ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆ – ಆರ್ ಎಂಎಂ ಬಣಕ್ಕೆ ಮೇಲುಗೈ | ಗೆದ್ದು ಬೀಗಿದ ಶಾಸಕ ಬೇಳೂರು | DCC bank director election

ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆ – ಆರ್ ಎಂಎಂ ಬಣಕ್ಕೆ ಮೇಲುಗೈ | ಗೆದ್ದು ಬೀಗಿದ ಶಾಸಕ ಬೇಳೂರು

ಶಿವಮೊಗ್ಗ ಡಿಸಿಸಿ ಬ್ಯಾಂಕಿನ ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಆರ್.ಎಂ.ಮಂಜುನಾಥ ಗೌಡ, ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ.

ಡಿಸಿಸಿ ಬ್ಯಾಂಕ್ 12 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಕಾಂಗ್ರೆಸ್ ಬೆಂಬಲಿತ ಬಹುತೇಕ ನಾಯಕರು ಗೆಲುವು ಸಾಧಿಸಿದ್ದರೆ. ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು ಮಕಾಡೆ ಮಲಗಿದ್ದಾರೆ.

ಡಿಸಿಸಿ ಬ್ಯಾಂಕ್ ನ  ಹೊಸನಗರದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂಎಂ ಪರಮೇಶ್  ಅವಿರೋಧವಾಗಿ ಆಯ್ಕೆಯಾಗಿದ್ದರು. ಉಳಿದ 12 ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆದ್ದು ಬೀಗಿದ್ದಾರೆ.

ಪ್ರಾ ಕೃ ಪ ಸ ಸಂಘ ನಿ ಸಾಗರ ತಾಲ್ಲೂಕು ಕ್ಷೇತ್ರದಿಂದ ಶಾಸಕ ಗೋಪಾಲಕೃಷ್ಣ ಬೇಳೂರು, ಜಿಪಂ ಮಾಜಿ ಸದಸ್ಯ ರತ್ನಾಕರ ಹೊನಗೋಡು ನಡುವಿನ ಬಿಗ್ ಫೈಟ್ ನಲ್ಲಿ ಶಾಸಕ ಬೇಳೂರು ಗೋಪಾಲ ಕೃಷ್ಣ ಗೆದ್ದು ಬೀಗಿದ್ದಾರೆ.

ಆರ್.ಎಂ.ಮಂಜುನಾಥ ಗೌಡ, ಬೇಳೂರು ಗೋಪಾಲಕೃಷ್ಣ, ಸಿ.ಹನುಮಂತಪ್ಪ, ಬಸವಾನಿ ವಿಜಯದೇವ್, ಎಸ್ ಪಿ ಚಂದ್ರಶೇಖರ ಗೌಡ, ಕೆ.ಪಿ.ರುದ್ರಗೌಡ, ಜಿ.ಎನ್.ಸುಧೀರ, ಎಸ್.ಕೆ.ಮರಿಯಪ್ಪ, ಪಿ.ಎಲ್.ಬಸವರಾಜ್, ಮಹಾಲಿಂಗ ಶಾಸ್ತ್ರೀ, ಟಿ.ಶಿವಶಂಕರಪ್ಪ ಬೇರೆ ಬೇರೆ ಕ್ಷೇತ್ರಗಳಿಂದ ಇಂದು ನಡೆದ ಚುನಾವಣೆಯಲ್ಲಿ ಗೆದ್ದು ಬೀಗಿದರು.
ಇಲ್ಲಿ ಕ್ಷೇತ್ರವಾರು ಗೆದ್ದವರ ಮತ್ತು ಸೋತವರ ವಿವರ ಹಾಕಲಾಗಿದೆ. ಹೆಸರುಗಳ ಪಕ್ಕದಲ್ಲಿ ಅವರು ಪಡೆದ ಮತಗಳ ವಿವರ ಇದೆ.

ಕ್ಷೇತ್ರ೧ – ಶಿವಮೊಗ್ಗ ತಾಲ್ಲೂಕು
– ಕೆ.ಪಿ.ದುಗ್ಗಪ್ಪ ಗೌಡ(13)
– ಶಿವನಂಜಪ್ಪ (12)

ಭದ್ರಾವತಿ ತಾಲ್ಲೂಕು
– ಹೆಚ್.ಎಲ್.ಷಡಾಕ್ಷರಿ(7)
– ಸಿ.ಹನುಮಂತಪ್ಪ( 9)

ತೀರ್ಥಹಳ್ಳಿ ತಾಲ್ಲೂಕು
– ಬಸವಾನಿ ವಿಜಯದೇವ್(14)
-ಕೆ.ಎಸ್.ಶಿವಕುಮಾರ್(9)

ಸಾಗರ ತಾಲ್ಲೂಕು
– ಗೋಪಾಲಕೃಷ್ಣ ಬೇಳೂರು(15)
– ರತ್ನಾಕರ ಹುನಗೋಡು(14)

ಶಿಕಾರಿಪುರ ತಾಲ್ಲೂಕು
– ಅಗಡಿ ಅಶೋಕ್(11)
-ಎಸ್.ಪಿ. ಚಂದ್ರಶೇಖರ ಗೌಡ(26)

ಸೊರಬ ತಾಲ್ಲೂಕು
– ಕೆ.ಪಿ.ರುದ್ರಗೌಡ(14)
– ಶಿವಮೂರ್ತಿ ಗೌಡ(10)

ಹೊಸನಗರ ತಾಲ್ಲೂಕು
– ಎಂ.ಎಂ.ಪರಮೇಶ್
(ಅವಿರೋಧ ಆಯ್ಕೆ)

ಕ್ಷೇತ್ರ-2
ಶಿವಮೊಗ್ಗ ಉಪವಿಭಾಗ
– ಆರ್.ಎಂ.ಮಂಜುನಾಥ ಗೌಡ(15)
– ವಿರೂಪಾಕ್ಷಪ್ಪ(3)
ತಿರಸ್ಕೃತ-೧

ಸಾಗರ ಉಪವಿಭಾಗ
– ಬಿ.ಡಿ.ಭೂಕಾಂತ್(21)
-ಜಿ.ಎನ್.ಸುಧೀರ(23)

ಕ್ಷೇತ್ರ-3
ಶಿವಮೊಗ್ಗ ಉಪವಿಭಾಗ
-ಎಸ್.ಪಿ.ದಿನೇಶ(16)
– ಎಸ್.ಕೆ.ಮರಿಯಪ್ಪ(39)

ಸಾಗರ ಉಪವಿಭಾಗ
– ಬಸವರಾಜ್ ಪಿ.ಎಲ್.(32)
– ರವೀಂದ್ರ ಹೆಚ್.ಎಸ್.(21)
– ತಿರಸ್ಕೃತ(3)

ಕ್ಷೇತ್ರ- 4
ಶಿವಮೊಗ್ಗ ಉಪವಿಭಾಗ
– ಡಿ.ಆನಂದ(16)
– ಕೆ.ಎಲ್.ಜಗದೀಶ್ವರ್(45)
-ಮಹಾಲಿಂಗಯ್ಯ ಶಾಸ್ತ್ರೀ(47)
– ಜೆ.ಪಿ.ಯೋಗೇಶ್ (14)

ಸಾಗರ ಉಪವಿಭಾಗ
– ಟಿ.ಶಿವಶಂಕರಪ್ಪ(75)
– ಎಂ.ಡಿ.ಹರೀಶ್(61)
– ತಿರಸ್ಕೃತ (1)
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…

4 hours ago

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ Arasalu's Kavanasree H.M. earns two more Guinness…

4 hours ago

ಸರ್ಕಾರಿ ಜಾಗದಲ್ಲಿ ಖಾಸಗಿ ಬೇಲಿ; ಕಂದಾಯ ಅಧಿಕಾರಿಗಳಿಂದ ತೆರವು – ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ

ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…

6 hours ago

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

1 day ago

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…

1 day ago

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…

1 day ago