ಜಾತಿ ಪ್ರಮಾಣ ಪತ್ರ ನೀಡಲು ವಿಳಂಬ – ತಹಶೀಲ್ದಾರ್ ಕಛೇರಿ ಮುಂದೆಯೇ ಧರಣಿ ಕುಳಿತ ಶಾಸಕ ಆರಗ ಜ್ಞಾನೇಂದ್ರ | Thirthahalli

ಜಾತಿ ಪ್ರಮಾಣ ಪತ್ರ ನೀಡಲು ವಿಳಂಬ – ತಹಶೀಲ್ದಾರ್ ಕಛೇರಿ ಮುಂದೆಯೇ ಧರಣಿ ಕುಳಿತ ಶಾಸಕ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ : ಕಳೆದ ಆರು ತಿಂಗಳಿಂದ ಸರಿಯಾಗಿ ಜಾತಿ ಪ್ರಮಾಣ ಪತ್ರವನ್ನು ಕೊಡದೇ ಅಲೆದಾಡಿಸುತ್ತಿದ್ದ ಅಧಿಕಾರಿಗಳಿಗಾಗಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಅರಗ ಜ್ಞಾನೇಂದ್ರ ತೀರ್ಥಹಳ್ಳಿ ತಹಶೀಲ್ದಾರ್ ಕಚೇರಿ ಬಾಗಿಲಲ್ಲಿ ಕುಳಿತು ಪ್ರತಿಭಟನೆ ಮಾಡಿದ್ದಾರೆ.

ಈ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಹಶೀಲ್ದಾರ್ ಕಚೇರಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.ತೀರ್ಥಹಳ್ಳಿ ತಾಲೂಕು ವ್ಯಾಪ್ತಿಯ ಸಾರ್ವಜನಿಕರು ಜಾತಿ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದರೆ, ಅವರಿಗೆ ಪ್ರಮಾಣ ಪತ್ರವನ್ನು ನೀಡದೇ ನಿರಂತರವಾಗಿ 3 ತಿಂಗಳಿಂದ 6 ತಿಂಗಳವರೆಗೆ ಅಲೆದಾಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ತೆರಳಿ ಅರಗ ಜ್ಞಾನೇಂದ್ರ ಅವರಿಗೆ ಖುದ್ದಾಗಿ ದೂರು ನೀಡಿದ್ದಾರೆ. ಈ ಬಗ್ಗೆ ಶಾಸಕರು ಹಲವು ಬಾರಿ ಕೆಲಸ ಸರಿಯಾಗಿ ನಿರ್ವಹಿಸುವಂತೆ ಫೋನ್ ಮೂಲಕ ಸೂಚನೆಯನ್ನೂ ನೀಡಿದ್ದಾರೆ. ಇದಕ್ಕೂ ಬಗ್ಗದ ಹಿನ್ನೆಲೆಯಲ್ಲಿ ಶಾಸಕ ಅರಗ ಜ್ಞಾನೇಂದ್ರ ಅವರೇ ಗುರುವಾರ ಬೆಳಗ್ಗೆ ಕಚೇರಿ ಬಾಗಿಲು ತೆರೆಯುವ ಮುನ್ನವೇ ತಹಸೀಲ್ದಾರ್ ಕಚೇರಿ ಬಾಗಿಲ ಬಳಿ ಬಂದು ಸಿಬ್ಬಂದಿಗಾಗಿ ಕಾಯುತ್ತಾ ಕುಳಿತಿದ್ದಾರೆ.


ಆಶಾ ಕಾರ್ಯಕರ್ತೆಯೊಬ್ಬರು ಇಂಗ್ಲೀಷ್‌ನ ಜಾತಿ ಪ್ರಮಾಣಪತ್ರಕ್ಕಾಗಿ ಕಳೆದ ಆರು ತಿಂಗಳಿಂದ ತಾಲೂಕು ಕಚೇರಿಗೆ ಅಲೆದಾಡುತ್ತಿದ್ದಾರೆ. ಆದರೂ ಅವರಿಗೆ ನಿರಂತರವಾಗಿ ಒಂದಲ್ಲಾ ಒಂದು ನಪವನ್ನು ಹೇಳುತ್ತಾ ಜಾತಿ ಪ್ರಮಾಣ ಪತ್ರವನ್ನು ನೀವು ಕೊಟ್ಟಿಲ್ಲ. ನೀನು ಕಚೇರಿ ಕೆಲಸಕ್ಕೆ ಬರುತ್ತೀಯಾ.? ಇಲ್ಲ ಮಹಿಳೆಯರಿಗೆ ಕಿರಿಕಿರಿ ಮಾಡಲು ಬರುತ್ತೀಯಾ? ನೀನು ಕೆಲಸಕ್ಕೆ ಬರುವುದು ಬೇಡ, ಸುಮ್ಮನೆ ಮನೆಗೆ ವಾಪಸ್ ಹೋಗು ಎಂದು ಗದರಿಸಿದ್ದಾರೆ. ಜೊತೆಗೆ, ಮಧ್ಯವರ್ತಿಗಳ ಕೆಲಸ ಸಲೀಸಾಗಿ ಆಗುತ್ತಿದೆ. ಜನರ ಕೆಲಸ ಆಗುತ್ತಿಲ್ಲ. ಯಾಕೆ ನಿನಗೆ ಸರ್ಕಾರ ಸಂಬಳ ಕೊಡಲ್ವಾ? ನಿಮ್ಮ ಕೆಟ್ಟ ಕೆಲಸದಿಂದ ಜನರ ಬಳಿ ನಾನು ಮಾತು ಕೇಳುವಂತಾಗಿದೆ’ ಎಂದು ಆರಗ ಜ್ಞಾನೇಂದ್ರ ಆಕ್ರೋಶ ಹೊರಹಾಕಿದರು.

ತಹಸಿಲ್ದಾರ್ ರಜೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮೊಬೈಲ್ ಕರೆ ಮಾಡಿದ ಶಾಸಕ ಆರಗ ಜ್ಞಾನೇಂದ್ರ , ನಾನು ಇಲ್ಲಿಂದ ಎದ್ದು ಹೋಗುವುದಿಲ್ಲ. ತಾಲೂಕ ಕಚೇರಿಯ ಕೆಲವು ಸಿಬ್ಬಂದಿಯಿಂದ ಸಾರ್ವಜನಿಕರಿಗೆ ತೀವ್ರ ಕಿರಿಕಿರಿ ಆಗುತ್ತಿದೆ. ಕ್ರಮ ಕೈಗೊಳ್ಳದಿದ್ದರೆ ಇಲ್ಲಿಂದ ಎದ್ದು ಹೋಗಲ್ಲ ಎಂದು ತಹಶೀಲ್ದಾರ್‌ ಕಚೇರಿ ಬಾಗಿಲಲ್ಲಿ ಚೇರು ಹಾಕಿ ಕುಳಿತು ಪ್ರತಿಭಟನೆ ಮಾಡಿದರು. ಇದೇ ತಾಲೂಕು ಕಚೇರಿ ಸಿಬ್ಬಂದಿಯ ವರ್ತನೆ ಮತ್ತು ಆಡಳಿತ ಸುಧಾರಣೆ ಮಾಡುವಂತೆ ಜಿಲ್ಲಾಧಿಕಾರಿಗೆ ಆಗ್ರಹಿಸಿದರು.

ಕೆಲ ಹೊತ್ತಿನಲ್ಲಿ ತಹಶೀಲ್ದಾರ್ ಕಚೇರಿಯಲ್ಲಿ ಆಗುತ್ತಿದ್ದ ಸಿಬ್ಬಂದಿ ನಿರ್ಲಕ್ಷ್ಯ ಹಾಗೂ ಸಾರ್ವಜನಿಕರಿಗೆ ಆಗುತ್ತಿದ್ದ ತೊಂದರೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ನಂತರ ಶಾಸಕ ಆರಗ ಜ್ಞಾನೇಂದ್ರ ಅವರಿಗೆ ವಾಪಸ್ ಕರೆ ಮಾಡಿ ಇಂದು ಸಂಜೆಯೊಳಗೆ ಇಂಗ್ಲೀಷ್‌ ಭಾಷೆಯಲ್ಲಿ ಜಾತಿ ಪ್ರಮಾಣಪತ್ರ ನೀಡಲಾಗುತ್ತದೆ. ಕಚೇರಿ ಸಿಬ್ಬಂದಿ ವರ್ತನೆ ಕುರಿತು ಸಮಗ್ರ ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳುತ್ತೇನೆ. ನೀವು ಕಚೇರಿ ಬಾಗಿಲಲ್ಲಿ ಕುಳಿತರೆ ಕಂದಾಯ ಇಲಾಖೆ ಆಡಳಿತಕ್ಕೆ ಮುಜುಗರ ಆಗಲಿದೆ ಎಂದು ಮನವಿ ಮಾಡಿದರು. ಇದರಿಂದ ಸಮಾಧಾನಗೊಂಡ ಶಾಸಕ ಆರಗ ಜ್ಞಾನೇಂದ್ರ ಪ್ರತಿಭಟನೆ ಕೈ ಬಿಟ್ಟರು. ನಂತರ ಸಬ್‌ ರಿಜಿಸ್ಟ್ರಾರ್‌ ಕಚೇರಿ, ಕಸಬಾ ನಾಡಕಚೇರಿಗೂ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಾರ್ವಜನಿಕರ ಕೆಲಸಗಳಿಗೆ ಕಿರಿಕಿರಿ ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

4 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

23 hours ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

1 day ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

2 days ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

2 days ago