ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಮನೆ ಕಳ್ಳತನ ಮಾಡಿದ್ದ ಆರೋಪಿಗಳನ್ನು 24 ಗಂಟೆಯೊಳಗೆ ಮಾಲು ಸಮೇತ ಬಂಧಿಸಿದ ಪೊಲೀಸ್

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಮನೆ ಕಳ್ಳತನ ಮಾಡಿದ್ದ ಆರೋಪಿಗಳನ್ನು 24 ಗಂಟೆಯೊಳಗೆ ಮಾಲು ಸಮೇತ ಬಂಧಿಸಿದ ಪೊಲೀಸ್

ಮನೆ ಕಳ್ಳತನವೆಸಗಿದ್ದ ಆರೋಪಿಗಳನ್ನು 24 ಗಂಟೆಯಲ್ಲಿ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಆಗುಂಬೆ ಸಮೀಪದ ಶೆಟ್ಟಿಗಳಕೊಪ್ಪ ಗ್ರಾಮದ ಶಿವಪ್ಪ ಹೆಗಡೆ ಎಂಬುವವರ ಮನೆಯ ಕಿಟಕಿಯನ್ನು ಮುರಿದು ಪೆಟ್ಟಿಗೆಯಲ್ಲಿದ್ದ ಬೆಳ್ಳಿ ಮತ್ತು ಬಂಗಾರದ ಆಭರಣಗಳು ಮತ್ತು ನಗದು ಹಣವನ್ನು ಕಳ್ಳತನವೆಸಗಿದ್ದ ಪ್ರಕರಣವನ್ನು ಪೊಲೀಸರು ಭೇಧಿಸಿ ಇಬ್ಬರು ಆರೋಪಿಗಳನ್ನು‌ ಮಾಲು ಸಮೇತ ವಶಕ್ಕೆ ಪಡೆದಿದ್ದಾರೆ.

ಆರೋಪಿಗಳಾದ ತೀರ್ಥಹಳ್ಳಿಯ ಕೈಮರದ ನಿವಾಸಿ, ಮಂಜುನಾಥ @ ಕೊಪ್ಪ ಮಂಜ, (42) ವರ್ಷ ಮತ್ತು ಚೇತನ್ @ ಚೇತು (27)  ಇಬ್ಬರನ್ನು ಬಂಧಿಸಲಾಗಿದೆ.

ಪ್ರಕರಣದಲ್ಲಿ ಆರೋಪಿತರು ಮತ್ತು ಕಳುವಾದ ಮಾಲಿನ ಪತ್ತೆಗಾಗಿ ಎಸ್ಪಿ ಮಿಥುನ್ ಕುಮಾರ್ ಜಿ. ಕೆ. ಅಡಿಷನಲ್ ಎಸ್ಪಿ ಅನಿಲ್ ಕುಮಾರ್ ಭೂಮರಡ್ಡಿ ಮತ್ತು ಎ ಜಿ ಕಾರ್ಯಪ್ಪ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಗಜಾನನ ವಾಮನ ಸುತಾರ ಮೇಲ್ವಿಚಾರಣೆಯಲ್ಲಿ, ಪಿಎಸ್ ಐ ರಂಗನಾಥ ಅಂತರಗಟ್ಟಿ ನೇತೃತ್ವದಲ್ಲಿ  ಬಸವರಾಜ್ ಎಲ್ ಆರ್ ಪಿಎಸ್ ಐ 2, ಆಗುಂಬೆ ಪೊಲೀಸ್ ಠಾಣೆ ಮತ್ತು ಸಿಬ್ಬಂಧಿಗಳನ್ನೊಳಗೊಂಡ ತನಿಖಾ ತಂಡವನ್ನು ರಚಿಸಲಾಗಿತ್ತು.

ತನಿಖಾ ತಂಡವು ಪ್ರಕರಣ ದಾಖಲಾದ ಕೇವಲ 24 ಗಂಟೆಗಳ ಒಳಗಾಗಿ ಪ್ರಕರಣವನ್ನು ಪೊಲೀಸರು ಹಚ್ಚಿದ್ದಾರೆ, ಆರೋಪಿತರಿಂದ ಅಂದಾಜು ಮೌಲ್ಯ 1,50,500 /- ರೂಗಳ ಒಟ್ಟು 23.5 ಗ್ರಾಂ ತೂಕದ ಬೆಳ್ಳಿ ಹಾಗೂ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡು, ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿರುತ್ತದೆ.

ಸದರಿ ತನಿಖಾ ತಂಡದ ಉತ್ತಮವಾದ ಕಾರ್ಯವನ್ನು ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಪ್ರಶಂಸಿಸಿ ಅಭಿನಂದಿಸಿರುತ್ತಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…

12 hours ago

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

13 hours ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

18 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

2 days ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

2 days ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

2 days ago