ಗ್ರಾಹಕರ ಸೋಗಿನಲ್ಲಿ ಚಿನ್ನದಂಗಡಿಗೆ ಬಂದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು
ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ಬಂದು ₹3.51 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಶಿವಮೊಗ್ಗ ನಗರದ ಗಾಂಧಿಬಜಾರ್ನ ತಿರುಪಳಯ್ಯನ ಕೇರಿಯ ಸಂಪತ್ ಜ್ಯುವೆಲರಿ ಶಾಪ್ನಲ್ಲಿ ನಡೆದಿದೆ.
ಉಂಗುರ ಹಾಗೂ ಬೆಳ್ಳಿ ದೀಪ ಖರೀದಿಯ ನೆಪದಲ್ಲಿ ಜ್ಯುವೆಲ್ಲರಿ ಶಾಪ್ಗೆ ಬಂದಿದ್ದ ಮೂವರು ಮಹಿಳೆಯರು ಹಾಗೂ ಒಬ್ಬ ಪುರುಷ ಅಂಗಡಿಯವರ ಕಣ್ತಪ್ಪಿಸಿ ಒಡವೆಗಳ ಬಾಕ್ಸ್ ದೋಚಿದ್ದಾರೆ.
ಅಂಗಡಿಗೆ ಬಂದವರಲ್ಲಿ ಇಬ್ಬರು ಯುವತಿಯರು ಮದುವೆಗೆ ಉಡುಗೊರೆ ಕೊಡಲು ಬಂಗಾರದ ಉಂಗುರ ತೋರಿಸುವಂತೆ ಕೇಳಿದ್ದಾರೆ. ಆಗ ಅಂಗಡಿ ಮಾಲೀಕರು ಡಿಸ್ಪ್ಲೇ ಬಾಕ್ಸ್ನಲ್ಲಿದ್ದ ಉಂಗುರ ತೋರಿಸಿದ್ದಾರೆ. ಅದಕ್ಕಿಂತ ಕಡಿಮೆ ತೂಕದ ಉಂಗುರ ತೋರಿಸಲು ಕೇಳಿದ್ದಾರೆ. ಆಗ ಮಾಲೀಕರು ಲಾಕರ್ ರೂಂಗೆ ಹೋಗಿ ಬೇರೆ ಉಂಗುರ ತಂದು ತೋರಿಸಿದಾಗ ಇದು ಬೇಕಿದೆ. ಮನೆಯವರನ್ನು ಕರೆದುಕೊಂಡು ಬಂದು ಖರೀದಿಸುತ್ತೇನೆ ಎಂದು ಹೇಳಿ ಹೊರಟು ಹೋಗಿದ್ದಾರೆ.
ಆ ತಂಡದಲ್ಲಿದ್ದ ಪುರುಷ ಹಾಗೂ ಮಹಿಳೆ ಕಡಿಮೆ ಬೆಲೆಯ ಬೆಳ್ಳಿ ದೀಪ ತೋರಿಸಿ ಎಂದು ಹೇಳಿ ನಂತರ ಬರುತ್ತೇವೆ ಎಂದು ಅವರೂ ವಾಪಸ್ ಹೋಗಿದ್ದಾರೆ. ಡಿಸ್ಪ್ಲೇ ಬಾಕ್ಸ್ನಲ್ಲಿದ್ದ ಉಂಗುರ ಕಾಣದೇ ಇದ್ದಾಗ ಸಿ.ಸಿ ಟಿವಿ ಕ್ಯಾಮೆರಾ ಪರಿಶೀಲಿಸಿದ್ದು, ಆಗ ಕಳ್ಳತನದ ಸಂಗತಿ ಗೊತ್ತಾಗಿದೆ. ಅಂಗಡಿ ಮಾಲೀಕರು ಲಾಕರ್ ರೂಂಗೆ ಹೋದಾಗ ಚಿನ್ನದ ಒಡವೆಗಳಿದ್ದ ಪ್ಲಾಸ್ಟಿಕ್ ಬಾಕ್ಸ್ ನ್ನು ಯುವತಿ ಒಳ ಉಡುಪಿನಲ್ಲಿ ಹಾಕಿಕೊಂಡಿರುವುದು ಕಂಡುಬಂದಿದೆ. ಈ ಬಗ್ಗೆ ಅಂಗಡಿ ಮಾಲೀಕ ಬಿ.ಹರ್ಷ ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪ್ಲಾಸ್ಟಿಕ್ ಒಡವೆಗಳ ಬಾಕ್ಸ್ನಲ್ಲಿದ್ದ ₹84 ಸಾವಿರ ಬೆಲೆಯ 16 ಗ್ರಾಂ ತೂಕದ ಮಾಂಟಿಕಾ, ₹ 73 ಸಾವಿರ ಮೌಲ್ಯದ 14 ಗ್ರಾಂ ತೂಕದ 10 ಲಕ್ಷ್ಮಿ ಕಾಸುಗಳು, ₹1.10 ಲಕ್ಷ ಮೌಲ್ಯದ 9 ಚಿನ್ನದ ತಾಳಿಗಳು, ₹63 ಸಾವಿರ ಬೆಲೆಯ 7 ಜೊತೆ ಬುಗಡಿ, ₹21 ಸಾವಿರ ಬೆಲೆಯ ಮೂಗುಬೊಟ್ಟುಗಳು ಸೇರಿದಂತೆ ₹3,51 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
Leave a Reply