Hosanagara | ಯಕ್ಷಗಾನ ಕಲೆಯನ್ನು ಉಳಿಸಿ ,ಬೆಳೆಸುವ ಜವಬ್ದಾರಿ ನಮ್ಮ ಮೇಲಿದೆ – ಪಟ್ಲ ಸತೀಶ್ | ಉಚಿತ ಯಕ್ಷಗಾನ ತರಬೇತಿ ಕಾರ್ಯಗಾರ

Hosanagara | ಯಕ್ಷಗಾನ ಕಲೆಯನ್ನು ಉಳಿಸಿ ,ಬೆಳೆಸುವ ಜವಬ್ದಾರಿ ನಮ್ಮ ಮೇಲಿದೆ – ಪಟ್ಲ ಸತೀಶ್

ಸಾಂಸ್ಕೃತಿಕ ಲೋಕಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ಹೆಮ್ಮೆಯ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದ್ದು, ಈ ನಿಟ್ಟಿನಲ್ಲಿ ಶಾಲೆಯ ಮಕ್ಕಳಿಗೆ ಯಕ್ಷ ಶಿಕ್ಷಣ ನೀಡಲು ಯಕ್ಷದೃವ ಪಟ್ಲ ಟ್ರಸ್ಟ್ ಫೌಂಡೇಶನ್ ಮುಂದಾಗಿದೆ ಎಂದು ಟ್ರಸ್ಟ್ ಸ್ಥಾಪಕ, ಪ್ರಸಿದ್ಧ ಭಾಗವತ ಪಟ್ಲ ಸತೀಶ್ ಶೆಟ್ಟಿ ಹೇಳಿದರು.

ಪಟ್ಟಣದ ಆರ್ಯಈಡಿಗ ಸಭಾಭವನದಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಯೋಜನೆಯಡಿಯಲ್ಲಿ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ 2024-25ನೇ ಉಚಿತ ಯಕ್ಷಗಾನ ತರಬೇತಿ ಉದ್ಘಾಟನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಸಾವಿರಾರು ಮಕ್ಕಳಿಗೆ ತರಬೇತಿ ನೀಡಲಾಗಿದೆ ಮುಂದಿನ ದಿನದಲ್ಲಿ ಅವರಿಗೆ ವೇದಿಕೆ ಒದಗಿಸುವ ಪ್ರಯತ್ನವೂ ನಡೆಯಲಿದೆ ಎಂದರು.

ಶಾಲೆಯ ಮಕ್ಕಳಿಗೆ ಸಾಂಸ್ಕೃತಿಕ ಶಿಕ್ಷಣಕ್ಕೆ ಹೆಚ್ಚಿನ ಸೌಲಭ್ಯಗಳು ಇರುವುದಿಲ್ಲ. ಅವರಿಗೆ ಬಾಲ್ಯದಲ್ಲೇ ಯಕ್ಷಗಾನದ ಬಗ್ಗೆ ಜ್ಞಾನ ಹಾಗೂ ಅಭಿರುಚಿ ಮೂಡಿಸುವುದು ಟ್ರಸ್ಟ್ ಉದ್ದೇಶವಾಗಿದೆ ಎಂದರು.

ಹಿರಿಯ ಕಲಾವಿದರ ಪೈಕಿ ಕೆಲವರು ಶಾಲಾ ಶಿಕ್ಷಣ ಪಡೆಯದಿದ್ದರೂ ರಂಗದಲ್ಲಿ ಅದ್ಭುತ ಭಾಷಾ ಪಾಂಡಿತ್ಯ, ವಾಕ್ ಚಾತುರ್ಯದ ಮೂಲಕ ಪ್ರಸಿದ್ದಿ ಸಂಪಾದಿಸಿದ್ದಾರೆ. ಅದುವೇ ಯಕ್ಷಗಾನ ಕಲಾವಿದರು ಕನಿಷ್ಟ ಸಂಬಳ ಪಡೆದು ಮೇಳದಲ್ಲಿ ಕೆಲಸ ಮಾಡುತ್ತಿದ್ದರು ತಮ್ಮ ಕುಟುಂಬದ ನಿರ್ವಹಣೆಯ ಜೊತೆಗೆ ಕಲೆಯನ್ನು ಬೆಳೆಸಿಕೊಂಡು ಬಂದಿದ್ದಾರೆ ಕಲಾವಿದರು ಯಾವುದೇ ತೊಂದರೆಗೊಳಗಾಗದೇ ಬದುಕು ಸಾಗಿಸುವುದೇ ಕಷ್ಟಕರವಾಗಿತ್ತು ಇಂತಹ ಸ್ಥಿತಿಯನ್ನು ಕಲಾವಿದರು ಯಾವುದಾದರೂ ರೀತಿಯಲ್ಲಿ ಸಹಾಯ ಮಾಡಬೇಕೆಂಬ ಆಶಯ ಉಂಟಾಯಿತು. ದೇವರ ದಯೆಯಿಂದ ನನ್ನುನ್ನು ಪ್ರೀತಿಸುವ ಯಕ್ಷಗಾನ ಕಲೆಯನ್ನು ಗೌರವಿಸುವ ದೊಡ್ಡ ಜನ ಸಮೂಹದ ಮೂಲಕ ನನಗೆ ದೊರೆತಿದೆ ಇದರಿಂದ ಯಶಸ್ವಿಯಾಗಿ ಯಕ್ಷಧೃವ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪನೆ ಮಾಡಲಾಗಿದೆ. ಮಲೆನಾಡಿನಲ್ಲಿ ಬಾಲ್ಯದಲ್ಲಿಯೇ ಯಕ್ಷಗಾನವನ್ನು ಮಕ್ಕಳಿಗೆ ಕಲಿಸಬೇಕೆಂದು ಕಲೆಯನ್ನು ಉಳಿಸಬೇಕೆಂಬ ಉದ್ದೇಶದಿಂದ ನಾನು ಇಲ್ಲಿಗೆ ಬಂದಿದ್ದು ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಿಮ್ಮ ಮೇಲಿದ್ದು ಎಲ್ಲರೂ ಸೇರಿ ಯಕ್ಷಗಾನ ಕಲೆ ಉಳಿಸೋಣ ಎಂದರು.


ಈ ಕಾರ್ಯಕ್ರಮವನ್ನು ಶಾಸಕರಾದ ಬೇಳೂರು ಗೋಪಾಲಕೃಷ್ಣ ಉದ್ಘಾಟಿಸಿ ಮಾತನಾಡಿ, ಯಕ್ಷಗಾನ ಇಂದಿನ ಕಾಲದಲ್ಲಿ ಟಿ.ವಿ ಮೊಬೈಲ್ ದಾಳಿಯಿಂದ ನಶಿಸಿ ಹೋಗುತ್ತಿದೆ. ಇದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದ್ದು ನಮ್ಮ ಮಕ್ಕಳಿಗೆ ಯಕ್ಷಗಾನ ಕಲೆಯನ್ನು ಕಲಿಸೋಣ ಯಕ್ಷಗಾನ ಕಲೆಯನ್ನು ಉಳಿಸೋಣ ಎಂದರು.

ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ಕರಾವಳಿ ಪ್ರದೇಶದಲ್ಲಿ ಇಂದಿಗೂ ಯಕ್ಷಗಾನ ಪ್ರಚಲಿತದಲ್ಲಿದೆ‌. ಕರಾವಳಿ ಪ್ರದೇಶದಲ್ಲಿ ಕಲಾವಿದರು ಸಾಕಷ್ಟಿದ್ದು ಅವರ ಜೀವನ ಕಷ್ಟಕರವಾಗಿದೆ ಜೀವನ ಕಷ್ಟಕರವಾಗಿರುವುದರಿಂದ ಯಕ್ಷಗಾನ ಕಲೆ ನಶಿಸುತ್ತಿದ್ದು ಈ ಕಲೆಯನ್ನು ಮುಂದುವರೆಸಲು ನಾವು ನೀವು ಸೇರಿ ಕಲೆ ಉಳಿಸೋಣ ಬೆಳೆಸೋಣ ಎಂದರು.

ಪತ್ರಕರ್ತ ನಗರ ರಾಘವೇಂದ್ರ ಪ್ರಾಸ್ತಾವಿಕವಾಗಿ ಮಾತನಾಡಿ, ಹೊಸನಗರ ತಾಲ್ಲೂಕಿನಲ್ಲಿ ಹತ್ತು ಶಾಲೆಗಳಲ್ಲಿ 10 ಜನ ಯಕ್ಷಗಾನ ಶಿಕ್ಷಕರನ್ನು ನೇಮಿಸಲಾಗಿದ್ದು ಅವರಿಗೆ ಪ್ರತಿ ತಿಂಗಳು 18 ಸಾವಿರ ಸಂಬಳವನ್ನು ಪಟ್ಲ ಪೌಂಡಿಶನ್ ವತಿಯಿಂದ ನೀಡಲಾಗುತ್ತಿದೆ. ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.


ಈ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ ಕುಬೇಂದ್ರಪ್ಪ, ಚಂದ್ರಮೌಳಿ ಗೌಡ, ಕೆ.ವಿ ಸುಬ್ರಹ್ಮಣ್ಯ, ಕೆ.ವಿ ಕೃಷ್ಣಮೂರ್ತಿ, ಡಾ. ಶಾಂತರಾಮ ಪ್ರಭು, ಸುಬ್ರಹ್ಮಣ್ಯ, ದುಮ್ಮ ವಿನಯ್‌ಕುಮಾರ್, ದೇವರಾಜ್, ಅಶ್ವಿನಿ ಪಂಡಿತ್ ವೆಂಕಟೇಶ್‌ಮೂರ್ತಿ, ಗೌತಮ್ ಕುಮಾರಸ್ವಾಮಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…

15 hours ago

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ – ಆರೋಪಿ ಅರೆಸ್ಟ್!

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…

15 hours ago

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…

16 hours ago

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…

16 hours ago

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…

1 day ago

ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ

ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…

1 day ago