ರಿಪ್ಪನ್ಪೇಟೆ – ಒತ್ತುವರಿಯಾಗಿದ್ದ ಸ್ಮಶಾನದ ಜಾಗ ತೆರವುಗೊಳಿಸಿದ ತಹಶೀಲ್ದಾರ್ ರಶ್ಮಿ ಹಾಲೇಶ್ | Ripponpet
ರಿಪ್ಪನ್ಪೇಟೆ : ಬಾಳೂರು ಗ್ರಾಪಂ ಪಂಚಾಯತಿಗೆ ಒಳಪಡುವ ಮಾವಿನಸರ ಗ್ರಾಮದ ಸರ್ವೆ ನಂ 13 ರಲ್ಲಿ ಹಲವಾರು ವರ್ಷಗಳಿಂದ ಒತ್ತುವರಿಯಾಗಿದ್ದ ಸ್ಮಶಾನದ ಜಾಗವನ್ನು ಹೈಡ್ರಾಮಗಳ ನಡುವೆ ಹೊಸನಗರ ತಹಶೀಲ್ದಾರ್ ರಶ್ಮಿ ಒಳಗೊಂಡ ಅಧಿಕಾರಿಗಳ ತಂಡ ತೆರವುಗೊಳಿಸುವಲ್ಲಿ ಯಶಸ್ವಿಯಾಗಿದೆ.
ತಾಲ್ಲೂಕು ಆಡಳಿತ ಈ ಹಿಂದೆಯೇ ಒತ್ತುವರಿಯಾಗಿದ್ದ ಜಾಗವನ್ನು ಗ್ರಾಮಸ್ಥರ ಮನವಿ ಮೇರೆಗೆ ಜಾಗದ ಅಳತೆ ಮಾಡಿಸಿ ಒತ್ತುವರಿ ಮಾಡಿದ್ದ ಜಮೀನುಗಳ ಮಾಲೀಕರಿಗೆ ನೋಟೀಸ್ ಜಾರಿ ಮಾಡಿದ್ದರೂ ಸ್ಮಶಾನದ ಜಾಗವನ್ನು ತೆರವುಗೊಳಿಸದೇ, ಯಾರೇನು ಮಾಡಿಯಾರು ಎಂಬ ಧೋರಣೆಯಲ್ಲಿ ತೆರವುಗೊಳಿಸದೇ ಇತ್ತೀಚೆಗೆ ಮನೆ ನಿರ್ಮಾಣಕ್ಕೆ ಮುಂದಾಗಿದ್ದರು.
ಈ ಹಿನ್ನಲೆಯಲ್ಲಿ ಇಂದು ಹೊಸನಗರ ತಹಶೀಲ್ದಾರ್ ರಶ್ಮಿ ಹಾಗೂ ರಿಪ್ಪನ್ಪೇಟೆ ಪಿಎಸ್ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳ ತಂಡ ಕಾರ್ಯಾಚರಣೆ ನಡೆಸಿ ಒತ್ತುವರಿಯಾಗಿದ್ದ ಜಾಗವನ್ನು ತೆರವುಗೊಳಿಸಿದ್ದಾರೆ.
ಕಾರ್ಯಾಚರಣೆ ವೇಳೆಯಲ್ಲಿ ಒತ್ತುವರಿ ಮಾಡಿಕೊಂಡಿರುವ ಮಹಿಳೆಯೊಬ್ಬರು ವಿಷ ತೆಗೆದುಕೊಳ್ಳುವುದಾಗಿ ಬೆದರಿಸಿ ಹೈಡ್ರಾಮ ನಡೆಸಿದ್ದಾರೆ.ಈ ವೇಳೆಯಲ್ಲಿ ತಹಶೀಲ್ದಾರ್ ರಶ್ಮಿ ಹಾಗೂ ಪಿಎಸ್ಐ ಮಧ್ಯ ಪ್ರವೇಶಿಸಿ ಮಹಿಳೆಯೊಂದಿಗೆ ಮಾತನಾಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.
ಮಾವಿನಸರ ಭಾಗದಲ್ಲಿ ಇತ್ತೀಚೆಗೆ ಅಕ್ರಮ ಭೂ ಮಾಫಿಯಾ ಹೆಚ್ಚಾಗಿದ್ದು ನೂರಾರು ಎಕರೆಯಷ್ಟು ಸರ್ಕಾರಿ ಭೂಮಿ ಉಳ್ಳವರ ಪಾಲಾಗುತ್ತಿದೆ. ಈ ಬಗ್ಗೆ ಮುಂದಿನಗಳಲ್ಲಿ ವರದಿ ತರಿಸಿಕೊಂಡು ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಹಶೀಲ್ದಾರ್ ಭರವಸೆ ನೀಡಿದ್ದಾರೆ.
ಕಾರ್ಯಾಚರಣೆಯಲ್ಲಿ ಕಂದಾಯ ಇಲಾಖೆಯ ಶಿರಸ್ತೆದಾರರು ಮಂಜುನಾಥ್ , ಸೈಯದ್ ಅಫ಼್ರೋಜ್ , ಕೌಶಿಕ್ , ನವೀನ್ , ಅಮ್ಜದ್ ಖಾನ್ , ಅಂಬಿಕಾ , ಭೂಮಿಕಾ ,ದರ್ಶನ್ , ಸುಬ್ರಹ್ಮಣ್ಯ , ಸುರೇಶ್ ಜಿ ಹಾಗೂ ಆರಕ್ಷಕ ಇಲಾಖೆಯ ಮಧುಸೂಧನ್ , ಕುಮಾರಿ ಪವಿತ್ರ ಇದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್