ಟಿಟಿ ಅಪಘಾತದಲ್ಲಿ ಮೃತಪಟ್ಟವರ ಮನೆಗಳಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿ | HDK

ಟಿಟಿ ಅಪಘಾತದಲ್ಲಿ ಮೃತಪಟ್ಟವರ ಮನೆಗಳಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿ | HDK

ಹಾವೇರಿಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸುವ ಜತೆಗೆ ಉತ್ತಮ ಜೀವನ ನಡೆಸಲು ಸಹಕರಿಸುತ್ತೇನೆ ಎಂದು ಕೇಂದ್ರ ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಎಮ್ಮೆಹಟ್ಟಿ ಗ್ರಾಮದಲ್ಲಿ ಮೃತರ ಮನೆಗಳಿಗೆ ಭಾನುವಾರ ಭೇಟಿ ನೀಡಿ ಸಾಂತ್ವನ ಹೇಳಿದರು. ಅಪಘಾತದಲ್ಲಿ ಮೃತ ಪಟ್ಟ ಶರಣಪ್ಪ ನವರ ಮಗ ಅರುಣ್ ರವರಿಗೆ 3 ತಿಂಗಳ ಹಸುಗೂಸು ಇದ್ದು, ಪತ್ನಿಗೆ ಸರ್ಕಾರಿ ಕೆಲಸ. ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪರಶುರಾಮ್ ಮಕ್ಕಳಿಗೆ ವಿದ್ಯಾಭ್ಯಾಸದ ಜತೆಗೆ ಸ್ವಂತ ಮನೆಯನ್ನು ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದರು.

ಆಶಾ ಕಾರ್ಯಕರ್ತೆ ವಿಶಾಲಾಕ್ಷಮ್ಮನ ಮನೆಯಲ್ಲಿ ಬದುಕುಳಿದಿರುವ ಅಂಗವಿಕಲೆ ಅರ್ಪಿತಾಳಿಗೆ ಹೆಚ್ಚಿನ ಕಾಳಜಿಯ ಅವಶ್ಯಕತೆ ಇದೆ. ಅವಳು ಬದುಕಿರುವ ವರಗೂ ಆಕೆಯನ್ನು ಸಾಕಿ ಸಲಹಲು, ಮತ್ತು ಜೀವನ ನಿರ್ವಹಣೆಗೆ ಬೇಕಾಗಬಹುದಾದ ಆರ್ಥಿಕ ಸಹಾಯವನ್ನು ಒದಗಿಸಲಾಗುವುದು ಎಂದರು.

ಮೃತ ಕುಟುಂಬಗಳಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ, ಇಂತದೊಂದು ದುರ್ಘಟನೆ ನಡೆಯಬಾರದಿತ್ತು. ಆದರೆ ವಿಧಿಯ ಮುಂದೆ ನಮ್ಮ ನಿಮ್ಮ ಆಟ ಏನೂ ನಡೆಯುವುದಿಲ್ಲ. ಆದ್ದರಿಂದ ನಾವುಗಳು ಎಷ್ಟು ಹುಷಾರಿರುತ್ತೇವೂ ಅಷ್ಟೇ ಒಳ್ಳೆಯದು ಎಂದರು.

ಈ ಅಪಘಾತದಿಂದ ಮೃತರ ಕುಟುಂಬ ಅಷ್ಟೇ ಅಲ್ಲ, ಇಡೀ ಗ್ರಾಮವೇ ಆತಂಕಕ್ಕೆ ಒಳಗಾಗಿರುವುದು ಕಂಡುಬರುತ್ತಿದೆ. ಆಕಸ್ಮಿಕ ಅವಘಡಗಳು ಸಹಜ. ಇವೆಲ್ಲವನ್ನೂ ಮೆಟ್ಟಿ ನಿಂತು ಬದುಕಬೇಕಾದ ಅನಿವಾರ್ಯತೆ ಇದೆ. ಆದ್ದರಿಂದ ಇಂದಿನ ಯುವಕರು ಉತ್ತಮ ರಸ್ತೆಗಳಿವೆ ಎಂದು ವಾಹನಗಳನ್ನು ಜೋರಾಗಿ ಓಡಿಸುವುದನ್ನು ಬಿಡಬೇಕು. ನಾವು ತಲುಪುವ ಸ್ಥಳ ಅರ್ದ ಘಂಟೆ ತಡವಾಗಬಹುದು ಅಷ್ಟೆ. ಇದರಿಂದ ಯಾವುದೇ ನಷ್ಟ ಇಲ್ಲ. ಬದಲಾಗಿ ಅವಸರ ಮತ್ತು ಅತಿಯಾದ ವೇಗದಿಂದ ಜೀವಕ್ಕೆ ಏನಾದರೂ ಹೆಚ್ಚು ಕಡಿಮೆ ಆದರೆ ನಿಮ್ಮನ್ನು ನಂಬಿಕೊಂಡಿರುವ ಇಡೀ ಕುಟುಂಬವೇ ತೊಂದರೆಗೆ ಒಳಗಾಗುತ್ತದೆ. ಆದ್ದರಿಂದ ಯುವಕರು ಸ್ವಲ್ಪ ನಿಧಾನವಾಗಿ ವಾಹನಗಳನ್ನು ಚಲಾಯಿಸಬೇಕು ಎಂದು ಯುವಕರಿಗೆ ಕಿವಿ ಮಾತು ಹೇಳಿದರು.

ಹಾಡೋನಹಳ್ಳಿ ತೆಪ್ಪ ದುರಂತದ ಪ್ರಸ್ತಾಪ

ಕೆಲ ವರ್ಷಗಳ ಹಿಂದೆ ಹಾಡೋನಹಳ್ಳಿ ಗ್ರಾಮದಲ್ಲಿ ಗಣಪತಿ ವಿಸರ್ಜನೆಯ ವೇಳೆ ತೆಪ್ಪ ಮುಳುಗಿ 12 ಜನ ಮೃತಪಟ್ಟ ಘಟನೆಯನ್ನು ಪ್ರಸ್ತಾಪಿದ ಸಚಿವರು, ಹೆಚ್ಚು ಕಡಿಮೆ ಎಮ್ಮೆಹಟ್ಟಿ ಗ್ರಾಮದಲ್ಲಿ ನಡೆದಿರುವ ಅಪಘಾತ ಪ್ರಕರಣ ಎರಡೂ ತಾಳೆಯಾಗುವಂತಿವೆ. ಅಂದೂ ಕೂಡ ರಾತ್ರಿ ಹಾಡೋನಹಳ್ಳಿ ಗ್ರಾಮಕ್ಕೆ ಶಾಸಕಿ ಸಹೋದರಿ ಶಾರದಾ ಪೂರ್ಯಾ ನಾಯ್ಕ್ ಒಟ್ಟಿಗೆ ಭೇಟಿ ನೀಡಿ ಆ ಕುಟುಂಬಗಳಿಗೆ ಧೈರ್ಯ ತುಂಬುವ ಕೆಲಸ ಮಾಡಲಾಗಿತ್ತು. ಪ್ರಸ್ತುತ ಘಟನೆ ತಿಳಿದೊಡನೆ ಶಾಸಕರೊಂದಿಗೆ ಮಾತನಾಡಿದಾಗ ಸಮಾಧಾನವಾಗದೆ ಇದ್ದುದರಿಂದ ಇಂದು ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿ ನಿಮ್ಮೆಲ್ಲರೊಂದಿಗೆ ಚರ್ಚಿಸಲು ಅವಕಾಶ ಸಿಕ್ಕಿತು. ನಾಳೆ ಪಾರ್ಲಿಮೆಂಟ್ ಸಭೆ ಇರುವುದರಿಂದ ನಾನು ತುರ್ತಾಗಿ ತೆಳರಳಲಿದ್ದೇನೆ. ಮುಂದೆ ಇನ್ನೊಂದು ದಿನ ಬಿಡುವು ಮಾಡಿಕೊಂಡು ಮತ್ತೆ ಇಲ್ಲಿಗ ಬರುತ್ತೇನೆ. ಆಗ ನಿಮ್ಮಗಳ ಸಮಸ್ಯೆಯನ್ನು ಆಲಿಸಿ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…

2 hours ago

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete's Apeksha K. secured second place and runner-up…

6 hours ago

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…

6 hours ago

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…

21 hours ago

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

21 hours ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

1 day ago