Ripponpete | ಸಾಗರ ರಸ್ತೆಯಲ್ಲಿ ಉರಿಯದ ಬೀದಿ ದೀಪ, ಎರಡು ತಿಂಗಳಾದರೂ ಹರಿಯದ ನೀರು, ಸಂಕಷ್ಟದಲ್ಲಿ ನಾಗರೀಕರು

Ripponpete | ಸಾಗರ ರಸ್ತೆಯಲ್ಲಿ ಉರಿಯದ ಬೀದಿ ದೀಪ, ಎರಡು ತಿಂಗಳಾದರೂ ಹರಿಯದ ನೀರು, ಸಂಕಷ್ಟದಲ್ಲಿ ನಾಗರೀಕರು

ರಿಪ್ಪನ್‌ಪೇಟೆ : ಇಲ್ಲಿನ ಸಾಗರ ರಸ್ತೆಯಲ್ಲಿ ರಸ್ತೆ ಅಗಲೀಕರಣ ನೆಪದಲ್ಲಿ ಕಳೆದ ನಾಲ್ಕು ಐದು ತಿಂಗಳಿಂದ ಕುಡಿಯುವ ನೀರಿನ ಪೈಪ್‌ಲೈನ್ ಹಾಳಾಗಿ ಸಾರ್ವಜನಿಕರಿಗೆ ಶುದ್ದ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ ಇನ್ನು ಇದರೊಂದಿಗೆ  ವಿದ್ಯುತ್ ಕಂಬಗಳ ಸ್ಥಳಾಂತರವಾದರೂ ಕೂಡಾ ಕಂಬಕ್ಕೆ ಬೀದಿ ದೀಪ ಅಳವಡಿಸದೇ ಕತ್ತಲೆಯಲ್ಲಿ ಕಾಲಕಳೆಯುವಂತಾಗಿದೆ ಎಂದು ಸಾಗರ ರಸ್ತೆಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಾಗರ ತೀರ್ಥಹಳ್ಳಿ ರಾಜ್ಯ ಹೆದ್ದಾರಿಯ ಮಾರ್ಗದ  ಎಪಿಎಂಸಿ ಯಿಂದ ವಿನಾಯಕ ವೃತ್ತದ ಮೂಲಕ  ತೀರ್ಥಹಳ್ಳಿ ರಸ್ತೆಯ ಗಾಂಧಿನಗರ ವರೆಗೆ ತಲಾ ಒಂದೊಂದು ಕಿ.ಮೀ ರಸ್ತೆ ಆಗಲೀಕರಣ ಕಾಮಗಾರಿಗೆ 4.85 ಕೋಟಿ ಸರ್ಕಾರದ ಅನುದಾನವನ್ನು ಬಿಡುಗಡೆ ಮಾಡಿದ್ದು ಈ ಕಾಮಗಾರಿ ಇನ್ನೂ ಅಮೆಗತಿಯಲ್ಲಿ ಸಾಗುತ್ತಿದ್ದ ಮಳೆಗಾರ ಆರಂಭವಾಗಿ ಇನ್ನೂ  ಕಾಮಗಾರಿ ಅರ್ಧಕ್ಕೆ ನಿಲ್ಲುವಂತಾಗಿ ಸಾರ್ವಜನಿಕರು ವಿದ್ಯಾರ್ಥಿಗಳು ಅಗಲೀಕರಣಕ್ಕಾಗಿ ತಗೆಯಲಾಗಿರುವ  ಡಾಂಬರೀಕರಣ ರಸ್ತೆ  ಈಗ ಕೆಸರು  ಗದ್ದೆಯಂತಾಗಿ ವಿನಾಯಕ ವೃತ್ತಕ್ಕೆ  ಸಮೀಪದಲ್ಲಿಯ  ಸಾರ್ವಜನಿಕ ಸಂಪರ್ಕದ  ನೀರು ಸರಬರಾಜು ಪೈಪ್‌ಲೈನ್  ರಸ್ತೆ ಕಾಮಗಾರಿ ಹಂತದಲ್ಲಿ ಒಡೆದು ನೀರು ಭೂಮಿಯ ಪಾಲಾಗುವಂತಾಗಿದೆ. ಸಾಕಷ್ಟು ಭಾರಿ ಈ ನಾಧುರಸ್ತ ಪೈಪ್ ಲೈನ್ ದುರಸ್ಥಿ ಮಾಡಲಾಗುತ್ತಿದ್ದರು ಪ್ಯಾಚ್ ನಿಲ್ಲದೆ ಪದೇ ಪದೇ ಒಡೆದು ಹೋಗುತ್ತಿದೆ ರಿಪೇರಿ ಮಾಡುವುದೇ ದೊಡ್ಡ ತಲೆನೋವು ಎಂದು ಹೇಳುತ್ತಿದ್ದಾರೆ.

ಸಾಗರ ರಸ್ತೆಯಲ್ಲಿ ಸಂಜೆ ಮತ್ತು ಮುಂಜಾನೆಯಲ್ಲಿ ಕಾಲೇಜ್ ಹೈಸ್ಕೂಲ್ ಕ್ರೀಡಾಂಗಣದಲ್ಲಿ ಹಲವರು ವಾಯ ವಿಹಾರಕ್ಕಾಗಿ ಮಹಿಳೆಯರು ಮತ್ತು ಪುರುಷರು ವಯೋವೃದ್ದರು ಹೀಗೆ  ಬೆಳಗ್ಗೆ  ಷಟಲ್ ಕಾಕ್ ಬ್ಯಾಟ್ ಮಿಂಟನ್ ಮತ್ತು ಕ್ರಿಕೇಟ್ ಆಟವಾಡಲು ಮಕ್ಕಳು ಬಂದು ಹೋಗುತ್ತಾರೆ,ಅದರೆ ಬೀದಿ ದೀಪಾವಿಲ್ಲದೆ ಸಾರ್ವಜನಿಕರು ಓಡಾಡುವುದೇ ಕಷ್ಟಕರವಾಗಿದೆ.ಇದರೊಂದಿಗೆ ಎಪಿಎಂಸಿ ಸಂತೆ ಮಾರ್ಕೆಟ್‌ನಲ್ಲಿ ಸಹ ಬೀದಿ ದೀಪಗಳಿಲ್ಲದೆ ಬಿಡಾಡಿ ಜಾನುವರುಗಳ ಕಳವು ಮಾಡಿಕೊಂಡು ಪರಾರಿಯಾಗಲು ಕಳ್ಳ ಕಾಕರಿಗೆ ರಹದಾರಿಯಾದಂತಾಗಿದೆ.ಕತ್ತಲೆಯಲ್ಲಿ ಯಾರು ಏನು ಮಾಡುತ್ತಿದ್ದಾರೆಂಬುದೇ ತಿಳಿಯದಂತಾಗಿದೆ.

ಸೋಮವಾರ ಸಂತೆಯ ದಿನ ರಾತ್ರಿ ಇಲ್ಲಿ ಬೀದಿ ದೀಪಗಳಿಲ್ಲದೆ ಬೆಳಕಿನಲ್ಲಿಯೇ ಸಂತೆ ವಹಿವಾಟು ಮಾಡಬೇಕಾಗಿದೆ ಇತ್ತ ಗ್ರಾಮಾಡಳತ ಕರವಸೂಲಿ ಮಾತ್ರ ಯಾವುದೇ ಮೂಲಭೂತ ಸೌಲಭ್ಯಗಳಿಲ್ಲದಿದ್ದರು ಕೂಡಾ ವಸೂಲಾತಿಯನ್ನು ಕಡ್ಡಾಯವಾಗಿ ಮಾಡುತ್ತಾರೆ.ಹಾಗಾದರೆ ಯಾರು ಈ ಎಲ್ಲ ಮೂಳಭೂತ ಸೌಲಭ್ಯವನ್ನು ಒದಗಿಸುವವರು ಎಂಬ ಬಗ್ಗೆ ಸಾರ್ವಜನಿಕರು ತೀವ್ರ ಆಕ್ರೋಶವನ್ನು ವ್ಯಕ್ತ ಪಡಿಸುವಂತಾಗಿದೆ.

ಸಂತೆ ಮಾರುಕಟ್ಟೆಯಲ್ಲಿ ಸ್ವಚ್ಚತೆ ಎಂಬುದಂತು ಮೇರಿಚಿಕೆಯಾಗಿದೆ ಎಲ್ಲೆಂದರಲ್ಲಿ ಕಸದ ರಾಶಿ ಚರಂಡಿ ತುಂಬ ಕೊಳತು ನಾರುವ ತರಕಾರಿಗಳ ರಾಶಿ ಅಲ್ಲಿಯೇ ಮೀನು, ಕೋಳಿ ಅಂಗಡಿ ಹೀಗೆ ಕಲುಷಿತ ನೀರು ಚರಂಡಿಯಲ್ಲಿ ಸಂಗ್ರಹಗೊಂಡು ಸೊಳ್ಳೆಗಳ ಆಶ್ರಯ ತಾಣವನ್ನಾಗಿಸಿದೆ.

ಇನ್ನಾದರೂ ಸಂಬಂದಪಟ್ಟ ಗ್ರಾಮಾಡಳಿತ ಇತ್ತ ಗಮನಹರಿಸಿ ಬೀದಿ ದೀಪ ಮತ್ತು ಸಂತೆ ಮಾರುಕಟ್ಟೆಯನ್ನು ಸ್ವಚ್ಚಗೊಳಿಸುವರೇ ಕಾದುನೋಡಬೇಕಾಗಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀಂದ್ರ ಪೂಜಾರಿ , ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆಯ್ಕೆ – ಪದಾಧಿಕಾರಿಗಳ ವಿವರ ಇಲ್ಲಿದೆ

RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀರ್ ಪಿ , ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆಯ್ಕೆ –…

8 hours ago

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…

24 hours ago

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…

1 day ago

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ – ಗ್ರಾಮಸ್ಥರಲ್ಲಿ ಅಚ್ಚರಿ

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…

1 day ago

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ – ನಗದು ಸಹಿತ ಆರೋಪಿ ವಶಕ್ಕೆ

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…

2 days ago

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…

2 days ago