ಶಿವಮೊಗ್ಗ DCC ಬ್ಯಾಂಕ್ ನಿರ್ದೇಶಕರ ಚುನಾವಣೆ – ಶಾಸಕ ಬೇಳೂರು ಗೋಪಾಲಕೃಷ್ಣ ನಾಮಪತ್ರ ಸಲ್ಲಿಕೆ

ಶಿವಮೊಗ್ಗ DCC ಬ್ಯಾಂಕ್ ನಿರ್ದೇಶಕರ ಚುನಾವಣೆ – ಶಾಸಕ ಬೇಳೂರು ಗೋಪಾಲಕೃಷ್ಣ ನಾಮಪತ್ರ ಸಲ್ಲಿಕೆ


ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ಅವರು ನಾಮಪತ್ರ ಸಲ್ಲಿಸುವ ಮೂಲಕ ಅಧಿಕೃತವಾಗಿ ಅಖಾಡಕ್ಕೆ ಇಳಿದಿದ್ದಾರೆ.

ಜೂನ್‌ 28ರಂದು ಶಿವಮೊಗ್ಗದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಡಿಸಿಸಿ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಮತದಾನಕ್ಕೆ ದಿನಾಂಕ ನಿಗದಿ ಪಡಿಸಲಾಗಿದೆ.

ಶಿವಮೊಗ್ಗ ಡಿಸಿಸಿ ಬ್ಯಾಂಕ್‌ಗೆ ವಿವಿಧ ಕ್ಷೇತ್ರಗಳಿಂದ ಒಟ್ಟು 13 ನಿರ್ದೇಶಕರ ಆಯ್ಕೆ ನಡೆಯಲಿದೆ. ಪ್ರತಿ ತಾಲ್ಲೂಕಿಗೆ ಒಬ್ಬರಂತೆ ವಿವಿಧ ಸಹಕಾರ ಸಂಘಗಳಿಂದ ಚುನಾಯಿಸಲ್ಪಡುವ ಪ್ರತಿನಿಧಿಗಳು, ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಗಳು, ಸಂಸ್ಕರಣ ಸಂಘಗಳ ವತಿಯಿಂದ ಇಬ್ಬರು ಸದಸ್ಯರು, ಪಟ್ಟಣ ಸಹಕಾರ ಸಂಘಗಳು ಮತ್ತು ವ್ಯವಸಾಯೇತರ ಸಹಕಾರ ಸಂಘಗಳ ವತಿಯಿಂದ ಇಬ್ಬರು, ಇನ್ನಿತರೆ ಸಹಕಾರ ಸಂಘಗಳಿಂದ ಇಬ್ಬರು ಸದಸ್ಯರ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಡಿಸಿಸಿ ಬ್ಯಾಂಕ್‌ ನಿರ್ದೇಶಕರ ಸ್ಥಾನಕ್ಕೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಜೂನ್‌ 12 ರಿಂದ ಜೂನ್‌ 20ರವರೆಗೆ ಅವಕಾಶವಿದೆ. ಜೂನ್‌ 21ರಂದು ನಾಮಪತ್ರ ಪರಿಶೀಲನೆ ನಡೆಸಲಾಗುತ್ತದೆ. ಅದೇ ದಿನ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ.

ಜೂನ್‌.22ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ. ಅಂತಿಮವಾಗಿ ಸ್ಪರ್ಧೆಯಲ್ಲಿ ಉಳಿದ ಅಭ್ಯರ್ಥಿಗಳ ಪಟ್ಟಿಯನ್ನು ಅದೇ ದಿನ ಪ್ರಕಟಿಸಲಾಗುತ್ತದೆ. ಅಲ್ಲದೆ ಅವಶ್ಯವಿದ್ದಲ್ಲಿ ಚುನಾವಣೆ ಚಿಹ್ನೆಗಳನ್ನು ಹಂಚಿಕೆ ಮಾಡಲಾಗುತ್ತದೆ. ಜೂನ್‌ 24ರಂದು ಚುನಾವಣೆ ಚಿಹ್ನೆಯೊಂದಿಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ.

ಜೂನ್‌ 28ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಡಿಸಿಸಿ ಬ್ಯಾಂಕ್‌ ಪ್ರಧಾನ ಕಚೇರಿ ಕಟ್ಟಡದಲ್ಲಿ ಮತದಾನ ನಡೆಯಲಿದೆ. ಮತದಾನ ಮುಗಿಯುತ್ತಿದ್ದಂತೆ ಎಣಿಕೆ ಕಾರ್ಯ ನಡೆಯಲಿದೆ. ಪೂರ್ಣಗೊಳ್ಳುತ್ತಿದ್ದಂತೆ ಫಲಿತಾಂಶ ಪ್ರಕಟಿಸಲಾಗುತ್ತದೆ.

ನಿರ್ದೇಶಕ ಸ್ಥಾನಕ್ಕೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ನಾಮಪತ್ರ ಸಲ್ಲಿಕೆ

ಜೂನ್.12ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದ್ದು, ಇಂದು ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಶಿವಮೊಗ್ಗ ಉಪವಿಭಾಗಾಧಿಕಾರಿ ಹಾಗೂ ಚುನಾವಣಾಧಿಕಾರಿಯೂ ಆಗಿರುವಂತ ಜಿಹೆಚ್ ಸತ್ಯನಾರಾಯಣ ಅವರಿಗೆ ತಮ್ಮ ಉಮೇಧುವಾರಿಕೆ ಸಲ್ಲಿಸಿದರು.

ನಾಳೆ ನಾಮಪತ್ರ ಸಲ್ಲಿಕೆಯ ಕೊನೆಯ ದಿನಾಂಕವಾಗಿದ್ದು, ಇದುವರೆಗೂ 16 ಜನ ನಾಮಪತ್ರ ಸಲ್ಲಿಕೆಯಾಗಿದೆ. ಇದುವರೆಗೂ 16 ಜನ ನಾಮಪತ್ರ ಸಲ್ಲಿಕೆಯಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ – ಇಲ್ಲಿದೆ ಸಂಪೂರ್ಣ ವಿವರ!

ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ - ಇಲ್ಲಿದೆ…

9 hours ago

ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಹೆದ್ದಾರಿಪುರ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ Villagers protest by planting…

10 hours ago

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ A container lorry lost control and collided…

12 hours ago

ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ

ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ Karnataka government bans manufacture, storage, transport,…

13 hours ago

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…

1 day ago

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ!

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…

2 days ago