ಯ ಸೆರೆ
ರಿಪ್ಪನ್ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿ ನಿಲ್ಲಿಸಿದ್ದ ಬೈಕ್ ನ್ನು ಹಾಡಹಗಲೇ ಕಳ್ಳತನ ಮಾಡಿ ಕಳ್ಳ ಪರಾರಿಯಾದ ಘಟನೆ ಗುರುವಾರ ನಡೆದಿದೆ.
ಹೊಸನಗರ ರಸ್ತೆಯ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬೈಕ್ ನ್ನು ಕಳ್ಳ ಕದ್ದೊಯ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಪಟ್ಟಣದ ಸಮೀಪದ ಬೆನವಳ್ಳಿ ಗ್ರಾಮದ ಪರಶುರಾಮ್ ಎಂಬುವರು ಹೊಸನಗರ ರಸ್ತೆಯಲ್ಲಿರುವ ಅರಳಿಕಟ್ಟೆ ಬಳಿಯಲ್ಲಿ ಬೈಕ್(KA 15 V 8554) ನಿಲ್ಲಿಸಿ ಹೋಗಿದ್ದರು ನಂತರ ಸ್ವಲ್ಪ ಸಮಯದ ನಂತರ ಹಿಂದಿರುಗಿ ಬಂದಾಗ ಬೈಕ್ ಇರಲಿಲ್ಲ ನಂತರ ಎಲ್ಲ ಕಡೆ ಹುಡುಕಾಡಿ ಇಂದು ರಿಪ್ಪನ್ಪೇಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಕೆಲ ಹೊತ್ತು ಗಾಡಿ ಮೇಲೆ ಕುಳಿತುಕೊಳ್ಳುವ ಕಳ್ಳ ಯಾರಾದ್ರೂ ನೋಡ್ತಾರಾ ಅಂತ ನೋಡಿದ್ದಾನೆ. ಬಳಿಕ ಬೈಕ್ ನ್ನು ಚಲಾಯಿಸಿಕೊಂಡು ಪರಾರಿಯಾಗಿದ್ದಾನೆ. ಈಗ ಕಳೆದು ಹೋಗಿರೋ ಬೈಕ್ ಹುಡುಕಿಕೊಡಿ ಎಂದು ಮಾಲೀಕ ರಿಪ್ಪನ್ಪೇಟೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ.
ಹಾಡುಹಗಲೇ ಜನನಿಬಿಡ ಪ್ರದೇಶದಲ್ಲಿ ಬೈಕ್ ಕಳ್ಳತನವಾಗಿರುವುದು ಜನರಲ್ಲಿ ಆತಂಕವನ್ನುಂಟು ಮಾಡಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್