ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ ಕಠಿಣ ಶಿಕ್ಷೆ | Pocso
ಅಪ್ರಾಪ್ತೆಯ ಖಾಸಗಿ ಪೋಟೋವನ್ನು ಸ್ಕ್ರೀನ್ಶಾಟ್ ತೆಗೆದುಕೊಂಡು ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಹೊತ್ತಿದ್ದ ವ್ಯಕ್ತಿಗೆ ಕೋರ್ಟ್ ಐದು ವರ್ಷ ಶಿಕ್ಷೆ ನೀಡಿದೆ.
ನ್ಯಾಯಾಧೀಶರಾದ ಮೋಹನ್ ಜೆ ಎಸ್ ರವರು ದಿನಾಂಕಃ 26-06-2024 ರಂದು ಪ್ರಕರಣದ ಆರೋಪಿ 30 ವರ್ಷದ ಯುವಕನಿಗೆ 5 ವರ್ಷ ಕಠಿಣ ಕಾರಾವಾಸ ಶಿಕ್ಷೆ, ರೂ 2,50,000/- ದಂಡ, ದಂಡ ಕಟ್ಟಲು ವಿಫಲನಾದಲ್ಲಿ 1 ವರ್ಷ ಸಾಧಾ ಕಾರಾವಾಸ ಶಿಕ್ಷೆ ವಿಧಿಸಿ ನೊಂದ ಬಾಲಕಿಗೆ ಪರಿಹಾರವಾಗಿ ದಂಡದ ಮೊತ್ತದಲ್ಲಿ 2,40,000/- ನೀಡುವಂತೆ ಆದೇಶಿಸಿದ್ದಾರೆ.
ಘಟನೆಯ ಹಿನ್ನಲೆ :
2021ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸ್ಥಳವೊಂದರ ನಿವಾಸಿ 30 ವರ್ಷದ ಯುವಕನ 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಖಾಸಗೀ ಚಿತ್ರಗಳನ್ನು ಮೊಬೈಲ್ ನಲ್ಲಿ ಸ್ಕ್ರೀನ್ ಶಾಟ್ ತೆಗೆದುಕೊಂಡಿದ್ದು. ಆ ಬಳಿಕ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ಮಾನ ಹಾನಿ ಮಾಡುವುದಾಗಿ ಬೆದರಿಕೆ ಹಾಕಿದ್ದ. ಈ ಸಂಬಂದ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಜಿಲ್ಲೆಯ ಪೊಲೀಸ್ ಸ್ಟೇಷನ್ ಒಂದರಲ್ಲಿ ಕಲಂ 354 (A), 354 (D), 376 (2) (n), 509 ಐಪಿಸಿ ಮತ್ತು ಪೋಕ್ಸೋ ಹಾಗೂ ಐಟಿ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಲಾಗಿತ್ತು.
ಅಂದಿನ ಠಾಣೆಯ ತನಿಖಾಧಿಕಾರಿ ಈ ಕುರಿತಾಗಿ ತನಿಖೆ ನಡೆಸಿ ಘನ ನ್ಯಾಯಾಲಯಕ್ಕೆ ಆರೋಪಿತನ ವಿರುದ್ಧ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ FTSC-2 ಶಿವಮೊಗ್ಗದಲ್ಲಿ ನಡೆದಿತ್ತು. ಸರ್ಕಾರದ ಪರವಾಗಿ ಶ್ರೀಧರ್ ಹೆಚ್ ಆರ್, ಸರ್ಕಾರಿ ಅಭಿಯೋಜಕರವರು ವಾದ ಮಂಡಿಸಿದ್ದರು. ಇದೀಗ ತೀರ್ಪು ಹೊರಬಿದ್ದಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್