ತೆಪ್ಪ ಮುಳುಗಿ ನೀರುಪಾಲಾಗಿದ್ದ ಮೂವರು ಯುವಕರ ಮೃತದೇಹ ಪತ್ತೆ
ಎನ್.ಆರ್.ಪುರ ತಾಲೂಕಿನ ಬೈರಾಪುರದ ಭದ್ರಾ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ನೀರುಪಾಲಾಗಿದ್ದ ಶಿವಮೊಗ್ಗ ಮೂಲದ ಮೂವರ ಮೃತದೇಹ ಗುರುವಾರ ಪತ್ತೆಯಾಗಿದೆ.
ಮೃತರನ್ನು ಶಿವಮೊಗ್ಗ ಜಿಲ್ಲೆಯ ವಿದ್ಯಾನಗರ ನಿವಾಸಿಗಳಾದ ಆದೀಲ್, ಸಾಜೀದ್ ಹಾಗೂ ಅಫ್ದಾಖಾನ್ ಎಂದು ಗುರುತಿಸಲಾಗಿದೆ.
ಬುಧವಾರ ಶಿವಮೊಗ್ಗದ ವಿದ್ಯಾನಗರದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು ಜಿಲ್ಲೆಯ ಬೈರಾಪುರದಲ್ಲಿರುವ ಭದ್ರಾ ಹಿನ್ನೀರಿನ ಬಳಿ ಬಂದಿದ್ದಾರೆ, ಈ ವೇಳೆ ನಾಲ್ವರಲ್ಲಿ ಮೂವರು ತೆಪ್ಪದಲ್ಲಿ ತೆರಳಿದ್ದಾರೆ ಓರ್ವ ಮಾತ್ರ ದಡದಲ್ಲಿ ನಿಂತಿದ್ದ ಎನ್ನಲಾಗಿದೆ ತೆಪ್ಪದಲ್ಲಿ ತೆರಳಿದ ಕೆಲವೇ ಹೊತ್ತಿನಲ್ಲಿ ತೆಪ್ಪ ಮುಳುಗಿ ಮೂವರು ನಿರುಪಾಲಾಗಿದ್ದರು, ಘಟನೆ ಸಂಬಂಧ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇತ್ತ ಮೂವರು ನೀರು ಪಾಲಾಗಿರುವ ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳೀಯರು ಹಾಗೂ ಪೊಲೀಸರು ಅಗ್ನಿಶಾಮಕ ಸಿಬ್ಬಂದಿಯೊಂದಿಗೆ ಘಟನಾ ಸ್ಥಳಕ್ಕೆ ಬಂದು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ ಆದರೆ ಕತ್ತಲಾದರೂ ಮೂವರ ದೇಹಗಳು ಪತ್ತೆಯಾಗಲಿಲ್ಲ ಬಳಿಕ ಕಾರ್ಯಾಚರಣೆ ಸ್ಥಗಿತಗೊಳಿಸಿ ಗುರುವಾರ ಮತ್ತೆ ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬಂದಿಗಳು ಕಾರ್ಯಾಚರಣೆ ನಡೆಸಿ ಮೂವರ ಮೃತದೇಹಗಳನ್ನು ಮೇಲಕ್ಕೆತ್ತಿದ್ದಾರೆ.
ಮೃತದೇಹಗಳನ್ನು ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ಶವಗಾರಕ್ಕೆ ರವಾನೆ ಮಾಡಲಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್