ಸತತ 20 ಗಂಟೆಗಳ ಕಾರ್ಯಾಚರಣೆಯ ನಂತರ ಅಬ್ಬಿ ಫಾಲ್ಸ್ ನಲ್ಲಿ ನೀರು ಪಾಲಾಗಿದ್ದ ಯುವಕನ ಮೃತ ದೇಹ ಪತ್ತೆ
ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಪಾಲ್ಸ್ ನೀರು ಪಾಲಾಗಿದ್ದ ಯುವಕನ ಮೃತ ದೇಹ ಸತತ 20 ಗಂಟೆ ಕಾರ್ಯಾಚರಣೆಯ ನಂತರ ಪತ್ತೆಯಾಗಿದೆ.
ಮಳೆ,ಗಾಳಿ ಹಾಗೂ ನೀರಿನ ರಭಸ ನಡುವೆ 26 ವರ್ಷದ ವಿನೋದ್ರ ಮೃತದೇಹಕ್ಕಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಸ್ಥಳೀಯರು , ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಇಂದು ಬೆಳಗ್ಗೆ ವಿನೋದ್ ಮೃತ ದೇಹ ಪತ್ತೆಯಾಗಿದೆ.
ರಸ್ತೆ ಕಿರಿದಾದ ಹಿನ್ನೆಲೆಯಲ್ಲಿ ಮೃತ ದೇಹ ರವಾನಿಸಲು ಸಮಸ್ಯೆ ಉಂಟಾಗಿ ಆನಂತರದಲ್ಲಿ ಕಂಬಕ್ಕೆ ಕಟ್ಟಿ ಮೃತ ದೇಹವನ್ನು ರವಾನಿಸಲಾಯಿತು.
ಮುಂಗಾರು ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮೈದುಂಬಿ ಹರಿಯುತ್ತಿದ್ದ ಅಬ್ಬೆ ಜಲಪಾತದ ವೀಕ್ಷಣೆಗೆಂದು ಬಂದು ಈಜಾಡಲು ತೆರಳಿದ್ದ ಪ್ರವಾಸಿಗ ಸಾಫ್ಟ್ವೇರ್ ಇಂಜನಿಯರ್ ನೀರಿನಲ್ಲಿ ಕೊಚ್ಚಿ ಹೋಗಿ ದಾರುಣವಾಗಿ ಸಾವನ್ನಪ್ಪಿದ್ದಾನೆ.
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಸುರಿದಿದ್ದು, ಈಗ ಮುಂಗಾರು ಮಳೆಯೂ ಚುರುಕುಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಜಲಪಾತಗಳು ಮರುಜೀವ ಪಡೆದುಕೊಂಡಿವೆ. ಕಳೆದ ವರ್ಷ ಸರಿಯಾಗಿ ಮಳೆಯಾಗದ ಹಿನ್ನೆಲೆಯಲ್ಲಿ ಜಲಪಾತಗಳ ವೀಕ್ಷಣೆ ಹಾಗೂ ಪ್ರಕೃತಿ ಸೌಂದರ್ಯ ಸವಿಯುವುದಕ್ಕೆ ಪ್ರವಾಸಿಗರಿಗೆ ನಿರಾಸೆ ಉಂಟಾಗಿತ್ತು. ಆದರೆ, ಈ ಬಾರಿ ಮಳೆಗಾಲ ಆರಂಭವಾಗುತ್ತಿದ್ದಂತೆ ಪ್ರವಾಸಿಗರ ದಂಡು ಕೂಡ ಎಲ್ಲೆಡೆ ಕಾಣತೊಡಗಿದೆ. ಅದೇ ರೀತಿ ಬೆಂಗಳೂರಿನಿಂದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಯಡೂರು ಸಮೀಪದ ಅಬ್ಬೆ ಫಾಲ್ಸ್ ವೀಕ್ಷಣೆಗೆ ಬಂದಿದ್ದ 12 ಜನ ಪ್ರವಾಸಿಗರು ನೀರಿನ ರಭಸವನ್ನು ಅರಿಯದೇ ಈಜಲು ತೆರಳಿದ್ದಾರೆ. ಆಗ ಒಬ್ಬ ಪ್ರವಾಸಿಗ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ.
ಬೆಂಗಳೂರಿನಿಂದ ಅಬ್ಬೆ ಫಾಲ್ಸ್ ವೀಕ್ಷಣೆಗೆ ಬಂದಿದ್ದ ಪ್ರವಾಸಿಗ ವಿನೋದ್ ಕುಮಾರ್ (26) ನೀರು ಪಾಲಾದ ವ್ಯಕ್ತಿಯಾಗಿದ್ದಾನೆ. ಈ ವಿನೋದ್ ಬಳ್ಳಾರಿ ಮೂಲದವನಾಗಿದ್ದು, ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಖಾಸಗಿ ಸಂಸ್ಥೆಯಿಂದರಲ್ಲಿ ಕೆಲಸ ಮಾಡುತ್ತಿದ್ದನು. ಮಳೆಗಾಲದ ಹಿನ್ನೆಲೆಯಲ್ಲಿ 12 ಜನ ಸ್ನೇಹಿತರು ಪ್ರವಾಸಕ್ಕೆಂದು ಬಂದಾಗ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ದಾರುಣವಾಗಿ ಮೃತಪಟ್ಟಿದ್ದಾನೆ.
ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಸ್ನೇಹಿತನನ್ನು ಕಾಪಾಡುವಷ್ಟೂ ಗುಂಪಿನಲ್ಲಿದ್ದ ಯಾರೊಬ್ಬರಿಗೂ ಈಜು ಬರುತ್ತಿರಲಿಲ್ಲ. ಜಲಪಾತ ಆಗಿದ್ದರಿಂದ ನೀರಿನ ರಭಸಕ್ಕೆ ಯಾವುದಾದರೂ ಕಲ್ಲು ಬಂಡೆಗಳಿಗೆ ಹೋಗಿ ಬಿದ್ದರೆ ಭಯವೆಂದು ಯಾರೊಬ್ಬರೂ ಆತನನ್ನು ನೀರಿಗಿಳಿದು ರಕ್ಷಣೆ ಮಾಡುವ ಧೈರ್ಯವನ್ನೂ ಮಾಡಿಲ್ಲ. ಆದರೆ, ಸ್ನೇಹಿತ ನೀರಿನಲ್ಲಿ ಕೊಚ್ಚಿಕೊಂಡು ಹೋದ ನಂತರ ಪೊಲೀಸರಿಗೆ ತೀರ್ಥಹಳ್ಳಿ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಆಗಮಿಸಿದ ನಗರ ಠಾಣೆ ಪಿಎಸ್ಐ ರಮೇಶ್ ಮೃತ ವಿನೋದ್ ಅವರ ದೇಹಕ್ಕಾಗಿ ಸತತ 20 ಗಂಟೆ ಹುಡುಕಾಟ ನಡೆಸಿ ಮೃತ ದೇಹವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…
ಚಾನೆಲ್ನಲ್ಲಿ ಈಜಲು ತೆರಳಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…
ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…
ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…
ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…
ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…