ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದ ಮರ – ಸಂಚಾರ ವ್ಯತ್ಯಯ
ಹೊಸನಗರ ಸಾಗರ ರಸ್ತೆಯ ಅರಳಿಕೊಪ್ಪ ಗ್ರಾಮದ ಬಳಿಯಲ್ಲಿ ಭಾರಿ ಗಾತ್ರದ ಮರವೊಂದು ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದು ರಸ್ತೆ ಸಂಚಾರ ವ್ಯತ್ಯವಾದ ಘಟನೆ ನಡೆದಿದೆ.
ಭಾನುವಾರ ಸಂಜೆ ಅರಳಿಕೊಪ್ಪ ಗ್ರಾಮದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದು ಗಂಟೆಗೂ ಹೆಚ್ಚು ಕಾಲ ಸಂಚಾರ ವ್ಯತ್ಯಯವಾಗಿತ್ತು.
ತಾಲೂಕ ಆಡಳಿತ ರಕ್ಷಣಾ ಇಲಾಖೆ ಮೆಸ್ಕಾಂ ಅರಣ್ಯ ಇಲಾಖೆ ಕಂದಾಯ ಇಲಾಖೆ ಇವರು ಸ್ಥಳಕ್ಕೆ ಧಾವಿಸಿ, ಗ್ರಾಮಸ್ಥರ ನೆರವಿನಿಂದ ಮರವನ್ನು ಸುರಿಯುತ್ತಿರುವ ಮಳೆಯಲ್ಲೂ ತೆರವುಗೊಳಿಸಿದ್ದಾರೆ.
ಮರ ಬಿದ್ದ ಕ್ಷಣ ಹೊಸನಗರ ಸಾಗರ ಮಧ್ಯೆ ಸುಗಮ ಸಂಚಾರಕ್ಕೆ ಆಭಾದಿತವಾಗಿದ್ದು ಗ್ರಾಮಸ್ಥರ ನೆರವಿನಿಂದ ಸಂಚಾರಕ್ಕೆ ಮುಕ್ತಗೊಳಿಸಿದ ಕಾರಣಕ್ಕಾಗಿ ಸಾರ್ವಜನಿಕರು ಸಹಕರಿಸಿದ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಅಭಿನಂದಿಸಿದ್ದಾರೆ
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್