Ripponpete | ಪರಿಷತ್ ಚುನಾವಣೆ ಮತದಾನ ಮಾಡಿದ ಮಾಜಿ ಸಚಿವ ಹರತಾಳ ಹಾಲಪ್ಪ

Ripponpete | ಪರಿಷತ್ ಚುನಾವಣೆ ಮತದಾನ ಮಾಡಿದ ಮಾಜಿ ಸಚಿವ ಹರತಾಳ ಹಾಲಪ್ಪ

ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳು ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಗೆಲ್ಲಲಿದ್ದಾರೆ – ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ : ಇಂದು ನಡೆದ ನೈರುತ್ಯ ಪದವೀಧರ ಹಾಗೂ ಶಿಕ್ಷಕರ  ಕ್ಷೇತ್ರ ಚುನಾವಣೆಯಲ್ಲಿ ರಿಪ್ಪನ್‌ಪೇಟೆ ಬೂತ್ ಸಂಖ್ಯೆ ೪೪ ರಲ್ಲಿ  ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪನವರು ಮೊದಲ ಮತ ಚಲಾಯಿಸಿದರು.


ನಂತರ ಮಾಧ್ಯಮದವರೊಂದಿಗೆ ಮಾತನಾಡಿ  ಪದವೀಧರ ಮತ್ತು ಶಿಕ್ಷಕರ  ಪ್ರಾಶಸ್ತö್ಯದ ಮತದಾನ ಮತ್ತು ಎರಡನೇ  ಮತದಾನಕ್ಕೆ  “ಗುರುತು’’ ಮಾಡುವ ವಿಧಾನದಲ್ಲಿ ಮತದಾರರಲ್ಲಿ ಗೊಂದಲವಿದೆ ಇದಕ್ಕೆ ಸರಿಯಾದ ತರಬೇತಿ ನೀಡಬೇಕಾಗಿತು. ಸರ್ಕಾರ ಮುಂದಿನ ಭಾರಿಯಲ್ಲಿ  ಪದವೀಧರರ ಮತ್ತು ಶಿಕ್ಷಕರ ಚುನಾವಣೆಯಲ್ಲಿನ ಮತದಾನಕ್ಕೆ  ಮತದಾರರಿಗೆ ತರಬೇತಿ ನೀಡುವ ಪದ್ದತಿಯನ್ನು ಜಾರಿಗೆ ತರಬೇಕು  ಎಂದು ಸರ್ಕಾರವನ್ನು ಆಗ್ರಹಿಸಿದರು.

ಈ ಭಾರಿಯಲ್ಲಿ ಚುನಾವಣೆಯಲ್ಲಿ ಎನ್.ಡಿ.ಎ,ಮೈತ್ರಿ ಅಭ್ಯರ್ಥಿಗಳಾದ ಡಾ.ಧನಂಜಯಸರ್ಜಿ ಮತ್ತು ಎಸ್.ಎಲ್.ಭೋಜೆಗೌಡರು ಗೆಲುವಿ ನಿಶ್ಚಿತವಾಗಿದ್ದು  ನಮ್ಮ ಚುನಾವಣಾ ಪ್ರವಾಸದಲ್ಲಿ ಉತ್ತಮ ಸ್ಪಂದನೆ ದೊರಕಿದು ನೋಡಿದರೆ  ಮತದಾರರ ಒಲವು ಪಕ್ಷದ ಪರವಾಗಿರುವುದು ನಮಗೆ  ಹೆಚ್ಚು ಬಹುಮತ ಬರುವುದರಲ್ಲಿ ಸಂದೇಹವಿಲ್ಲ ಎಂದು ಹೇಳಿ ಕಾರ್ಯಕರ್ತರು ಹಗಲು ರಾತ್ರಿ ಎಲ್ಲದೇ ಮತದಾರರನ್ನು ತಲುವು ಮೂಲಕ ಸತತ ಪ್ರಯತ್ನ  ಫಲವೇ ಪಕ್ಷದ ಗೆಲುವಿಗೆ ಸಹಕಾರಿಯಾಗುವುದೆಂದು ಹೇಳಿ ಕಾರ್ಯಕರ್ತರನ್ನು  ಶ್ಲಾಘಿಸಿದರು.

ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳು ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಗೆಲ್ಲಲಿದ್ದಾರೆ – ಆರಗ ಜ್ಞಾನೇಂದ್ರ


ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಈ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯದ ಮತಗಳಿಂದ ಗೆಲುವು ಸಾಧಿಸುವುದು ನಿಶ್ಚಿತ ಎಂದು ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ಪರಿಷತ್ ಚುನಾವಣೆಯ ಮತಗಟ್ಟೆಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ ನಂತರ ಮಾತನಾಡಿದ ಅವರು ಮೈತ್ರಿ ಅಭ್ಯರ್ಥಿಗಳಾದ ಡಾ ಧನಂಜಯ್ ಸರ್ಜಿ ಹಾಗೂ ಬೋಜೆಗೌಡ ಪ್ರಥಮ ಪ್ರಾಶಸ್ತ್ಯದ ಮತಗಳಲ್ಲಿಯೇ ಗೆಲ್ಲುವ ವಿಶ್ವಾಸವಿದೆ . ಚಿಂತಕರ ಚಾವಡಿಯಾದ ವಿಧಾನ ಪರಿಷತ್ ಗೆ ಬೋಜೆಗೌಡ ಹಾಗೂ ಡಾ ಧನಂಜಯ್ ಸರ್ಜಿ ರವರಂತಹ ವಿಚಾರವಂತರು ಆಯ್ಕೆಯಾದರೆ ಉತ್ತಮ ಕಾನೂನುಗಳನ್ನು ಜಾರಿಗೆ ತರಲು ಸಾಧ್ಯ ಎಂದರು.

ಈ ಸಂಧರ್ಭದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಆಧ್ಯಕ್ಷ  ಎನ್.ಸತೀಶ್, ಪ್ರಧಾನ ಕಾರ್ಯದರ್ಶಿ ಸುಂದರೇಶ್ ,ತಾಲ್ಲೂಕ್ ಬಿಜೆಪಿ ಮಾಜಿ ಆಧ್ಯಕ್ಷ ಗಣಪತಿ ಬೆಳಗೋಡು,ಬಿಜೆಪಿ ಮುಖಂಡರಾದ ಎಂ.ಬಿ.ಮಂಜುನಾಥ,ಎಂ.ಸುರೇಶ್‌ಸಿಂಗ್, ಪಿ ರಮೇಶ್ , ನಾಗಾರ್ಜುನ ಸ್ವಾಮಿ, ಸೋಮಶೇಖರ್, ಹೆಚ್.ಎಂ.ರಾಘವೇಂದ್ರ, ಪರಮೇಶ್ ಕೆಂಚನಾಲ,ಜಿ.ಡಿ.ಮಲ್ಲಿಕಾರ್ಜುನ,ಮುರುಳಿಧರ ಕೆರೆಹಳ್ಳಿ,ಲೀಲಾ ಶಂಕರ್ ,ನಾಗರತ್ನ ದೇವರಾಜ್ ಹಾಗೂ ಇನ್ನಿತರರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

12 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

12 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

13 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago