ತೀರ್ಥಹಳ್ಳಿ: ಅಕ್ರಮ ಗೋವುಗಳ ಸಾಕಾಣಿಕೆ ಮಾಡುತಿದ್ದ ಅಡ್ದೇ ಮೇಲೆ ಮಾಳೂರು ಪೊಲೀಸರು ದಾಳಿ ನಡೆಸಿ 23 ಗೋವುಗಳ ರಕ್ಷಣೆ ಮಾಡಿದ್ದಾರೆ.
ಮಂಡಗದ್ದೆಯಲ್ಲಿ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 23 ಗೋವುಗಳನ್ನ ರಕ್ಷಣೆ ಮಾಡಲಾಗಿದ್ದು ಗೋವುಗಳನ್ನು ಏಕಕಾಲದಲ್ಲಿ ಮಂಡಗದ್ದೆಯ ಝಬಿ ಎಂಬುವನ ಕೊಟ್ಟಿಗೆಯಲ್ಲಿದ್ದಾಗಲೇ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪಿಎಸ್ಐ ಶಿವಾನಂದ್ ನೇತ್ರತ್ವದ ತಂಡ 23 ಗೋವುಗಳನ್ನು ರಕ್ಷಣೆ ಮಾಡಿದೆ.
ತೀರ್ಥಹಳ್ಳಿ ತಾಲ್ಲೂಕಿನ ವಿವಿಧ ಹಳ್ಳಿಗಳಿಂದ ಗಂಡುಕರು, ಗೊಡ್ಡು ದನಗಳನ್ನು ಮಠಗಳಿಗೆ ಗೋಶಾಲೆಗೆ ಬಿಡುವುದಾಗಿ ಹೇಳಿ ಮನೆಯವರನ್ನು ನಂಬಿಸಿ, ಗೋವುಗಳನ್ನು ಅಕ್ರಮ ಖಸಾಯಿಖಾನೆಗೆ ಸಾಗಿಸುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಅಲ್ಲಲ್ಲಿ ಸಂಗ್ರಹಿಸಿದ ಗೋವುಗಳನ್ನು ರಾತ್ರೋರಾತ್ರಿ ಒಂದೆಡೆ ಸೇರಿಸಿ ಮಂಡಗದ್ದೆಯ ಜಂಕ್ಷನ್ ಪಾಯಿಂಟ್ ನಿಂದ ಕೌ ಸ್ಲಾಟರ್ ಗೆ ಡೆಲವರಿ ಮಾಡುವ ದೊಡ್ಡ ಜಾಲವೇ ಮಲೆನಾಡಿನಲ್ಲಿ ಸಕ್ರೀಯವಾಗಿದೆ.
ಗೋ ಕಳ್ಳರ ಜಾಲವನ್ನು ಪತ್ತೆಹಚ್ಚಿದ ಮಾಳೂರು ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ದಂಧೆಯ ಕರಾಳ ಮುಖವನ್ನು ಅನಾವರಣಗೊಳಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್