ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ – ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾಗರದ ಅರುಣ್ ಕುಗ್ವೆ ಅರೆಸ್ಟ್ | Sagara
ಯುವತಿಯೊಬ್ಬಳಿಗೆ ಮದುವೆಯಾಗುವುದಾಗಿ ನಂಬಿಸಿ ನಾಲ್ಕು ವರ್ಷಗಳಿಂದ ಲೈಂಗಿಕ ದೌರ್ಜನ್ಯ ನಡೆಸುವ ಜೊತೆಗೆ ಕುಟುಂಬಕ್ಕೆ ಜೀವಬೆದರಿಕೆ ಒಡ್ಡಿರುವ ಪ್ರಕರಣದಲ್ಲಿ ಸಾಗರದ ಬಿಜೆಪಿ ಮುಖಂಡ , ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತ ಯುವತಿ ಶಿವಮೊಗ್ಗ ನಗರದ ಮಹಿಳಾ ಠಾಣೆಯಲ್ಲಿ ದಾಖಲಿಸಿರುವ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಅರುಣ್ ಕುಗ್ವೆಯನ್ನು ಅವನ ಮನೆಯಿಂದ ಬಂಧಿಸಿ ಪೊಲೀಸರು ಕರೆದೊಯ್ದಿದ್ದು ಎಫ್ಐಆರ್ ದಾಖಲಾಗಿದೆ. ಲೈಂಗಿಕ ದೌರ್ಜನ್ಯ, ಜೀವ ಬೆದರಿಕೆ ಪ್ರಕರಣಗಳಲ್ಲಿ ಬಂಧಿಸಲಾಗಿದೆ.
ದೂರಿನಲ್ಲೇನಿದೆ..???
ಶಿವಮೊಗ್ಗ ನಿವಾಸಿ ಯುವತಿಯೊಂದಿಗೆ ಉದ್ಯಮಿ ಮತ್ತು ರಾಜಕಾರಣಿ ಎಂದು ಹೇಳಿಕೊಂಡಿದ್ದ ಅರುಣ್ ಕುಮಾರ್ ತನ್ನೊಂದಿಗೆ ಸಂಪರ್ಕ ಬೆಳೆಸಿದ ನಂತರದ ವಿವಿಧ ಆಮಿಷ ತೋರಿಸಿ ಮದುವೆಯಾಗುತ್ತೇನೆ ಎಂದು ಹೇಳುತ್ತಾ, ಬಲಾತ್ಕಾರ ಮಾಡಿರುತ್ತಾನೆ. ಜೋಗ, ಶಿವಮೊಗ್ಗ ಮತ್ತಿತರ ಕಡೆಗಳಲ್ಲಿ ತನ್ನೊಂದಿಗೆ ಆಮಿಷ ತೋರಿಸಿ ದೈಹಿಕ ಸಂಬಂಧ ಬೆಳೆಸಿರುತ್ತಾನೆ.
ಬಲಾತ್ಕಾರವಾಗಿ ವಿಡಿಯೋ ಚಿತ್ರೀಕರಣ, ಫೋಟೋ ತೆಗೆದುಕೊಂಡಿದ್ದಾನೆ. ರೌಡಿ ಚಟುವಟಿಕೆಯಲ್ಲಿ ಪಾಲ್ಗೊಳ್ಳುವ ಅರುಣ್ ತನ್ನ ಬೇಡಿಕೆಗೆ ಒಪ್ಪದಿದ್ದರೆ ಕೊಲೆ ಮಾಡಿ ಜೈಲಿಗೆ ಹೋಗುವ ಬೆದರಿಕೆ ಒಡ್ಡಿರುತ್ತಾನೆ. ಇತ್ತೀಚೆಗೆ ಬೇರೆ ಹುಡುಗಿಯರೊಂದಿಗೆ ಇದೇ ರೀತಿ ವರ್ತಿಸಿದ್ದು ಕಂಡು ಬಂದಾಗ ಆ ಬಗ್ಗೆ ಕೇಳಿದ್ದಕ್ಕೆ ಜೀವ ಬೆದರಿಕೆ ಒಡ್ಡಿರುತ್ತಾನೆ. ಈ ನಡುವೆ ಬೇರೊಬ್ಬ ಯುವತಿಯೊಂದಿಗೆ ಮದುವೆ ನಿಶ್ಚಯ ಮಾಡಿಕೊಂಡಿರುತ್ತಾನೆ. ಅದನ್ನ ಪ್ರಶ್ನಿಸಿದ್ದಕ್ಕೆ ಅವನ ಸೋದರ ಗಣೇಶ್ ಎಂಬುವವನು ನನಗೆ ಮತ್ತು ನನ್ನ ಕುಟುಂಬದವರಿಗೆ ಜೀವ ಬೆದರಿಕೆ ಒಡ್ಡಿರುತ್ತಾನೆ ಎಂದು ಯುವತಿ ದೂರು ನೀಡಿರುತ್ತಾರೆ.
ಈ ಹಿನ್ನೆಲೆಯಲ್ಲಿ ಅರುಣ್ ಕುಗ್ವೆ ಮತ್ತು ಗಣೇಶ್ ಇಬ್ಬರ ಮೇಲೆ ಐಪಿಸಿ ಸೆಕ್ಷನ್ 354, 376 ಹಾಗೂ 506 ಅಡಿಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಅರುಣ್ ಕುಗ್ವೆ ಮೇಲೆ ಈಗಾಗಲೇ ಹಲವಾರು ಪ್ರಕರಣಗಳು ದಾಖಲಾಗಿದ್ದು, ಗಡಿಪಾರು ಸೂಚನೆಯನ್ನೂ ಹಿಂದೆ ನೀಡಲಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ಗಂಭೀರತೆಯನ್ನು ಆಧರಿಸಿ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ಅರುಣ್ ಕುಗ್ವೆ ಜೊತೆಯಲ್ಲಿ ಎರಡನೇ ಆರೋಪಿಯಾಗಿ ಆತನ ಸೋದರ ಗಣೇಶ್ ಮೇಲೂ ಪ್ರಕರಣ ದಾಖಲಿಸಲಾಗಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್