Ripponpete | ಪರಿಷತ್ ಚುನಾವಣೆ – ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ನಿಶ್ಚಿತ – ಆರ್ ಎಂ ಮಂಜುನಾಥ್ ಗೌಡ

ಪರಿಷತ್ ಚುನಾವಣೆ – ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ – ಆರ್ ಎಂ ಮಂಜುನಾಥ್ ಗೌಡ

ರಿಪ್ಪನ್‌ಪೇಟೆ : ವಿಧಾನಪರಿಷತ್ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಎಂಎಡಿಬಿ ಅಧ್ಯಕ್ಷ ಮಂಜುನಾಥ್ ಗೌಡ ಹೇಳಿದರು.

ಪಟ್ಟಣದ ಪರಿಷತ್ ಚುನಾವಣೆಯ ಮತಗಟ್ಟೆಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ್ ಹಾಗೂ ಶಿಕ್ಷಕರ ಕ್ಷೇತ್ರದಿಂದ ಮಂಜುನಾಥ್ ಕೆ.ಕೆ.ಅವರನ್ನು ಪಕ್ಷ ಕಣಕ್ಕೆ ಇಳಿಸಿದೆ. ಆಯನೂರು ಮಂಜುನಾಥ್ ಅವರು ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಕಷ್ಟು ಅನುಭವ ಹೊಂದಿದ್ದಾರೆ. ಹಲವು ಹೋರಾಟಗಳಲ್ಲಿ ಭಾಗಿಯಾಗಿದ್ದು, ಚಿರಪರಿಚಿತರಾಗಿರುವುದು ಗೆಲುವಿಗೆ ಸಹಕಾರಿ ಆಗಲಿದೆ ಎಂದರು.

ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ ಮುಂದಿನ ದಿನಗಳಲ್ಲಿ ಶಿಕ್ಷಕರ ಕ್ಷೇತ್ರದಲ್ಲಿರುವ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಲು ಸರಕಾರ ಬದ್ಧವಾಗಿದೆ. ಪ್ರಸ್ತುತ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ಕಾರಣಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳೇ ಗೆಲ್ಲುವುದು ಹೆಚ್ಚು ಸೂಕ್ತ ಎಂದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ಹಾಗೂ ವಿಧಾನಪರಿಷತ್ ಮಾಜಿ ಸದಸ್ಯ ಪ್ರಸನ್ನಕುಮಾರ್ , ಕಲಗೋಡು ರತ್ನಾಕರ್ ಹಾಗೂ ಜಿಲ್ಲಾ ಮುಖಂಡರು ರಿಪ್ಪನ್‌ಪೇಟೆ ಮತಗಟ್ಟೆ ಸಂಖ್ಯೆ44 ಕ್ಕೆ ಭೇಟಿ‌ ನೀಡಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

ಈ ಸಂಧರ್ಭದಲ್ಲಿ ಮುಖಂಡರಾದ ಕಲಗೋಡು ರತ್ನಾಕರ್ , ಬಿ ಪಿ ರಾಮಚಂದ್ರ , ಅಮೀರ್ ಹಂಜಾ ,ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ, ರಿಪ್ಪನ್‌ಪೇಟೆ ಘಟಕದ ಅಧ್ಯಕ್ಷ ಗಣಪತಿ ಗವಟೂರು ಆಸೀಫ಼್ ಭಾಷಾ , ಚಂದ್ರೇಶ್ , ಯಶಸ್ವತಿ ವೃಷಭರಾಜ್ ಜೈನ್, ರಮೇಶ್ ಫ್ಯಾನ್ಸಿ , ಹಾಗೂ ಇನ್ನಿತರರಿದ್ದರು.

Leave a Reply

Your email address will not be published. Required fields are marked *