ಗರ್ತಿಕೆರೆ ಪ್ರೌಡಶಾಲೆಗೆ SSLC ಪರೀಕ್ಷೆಯಲ್ಲಿ 100% ಫಲಿತಾಂಶ – ನಾಗರೀಕರಿಂದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಸನ್ಮಾನ
ರಿಪ್ಪನ್ಪೇಟೆ : ಗರ್ತಿಕೆರೆ ಗ್ರಾಮದಲ್ಲಿ 1986 ನೇ ಇಸವಿಯಲ್ಲಿ ಪ್ರಾರಂಭವಾದ ಸರ್ಕಾರಿ ಪ್ರೌಢಶಾಲೆಯಲ್ಲಿ ಈ ಬಾರಿ 100% ಫಲಿತಾಂಶ ಬಂದಿರುವ ಹಿನ್ನಲೆಯಲ್ಲಿ ನಾಗರೀಕ ಸಮಿತಿ ವತಿಯಿಂದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರುಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಗರ್ತಿಕೆರೆ ಪಟ್ಟಣದ ನಾಗರೀಕ ಸಮಿತಿ ವತಿಯಿಂದ ಗ್ರಾಪಂ ಮಾಜಿ ಅಧ್ಯಕ್ಷ ಬಶೀರ್ ಅಹಮದ್ ರವರ ನೇತೃತ್ವದಲ್ಲಿ ಸರ್ಕಾರಿ ಪ್ರೌಢಶಾಲೆಗೆ SSLC ಪರೀಕ್ಷೆಯಲ್ಲಿ 100% ಫಲಿತಾಂಶ ಬಂದಿರುವ ಹಿನ್ನಲೆಯಲ್ಲಿ ಶಾಲೆಯ ಶಿಕ್ಷಕರುಗಳಿಗೆ ಪೌರ ಸನ್ಮಾನ ಹಾಗೂ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 17 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂಧರ್ಭದಲ್ಲಿ ಮಾತನಾಡಿದ ಅಮೃತ ಗ್ರಾಪಂ ಮಾಜಿ ಅಧ್ಯಕ್ಷ ಬಶೀರ್ ಅಹಮದ್ 1986 ನೇ ಇಸವಿಯಲ್ಲಿ ಪ್ರಾರಂಭವಾದ ಈ ಶಾಲೆಯಲ್ಲಿ ಹಲವಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಿ ಜೀವನ ಕಟ್ಟಿಕೊಂಡಿದ್ದಾರೆ.ಈ ಶಾಲೆಯ ಬಗ್ಗೆ ಗರ್ತಿಕೆರೆ ವ್ಯಾಪ್ತಿಯ ಸಾರ್ವಜನಿಕರಿ ವಿಶೇಷವಾದ ಗೌರವವಿದೆ ಈ ಶಾಲೆಯಲ್ಲಿರು ಅತ್ಯುತ್ತಮ ಭೋಧಕ ವರ್ಗದಿಂದ ಈ ಬಾರು ನೂರಕ್ಕೆ ನೂರು ಫಲಿತಾಂಶ ಬಂದಿರುವುದು ಸಂತಸ ತಂದಿದೆ ಆ ಹಿನ್ನಲೆಯಲ್ಲಿ ಸಾರ್ವಜನಿಕರೆಲ್ಲಾ ಸೇರಿ ಈ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದರು.
ಈ ಸಂಧರ್ಭದಲ್ಲಿ ಜಿಪಂ ಮಾಜಿ ಸದಸ್ಯ ಬಂಡಿ ರಾಮಚಂದ್ರ, ಗ್ರಾಪಂ ಅಧ್ಯಕ್ಷ ವಿಶ್ವನಾಥ್ , ಸಿಡಿಸಿ ಉಪಾಧ್ಯಕ್ಷ ಸೋಮಶೇಖರ್ ,ಎಸ್ ಡಿಎಂಸಿ ಅಧ್ಯಕ್ಷ ನಾಗೇಶ್ ,ಪ್ರಮುಖರಾದ ಹುಗುಡಿ ವರ್ತೇಶ್ ಹಾಗೂ ಇನ್ನಿತರರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್