ರುಧ್ರಭೂಮಿ ಅಭಿವೃದ್ಧಿ ಶ್ಲಾಘನೀಯ – ಶ್ರೀಕಾಂತ್ ದುಂಡಿಗೌಡ್ರ
ಸ್ವಚ್ಚಂದ ವಾತಾವರಣ ನಿರ್ಮಾಣಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು – ಪಿಎಸ್ಐ ನಿಂಗರಾಜ್ ಕೆ ವೈ
ಬಂಕಾಪುರ : ಜಾತಿ ಬೇಧ ಭಾವ, ಬಡವ, ಶ್ರೀಮಂತ ಎಂಬ ಭಾವನೆ ಇಲ್ಲದ ರುದ್ರ ಭೂಮಿಯನ್ನು ಅಭಿವೃದ್ಧಿಪಡಿಸಿದ ಸ್ಥಳೀಯ ಮುಕ್ತಿಧಾಮ ಸಮಿತಿ ಪದಾಧಿಕಾರಿಗಳ ಸಾಮಾಜಿಕ ಕಾರ್ಯ ಶ್ಲಾಘನೀಯವಾಗಿದೆ ಎಂದು ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು.
ಭಾನುವಾರ ಪಟ್ಟಣದ ಮುಕ್ತಿ ಧಾಮ ಸೇವಾ ಸಮಿತಿ, ಬನ್ನೂರಿನ ಭಾರತ್ ಸೇವಾ ಸಂಸ್ಥೆ ಆಶ್ರಯದಲ್ಲಿ ಪಟ್ಟಣದ ರುದ್ರಭೂಮಿಯಲ್ಲಿ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮಕ್ಕೆ ಗಿಡ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಅಸ್ವಚ್ಛತೆಗೆ ಆಗರವಾಗಿದ್ದ ರುದ್ರಭೂಮಿಯನ್ನು ಸಾರ್ವಜನಿಕರ ಸಹಕಾರದೊಂದಿಗೆ ಕೈಗೊಂಡ ಅಭಿವೃದ್ಧಿ ಕೆಲಸವು ಕಾರ್ಯಕ್ಕೆ ಸಾಮಾಜಿಕ ಕೈಗನ್ನಡಿಯಾಗಿದೆ. ನಾನು ಸಹ ಆಗಬೇಕಾದ ಅಭಿವೃದ್ಧಿ ಕೆಲಸಕ್ಕೆ ಎಲ್ಲ ರೀತಿಯ ಸಹಾಯ ಮಾಡುವ ಭರವಸೆ ನೀಡಿದರು.
ಪಿಎಸ್ಐ ನಿಂಗರಾಜ ಕರಕಣ್ಣವರ ಮಾತನಾಡಿ, ಸ್ವಚ್ಛಂದ ವಾತಾವರಣ ನಿರ್ಮಾಣಕ್ಕೆ ಪ್ರತಿಯೊಬ್ಬ ನಾಗರಿಕರು ಕೈಜೋಡಿಸಬೇಕು. ಪ್ರಸ್ತುತ ವಾಹನಗಳ ದಟ್ಟಣೆಯಿಂದ ಅಪಾರ ಪ್ರಮಾಣದಲ್ಲಿ ಪರಿಸರ ಹಾನಿ ಉಂಟಾಗುತ್ತಿದೆ. ಹೀಗಾಗಿ ನಗರದಲ್ಲಿ ಹೆಚ್ಚು ಸಸಿಗಳನ್ನು ನೆಟ್ಟು ಉತ್ತಮ ವಾತಾವರಣ ನಿರ್ಮಿಸುವ ಕೆಲಸ ಮಾಡಬೇಕು, ಕಲುಷಿತ ವಾತಾವರಣದಿಂದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಇದರಿಂದ ಎಲ್ಲ ವರ್ಗದ ಕುಟುಂಬದ ಮೇಲೂ ಆರ್ಥಿಕ ಹೊರೆ ಹೆಚ್ಚಾಗುತ್ತಿದೆ. ಆದ್ದರಿಂದ ಪರಿಸರ ಕಾಳಜಿ ಮಾಡುವ ಮೂಲಕ ಉತ್ತಮ ಆರೋಗ್ಯ ಕಾಯ್ದುಕೊಳ್ಳಲು ಪ್ರತಿಯೊಬ್ಬರು ಮುಕ್ತಿಧಾಮ ಸಮಿತಿಯಂತೆ ಮುಂದಾಗಬೇಕು ಎಂದರು.
ಪಟ್ಟಣದ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳುತ್ತಿರುವ ಮುಕ್ತಿಧಾಮ ಸಮಿತಿ ಪದಾಧಿಕಾರಿಗಳ ಕಾರ್ಯ ಶ್ಲಾಘನೀಯವಾಗಿದೆ. ಅಭಿವೃದ್ಧಿ ಸಾರ್ವಜನಿಕ ಸದ್ಬಳಕೆಗೆ ಸಹಾಯಕವಾಗಿದೆ ಎಂದರು.
ಈ ಸಂಧರ್ಭದಲ್ಲಿ ಯಲ್ಲಪ್ಪ ಸುಂಕದ, ಸತೀಶ ಆಲಕಟ್ಟಿ, ತಿಪ್ಪಣ್ಣ ಸಾತಣ್ಣವರ, ನಿಂಗನಗೌಡ್ರ ಪಾಟೀಲ,ನಿಲಕಂಠಪ್ಪ ಸಕ್ರಿ, ಪುರಸಭೆ ಸದಸ್ಯರಾದ ಸುರೇಶ ಕುರಗೋಡಿ, ರಮೇಶ ಸಿದ್ದುನವರ, ಮಂಜುನಾಥ ತಳವಾರ, ಗಂಗಣ್ಣ ಪೂಜಾರ, ಬಾಪುಗೌಡ, ಕಲ್ಲಪ್ಪ ಹರವಿ, ಶಿವಪ್ಪ ಮಾಗಿ, ಸೋಮಣ್ಣ ಮಳ್ಳಳ್ಳಿ, ಶಿವರಾಜ ಅಳವಳ್ಳಿ, ಕಿರಣ ಸಕ್ರಿ, ಬಾಬುರಾವ್ ಹಂಡೆ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭ ಅಭಿವೃದ್ಧಿಗೆ ಸಹಾಯ ಮಾಡಿದ ಗಣ್ಯರನ್ನು ಸನ್ಮಾನಿಸಲಾಯಿತು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
Leave a Reply
Cancel reply