ಆಧ್ಯಾತ್ಮಿಕ ಜ್ಞಾನಪ್ರಭೆ ಜೀವನ ಮೌಲ್ಯಗಳನ್ನು ಸಂವರ್ಧಿಸಲಿ – ಹೊಂಬುಜ ಶ್ರೀಗಳು | hombuja

ಆಧ್ಯಾತ್ಮಿಕ ಜ್ಞಾನಪ್ರಭೆ ಜೀವನ ಮೌಲ್ಯಗಳನ್ನು ಸಂವರ್ಧಿಸಲಿ – ಹೊಂಬುಜ ಶ್ರೀಗಳು | hombuja


ಹೊಂಬುಜ : ಜೈನ ಪರಂಪರೆಯಲ್ಲಿ ಶ್ರುತಪಂಚಮಿ ಪರ್ವವು ಜೈನ ಧರ್ಮದ ಆಗಮ ಗ್ರಂಥಗಳ ಮಹತ್ವವನ್ನು ಸಾರುತ್ತದೆ. ಪ್ರಾಚೀನ ಜೈನಾಚಾರ ಗ್ರಂಥಗಳು ಆಧ್ಯಾತ್ಮಕ ಚಿಂತನೆಗೆ ರಚಿಸಲ್ಪಟ್ಟಿವೆ. ಶ್ರುತ ಎಂದರೆ ಕಿವಿಯಿಂದ ಕೇಳಿದ ದಿವ್ಯಧ್ವನಿಯ ಉಪದೇಶಗಳು ಕೃತಿ ರೂಪದಲ್ಲಿ ಧರ್ಮ ಆಚರಣೆಯ ದಾರಿದೀಪವಾಗಿ ಇಂದು ಧಾರ್ಮಿಕ ಮನೋಧರ್ಮ ಬೆಳೆಸಿಕೊಳ್ಳಲು ಪೂರಕವಾಗಿವೆ ಎಂದು ಹೊಂಬುಜ ಶ್ರೀಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು ಶ್ರುತಪಂಚಮಿ ಪೂಜಾ ವಿಧಿಗಳ ಬಳಿಕ ಪ್ರವಚನದಲ್ಲಿ ತಿಳಿಸಿದರು.

ಲಿಪಿ ರೂಪದಲ್ಲಿ ಜೈನ ಧರ್ಮ ಗ್ರಂಥಗಳು ಧವಳಾ-ಜಯಧವಳಾ-ಮಹಾಧವಳಾ ಅಪೂರ್ವ ಗ್ರಂಥಗಳಾಗಿದ್ದು, ಸಾಹಿತ್ಯ-ಭೂಗೋಳ-ಖಗೋಳ-ಜ್ಯೋತಿಷ್ಯ-ವಿಜ್ಞಾನ-ಗಣಿತ-ಚಿತ್ರಕಲೆ-ವೈದ್ಯ ವಿಜ್ಞಾನಗಳನ್ನು ಜ್ಞಾನಾಸಕ್ತರಿಗೆ ಪ್ರಕಟಿಸಲ್ಪಟ್ಟಿದೆ. ಜ್ಯೇಷ್ಠ ಶುಕ್ಲ ಪಂಚಮಿಯAದು ಲಿಪಿಬದ್ಧ ಜೈನಧರ್ಮ ಗ್ರಂಥಗಳು ಲೋಕಾರ್ಪಣೆಗೊಂಡ ಸ್ಮರಣೆಗಾಗಿ ಜಿನವಾಣಿ ಶ್ರೀ ಸರಸ್ವತಿ ದೇವಿ ಆರಾಧನೆ, ಶ್ರುತಸ್ಕಂದ ಪೂಜೆ ನೆರವೇರಿಸುವ ಪೂರ್ವ ಪರಂಪರೆಯ ಐತಿಹ್ಯವನ್ನು ಶ್ರೀಗಳು ವಿವರಿಸಿದರು. ಪ್ರತಿಯೋರ್ವರು ಸ್ವಾಧ್ಯಾಯ ಮಾಡುವುದರಿಂದ ಜ್ಞಾನ ಸಂಪತ್ತನ್ನು ವೃದ್ಧಿಸಿ ಜೀವನ ಮೌಲ್ಯಗಳನ್ನು ಧರ್ಮಪ್ರಜ್ಞೆಯಿಂದ ಸಂವರ್ಧಿಸಬೇಕು ಎಂದು ಹರಸಿದರು.


ಧರಸೇನ ಆಚಾರ್ಯರು ಭೂತಬಲಿ ಮತ್ತು ಪುಷ್ಪದಂತ ಮುನಿಶ್ರೀ ಶಿಷ್ಯರಿಗೆ ಜ್ಞಾನಾವೃತವನ್ನು ದಾರೆಎರೆದರು. ಹೀಗೆ ದ್ವಾದಶಾಂಗ ಧರ್ಮಗ್ರಂಥ ರಚನೆಯಾಯಿತು. ಆ ಸುದಿನವೇ ಜ್ಯೇಷ್ಠ ಶುಕ್ಲ ಪಂಚಮಿ ಆಗಿದ್ದರಿಂದ ಇಂದಿಗೂ ‘ಶ್ರುತಪಂಚಮಿ’ ಪರ್ವ ಆಚರಣೆಯಲ್ಲಿದೆ. ಷಟ್‌ಖಂಡಾಗಮ ಸೂತ್ರಗಳು ಆತ್ಮನ ಕರ್ಮಕ್ಷಯಕ್ಕೆ ಪೂರಕವಾಗಿದೆ ಎಂದರು.

ಅತಿಶಯ ಶ್ರೀ ಕ್ಷೇತ್ರದಲ್ಲಿ ಶ್ರೀ ಸರಸ್ವತಿ ದೇವಿ ಆರಾಧನೆ, ಜಿನವಾಣಿ-ಶ್ರುತಸ್ಕಂದ ಪೂಜೆ, ಧವಳತ್ರಯ ಗ್ರಂಥಗಳ ಪಲ್ಲಕ್ಕಿ ಉತ್ಸವ ಶ್ರೀ ಪಾರ್ಶ್ವನಾಥ ಸ್ವಾಮಿ, ಶ್ರೀ ಪದ್ಮಾವತಿ ದೇವಿ ವಿಶೇಷ ಅಲಂಕಾರ ಮಹಾಪೂಜೆಗಳು ಆರ್ಯಿಕಾಶ್ರೀ ಶಿವಮತಿ ಮಾತಾಜಿಯವರ ಹಾಗೂ ಸ್ವಸ್ತಿಶ್ರೀಗಳ ಸಾನಿಧ್ಯದಲ್ಲಿ ನೆರವೇರಿತು.

ಹುಂಚ ಜೈನ ಸಮಾಜ, ಪದ್ಮಾವತಿ ಮಹಿಳಾ ಸಮಾಜ, ಊರ-ಪರವೂರ ಭಕ್ತಾದಿಗಳು ಶ್ರುತಪಂಚಮಿ ಪರ್ವದಲ್ಲಿ ಪಾಲ್ಗೊಂಡರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ನೀರಿನಲ್ಲಿ ಅಡಗಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನ ; ಸಿನಿಮೀಯ ರೀತಿಯಲ್ಲಿ ರೌಡಿಶೀಟರ್‌ನನ್ನು ಬಂಧಿಸಿದ ಪೊಲೀಸರು

ನೀರಿನಲ್ಲಿ ಅಡಗಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನ ; ಸಿನಿಮೀಯ ರೀತಿಯಲ್ಲಿ ರೌಡಿಶೀಟರ್‌ನನ್ನು ಬಂಧಿಸಿದ ಪೊಲೀಸರು Bhadravathi police dramatically…

9 hours ago

ಅಜಾಗರೂಕ ಚಾಲನೆಯಿಂದ ಕೆರೆಗೆ ನುಗ್ಗಿದ ಲಾರಿ! ತಪ್ಪಿದ ಭಾರಿ ದುರಂತ

ಅಜಾಗರೂಕ ಚಾಲನೆಯಿಂದ ಕೆರೆಗೆ ನುಗ್ಗಿದ ಲಾರಿ! ತಪ್ಪಿದ ಭಾರಿ ದುರಂತ A container lorry allegedly driven recklessly under…

9 hours ago

ರಿಪ್ಪನ್‌ಪೇಟೆ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಅನಾಹುತ; ಡಿಸ್ಕಸ್ ತಲೆಗೆ ಬಿದ್ದು ಶಿಕ್ಷಕ ಗಂಭೀರ ಗಾಯ

ರಿಪ್ಪನ್‌ಪೇಟೆ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಅನಾಹುತ; ಡಿಸ್ಕಸ್ ತಲೆಗೆ ಬಿದ್ದು ಶಿಕ್ಷಕ ಗಂಭೀರ ಗಾಯ A physical education teacher…

14 hours ago

ನೆಲ್ಲಿಬೀಡು ಟಿಪ್ಪರ್ – ಬೈಕ್ ಅಪಘಾತ: ಮಗಳ ಸಾವಿನ ಬಳಿಕ ಚಿಕಿತ್ಸೆ ಫಲಿಸದೆ ತಂದೆಯೂ ಮೃತ್ಯು

ನೆಲ್ಲಿಬೀಡು ಟಿಪ್ಪರ್ – ಬೈಕ್ ಅಪಘಾತ: ಮಗಳ ಸಾವಿನ ಬಳಿಕ ಚಿಕಿತ್ಸೆ ಫಲಿಸದೆ ತಂದೆಯೂ ಮೃತ್ಯು A tragic tipper-bike…

16 hours ago

ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್

ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್ A Shivamogga court fined a father ₹26,500…

17 hours ago

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…

1 day ago