ಇಬ್ಬರು ಒಂದೇ ದಿನ ಹುಟ್ಟಿ ಒಟ್ಟಿಗೆ ಮಸಣ ಸೇರಿದ ದಂಪತಿಗಳ ದುರಂತ ಕಥೆ | uttharakhand
ಉತ್ತರಾಖಂಡದ ಎತ್ತರದ ಸ್ಥಳ ಮೈಯಾಳಿಗೆ ಚಾರಣಕ್ಕೆ ತೆರಳಿದ್ದ ಕರ್ನಾಟಕದ 19 ಜನರ ಸದಸ್ಯರ ಪೈಕಿ 9ಮಂದಿ ಹವಾಮಾನ ವೈಪರೀತ್ಯದಿಂದಾಗಿ ಮೃತಪಟ್ಟಿದ್ದರು. ಮೃತದೇಹಗಳನ್ನ ಉತ್ತರಾಖಂಡದಿಂದ ಏರ್ಲಿಫ್ಟ್ ಮಾಡಲಾಗಿದ್ದು, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕುಟುಂದವರಿಗೆ ಹಸ್ತಾಂತರ ಮಾಡಲಾಗಿದೆ.
ಮೃತಪಟ್ಟವರ ಪೈಕಿ ಹುಬ್ಬಳ್ಳಿ ಮೂಲದ ದಂಪತಿ ಕೂಡ ಇದ್ದು, ಇವರ ಸಾವು ಕುಟುಂಬಸ್ಥರು ಹಾಗೂ ಆಪ್ತರನ್ನು ದುಃಖದ ಮಡುವಿಗೆ ತಳ್ಳಿದೆ.
ಹುಬ್ಬಳ್ಳಿಯ ಹುಬ್ಬಳ್ಳಿಯ ವಿನಾಯಕ ಮುಂಗರವಾಡಿ ಹಾಗೂ ಸುಜಾತಾ ಮುಂಗರವಾಡಿ ಮೃತ ದುರ್ದೈವಿಗಳು. ವಿಶೇಷವೆಂದರೆ, ಇವರಿಬ್ಬರ ಹುಟ್ಟಿದ ದಿನಾಂಕವೂ ಒಂದೇ ಆಗಿದ್ದು, ವಿನಾಯಕ ಮುಂಗರವಾಡಿ (1969-10-03) ಹಾಗೂ ಸುಜಾತಾ ಮುಂಗರವಾಡಿ (1972-10-03) ಇಬ್ಬರೂ ಒಂದೇ ದಿನ ಮೃತಪಟ್ಟಿದ್ದು ಕಾಕತಾಳೀಯವಾಗಿದೆ.
ಸುಜಾತ ಮತ್ತು ವಿನಾಯಕ ಮುಂಗರವಾಡಿ ಸಾವನ್ನಪ್ಪಿದ ದಂಪತಿಗಳಾಗಿದ್ದು, ಇಬ್ಬರು ಹುಬ್ಬಳ್ಳಿ ಬಿವಿಬಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ಮಾಡಿದ್ದರು. ಸದ್ಯ ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು. ಮೃತ ದಂಪತಿಗಳು ಹುಟ್ಟಿದ್ದು ಒಂದೇ ದಿನಾಂಕದಂದು, ಮೃತಪಟ್ಟಿದ್ದು, ಒಂದೇ ದಿನ ಆಗಿದೆ. ದಂಪತಿಗಳ ಸಾವು ಇವರ ಕುಟುಂಬಕ್ಕೆ ಬರಸಿಡಿಲು ಬಡಿದಂತೆ ಆಗಿದೆ.
ಉತ್ತರ ಕರ್ನಾಟಕ ಸ್ನೇಹಲೋಕ ಟ್ರಸ್ಟ್ ಎಂಬ ಸಂಸ್ಥೆ ಹುಟ್ಟು ಹಾಕಿದ್ದ ವಿನಾಯಕ ಮುಂಗರವಾಡಿ, ಸುಜಾತಾ ಮುಂಗರವಾಡಿ ದಂಪತಿ ಸಮಾಜ ಸೇವೆಯಲ್ಲಿಯೂ ಮುಂದಿದ್ದರು. ಪ್ರತಿ ವರ್ಷ ಚಾರಣಕ್ಕೆ ಹೋಗುತ್ತಿದ್ದರು. ಈ ಬಾರಿ ಮಕ್ಕಳನ್ನು ಕೂಡ ಚಾರಣಕ್ಕೆ ಕರೆದೊಯ್ಯಲು ದಂಪತಿ ಯೋಜನೆ ಹಾಕಿಕೊಂಡಿದ್ದರು. ಆದರೆ, ಅವರಿಗೆ ಕೇವಲ 2 ಟಿಕೆಟ್ ಮಾತ್ರ ದೊರೆತಿತ್ತು. ಹೀಗಾಗಿ ದಂಪತಿ ಮಾತ್ರ ಚಾರಣಕ್ಕೆ ಹೋಗಿದ್ದರು. ದಂಪತಿಯ ಸಾವಿನ ಸುದ್ದಿ ಕುಟುಂಬ್ಕಕೆ ಸಿಡಿಲಿ ಬಡಿದಂತಾಗಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್