Ripponpete | ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ – ಗ್ರಾಮಾಡಳಿತದಿಂದ ವಿವಿಧ ವಾರ್ಡ್ ಗಳಲ್ಲಿ ಔಷದಿ ಸಿಂಪಡಣೆ
ರಿಪ್ಪನ್ಪೇಟೆ : ಮಳೆಗಾಲ ಪ್ರಾರಂಭವಾಗಿರುವ ಹಿನ್ನಲೆಯಲ್ಲಿ ಪಟ್ಟಣದ ವ್ಯಾಪ್ತಿಯಲ್ಲಿ ಹಲವಾರು ಡೆಂಗ್ಯೂ ಪ್ರಕರಣಗಳು ಕಂಡುಬಂದ ಹಿನ್ನಲೆಯಲ್ಲಿ ಗ್ರಾಮಾಡಳಿತ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಮುಂಜಾಗ್ರತಾ ಕ್ರಮವಾಗಿ ಸಾಂಕ್ರಾಮಿಕ ರೋಗ ತಡೆಗಟ್ಟವ ನಿಟ್ಟಿನಲ್ಲಿ ಹಾಗೂ ಸೊಳ್ಳೆಗಳ ನಿಯಂತ್ರಣಕ್ಕಾಗಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ವಿವಿಧ ವಾರ್ಡ್ ಗಳಲ್ಲಿ ಕ್ರಿಮಿನಾಶಕ ಔಷಧ ಸಿಂಪಡಣೆ ಕಾರ್ಯ ನಡೆಯಿತು.
ಪಟ್ಟಣದ ಗಾಂಧಿನಗರ , ಮದೀನಾ ಕಾಲೋನಿ ಹಾಗೂ ವಿವಿಧ ವಾರ್ಡ್ ಗಳಲ್ಲಿ ಸಾಂಕ್ರಾಮಿಕ ರೋಗಗಳನ್ನು ತಡೆಯುವ ನಿಟ್ಟಿನಲ್ಲಿ ಔಷದಿ ಸಿಂಪಡಣೆ ಕಾರ್ಯ ನಡೆಯಿತು.ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಗ್ರಾಮಾಡಳಿತ ಜಂಟಿಯಾಗಿ ವಿವಿಧ ಸ್ಥಳಗಳಲ್ಲಿ ಸಮೀಕ್ಷೆ ನಡೆಸಿ ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮಗಳ ಅರಿವು ಮೂಡಿಸಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಮಳೆ ಬಂದಾಗ ನೀರು ಸಂಗ್ರಹವಾಗಿ ಸೊಳ್ಳೆಗಳ ಸಂತತಿ ಜಾಸ್ತಿಯಾಗಲಿದ್ದು, ಔಷಧ ಸಿಂಪಡಣೆ ಮೂಲಕ ನಿಯಂತ್ರಿಸಬೇಕಿದೆ. ಹೂವಿನ ಕುಂಡಗಳು, ಬಿಸಾಡಿದ ಟೈರ್ಗಳು, ನೀರು ಸಂಗ್ರಹ ತೊಟ್ಟಿ, ನೀರಿನ ಬಾಟಲಿ ಸೇರಿದಂತೆ ಇತರೆಡೆ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಹೀಗಾಗಿ, ಇಂಥ ಕಡೆ ನೀರು ಸಂಗ್ರಹವಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ,” ಎಂದರು.
ಡೆಂಗೆ ನಿಯಂತ್ರಿಸುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣ, ವಾರ್ಡ್ ಮಟ್ಟದಲ್ಲಿ ಜಾಗೃತಿ ಹಾಗೂ ಕಸದ ವಾಹನಗಳಲ್ಲಿ ಧ್ವನಿವರ್ಧಕಗಳ ಮೂಲಕ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಜತೆಗೆ, ಮನೆ- ಮನೆಗೆ ಡೆಂಗೆ ನಿಯಂತ್ರಣ ಕುರಿತ ಭಿತ್ತಿಪತ್ರಗಳನ್ನು ವಿತರಿಸಿ, ಪಾಲಿಸಬೇಕಾದ ಕ್ರಮಗಳ ಬಗ್ಗೆಯೂ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ ,ಆರೋಗ್ಯ ಇಲಾಖೆಯ ಡಾ ಆಂಜನೆಯ , ಅಮೃತೇಶ್ ಪಿಡಿಓ ಮಧುಸೂಧನ್ ಗ್ರಾಪಂ ಸದಸ್ಯರಾದ ಮಧುಸೂಧನ್ , ಗಣಪತಿ ಗವಟೂರು , ಮಹಾಲಕ್ಷ್ಮಿ ಅಣ್ಣಪ್ಪ , ನಿರುಪಮಾ ರಾಕೇಶ್ ,ಪ್ರಕಾಶ್ ಪಾಲೇಕರ್ , ಸಾರಾಭಿ ಸಿಬ್ಬಂದಿಗಳಾದ ನಾಗೇಶ್ , ಉಮೇಶ್ ಹಾಗೂ ಇನ್ನಿತರರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್