ಮತದಾರರು ಹರತಾಳು ಹಾಲಪ್ಪ , ಬಿ ವೈ ರಾಘವೇಂದ್ರ ಮುಖ ನೋಡಿ ಮತ ಹಾಕಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ ವ್ಯಂಗ್ಯ | GKB

ಮತದಾರರು ಹರತಾಳು ಹಾಲಪ್ಪ , ಬಿ ವೈ ರಾಘವೇಂದ್ರ ಮುಖ ನೋಡಿ ಮತ ಹಾಕಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ ವ್ಯಂಗ್ಯ

ಸಾಗರ :  ಲೋಕಸಭಾ ಚುನಾವಣೆಯಲ್ಲಿ 26 ಸಾವಿರ ಮತ ಬಿಜೆಪಿಗೆ ಲೀಡ್ ಬಂದಿದೆ ಎಂದು ಕಾರ್ಯಕರ್ತರು ಹೆದರಬೇಡಿ. ಕೇಂದ್ರದಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂದು ಜನರು ಬಿಜೆಪಿಗೆ ಮತ ನೀಡಿದ್ದಾರೆಯೇ ವಿನಾ ಬಿ.ವೈ.ರಾಘವೇಂದ್ರ, ಹರತಾಳು ಹಾಲಪ್ಪ ಮುಖ ನೋಡಿ ಮತ ಹಾಕಿಲ್ಲ ಎಂದು ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.

ಇಲ್ಲಿನ ಆರ್ಯ ಈಡಿಗರ ಸಮುದಾಯ ಭವನದಲ್ಲಿ ಸೋಮವಾರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಕಾರ್ಯಕರ್ತರಿಗೆ ಕೃತಜ್ಞತಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಾ, ಪಕ್ಷದ ಜೊತೆ ಸದಾ ಇರುವ, ಕಾರ್ಯಕರ್ತರು ಆಯ್ಕೆ ಮಾಡುವ ಅಭ್ಯರ್ಥಿಗೆ ಟಿಕೆಟ್ ನೀಡಬೇಕಿತ್ತು ಎಂದು ಹಲವರು ಅಭಿಪ್ರಾಯಿಸಿದ್ದಾರೆ. ಆದರೆ ಹೈಕಮಾಂಡ್ ಟಿಕೆಟ್ ನೀಡಿದ ಅಭ್ಯರ್ಥಿ ಪರವಾಗಿ ನಾವೆಲ್ಲಾ ಕೆಲಸ ಮಾಡಿದ್ದೇವೆ. ಆದರೂ ಸೋಲಾಗಿದೆ. ಸೋಲಿನ ಬಗ್ಗೆ ಮುಖ್ಯಮಂತ್ರಿಗಳಿಗೆ, ಉಪ ಮುಖ್ಯಮಂತ್ರಿಗಳಿಗೆ ತಿಳಿಸಲಾಗಿದೆ ಎಂದರು.

ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿರಬಹುದು. ಆದರೆ ಮುಂದಿನ ಜಿಲ್ಲಾ, ತಾಲೂಕು ಪಂಚಾಯ್ತಿ ಹಾಗೂ ನಗರಸಭೆ ಚುನಾವಣೆಯಲ್ಲಿ ನಮ್ಮ ಕಾರ್ಯಕರ್ತರನ್ನು ಗೆಲ್ಲಿಸಿಕೊಂಡು ಬರುವ ತಾಕತ್ತು ಈ ಗೋಪಾಲಕೃಷ್ಣ ಬೇಳೂರಿಗೆ ಇದೆ. ಅದನ್ನು ತಡೆಯುವ ತಾಕತ್ತು ಹಾಲಪ್ಪರಿಗೆ ಇದ್ದರೆ ತಡೆಯಲಿ ಎಂದು ಸವಾಲು ಹಾಕಿದ ಬೇಳೂರು, ಕ್ಷೇತ್ರವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಹರತಾಳು ಹಾಲಪ್ಪ ಹೇಳುತ್ತಿದ್ದಾರೆ. ಕೆಲವು ವೈಯಕ್ತಿಕ ವಿಷಯಗಳ ಗಲಾಟೆ ಹೊರತುಪಡಿಸಿ ಎಲ್ಲ ಸಂದರ್ಭದಲ್ಲೂ ತಪ್ಪಿತಸ್ತರ ವಿರುದ್ಧ ಸೂಕ್ತ ಕಾನೂನುಕ್ರಮ ಜರುಗಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ.

ಹಾಲಪ್ಪ ರೀತಿ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಸಭೆಗೆ ನುಗ್ಗಿ ಅಮಾಯಕರ ಮೇಲೆ ಹಲ್ಲೆ ಮಾಡಿಸುವಂತಹ ರೀತಿಯಲ್ಲಿ ಕಾನೂನು ಹದಗೆಟ್ಟಿಲ್ಲ ಎಂದು ಟಾಂಗ್ ನೀಡಿದರು.

ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಿದ್ದುಹೋಗುತ್ತದೆ ಎಂದು ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದರು. ಇದೀಗ ಕೇಂದ್ರದಲ್ಲಿ ಅವರದ್ದೇ ಸರ್ಕಾರ ಸ್ಥಿರವಿಲ್ಲ. ಸ್ವತಃ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರ ಶಿಕಾರಿಪುರ ಕ್ಷೇತ್ರದಲ್ಲಿ ಮತಕ್ಕೆ 2 ಸಾವಿರ ರೂ. ಕೊಟ್ಟರೂ ಬಿ.ವೈ.ರಾಘವೇಂದ್ರ ಕಡಿಮೆ ಅಂತರದಲ್ಲಿ ಗೆಲ್ಲಲು ಕಾರಣ ಏನು ಎಂದು ಅವರು ಸ್ಪಷ್ಟಪಡಿಸಬೇಕು.

ಒಂದು ವರ್ಷದ ಮೊದಲು ಇಂಡಿಯಾ ಒಕ್ಕೂಟ ರಚನೆಯಾಗಿದ್ದರೆ ದೇಶದಲ್ಲಿ ನಮ್ಮದೇ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿತ್ತು. ಇದೀಗ ದೇಶದಲ್ಲಿ ಮೋದಿಯವರ ಜನಪ್ರಿಯತೆ ಕಡಿಮೆಯಾಗಿದೆ. ಕೇವಲ 240 ಸ್ಥಾನ ಮಾತ್ರ ಬಿಜೆಪಿಗೆ ಬಂದಿದ್ದು, ವಾಸ್ತವವಾಗಿ ನರೇಂದ್ರ ಮೋದಿಯವರು ಪ್ರಧಾನಿಪಟ್ಟ ಸ್ವೀಕರಿಸಬಾರದಿತ್ತು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕಾರ್ಯಕರ್ತರು ಕೆಲವು ಸೋಲಿನ ನೈತಿಕ ಹೊಣೆ ಹೊತ್ತು ಮಧು ಬಂಗಾರಪ್ಪ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರೆ ಇನ್ನು ಕೆಲವರು ಬಂಗಾರಪ್ಪ ಅವರ ಕುಟುಂಬದ ವೈಯಕ್ತಿಕ ಜಗಳ ಚುನಾವಣೆ ಮೇಲೆ ಪ್ರಭಾವ ಬೀರಿದೆ ಎಂದು ಅಭಿಪ್ರಾಯಿಸಿದರು. ಇನ್ನಷ್ಟು ಕಾರ್ಯಕರ್ತರು ಅಭ್ಯರ್ಥಿ ಆಯ್ಕೆ ಸಂದರ್ಭದಲ್ಲಿ ಕಾರ್ಯಕರ್ತರ ಅಭಿಪ್ರಾಯಕ್ಕೆ ಮನ್ನಣೆ ನೀಡಲು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ನಗರಸಭಾ ಸದಸ್ಯ ಸೈಯದ್ ಜಾಕೀರ್ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಐ.ಎನ್.ಸುರೇಶಬಾಬು, ಅಶೋಕ್ ಬೇಳೂರು, ರವಿಕುಮಾರ್ ಎಚ್.ಎಂ., ಕೆ.ಹೊಳೆಯಪ್ಪ, ಬಿ.ಎ.ಇಂದೂಧರ ಗೌಡ, ಪ್ರಭಾವತಿ ಚಂದ್ರಕಾಂತ್, ಮಕ್ಬೂಲ್ ಅಹ್ಮದ್, ಚಂದ್ರಮೌಳಿ, ಉಷಾ ಎನ್. ಇನ್ನಿತರರು ಹಾಜರಿದ್ದರು. ಚೇತನರಾಜ್ ಕಣ್ಣೂರು ಸ್ವಾಗತಿಸಿದರು. ಮೈಕಲ್ ಡಿಸೋಜ ನಿರೂಪಿಸಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ – ಇಲ್ಲಿದೆ ಸಂಪೂರ್ಣ ವಿವರ!

ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ - ಇಲ್ಲಿದೆ…

11 hours ago

ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಹೆದ್ದಾರಿಪುರ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ Villagers protest by planting…

11 hours ago

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ A container lorry lost control and collided…

14 hours ago

ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ

ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ Karnataka government bans manufacture, storage, transport,…

14 hours ago

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…

2 days ago

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ!

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…

2 days ago