ವೈದ್ಯರಿಲ್ಲದ ಜಗತ್ತು ಊಹಿಸಲು ಅಸಾಧ್ಯ – ಪಿಎಸ್‌ಐ ನಿಂಗರಾಜ್ ಕೆ ವೈ | Doctors day

ವೈದ್ಯರಿಲ್ಲದ ಜಗತ್ತು ಊಹಿಸಲು ಅಸಾಧ್ಯ – ಪಿಎಸ್‌ಐ ನಿಂಗರಾಜ್ ಕೆ ವೈ

ವೈದ್ಯರು ಎಂದರೆ ಜೀವ ಉಳಿಸುವ ದೇವರಿದ್ದಂತೆ. ಸತತ ಪರಿಶ್ರಮ ಮತ್ತು ದಣಿವರಿಯದ ಕಾರ್ಯ ತತ್ಪರತೆಗೆ ಮತ್ತೊಂದು ಹೆಸರೇ ವೈದ್ಯರು. ಅವರಿಲ್ಲದ ಜಗತ್ತನ್ನು ಉಹಿಸಿಕೊಳ್ಳಲು ಅಸಾಧ್ಯ ಎಂದು ಪಿಎಸ್‌ಐ ನಿಂಗರಾಜ್ ಕೆ ವೈ ಹೇಳಿದರು.

ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ  ಆಲದಕಟ್ಟಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ವೈದ್ಯರುಗಳಿಗೆ ಸನ್ಮಾನಿಸಿ ನಂತರ ಮಾತನಾಡಿ, ಪ್ರತಿ ವರ್ಷ ಜು.1ರಂದು ಹೆಸರಾಂತ ವೈದ್ಯ, ಶಿಕ್ಷಣ ತಜ್ಞ, ಸ್ವಾತಂತ್ರೃ, ಹೋರಾಟಗಾರ, ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಭಾರತ ರತ್ನ ಡಾ.ಬಿ.ಸಿ.ರಾಯ್ ಜನ್ಮದಿನ. ಅವರ ಗೌರವಾರ್ಥ ದೇಶದ ವಿವಿಧಡೆ ಜನ ಸೇವೆಗಾಗಿ ಹಗಲಿರುಳು ಶ್ರಮಿಸುವ ವೈದ್ಯರ ಪರಿಶ್ರಮವನ್ನು ಈ ದಿನ ಗೌರವಿಸಲಾಗುತ್ತದೆ ಎಂದರು.

ಕೊರೊನಾ ದೇಶವನ್ನು ಆವರಿಸಿದಾಗ ವೈದ್ಯರ ಪ್ರಾಮುಖ್ಯತೆ ಹಿಂದೆಂದಿಗಿಂತಲೂ ಹೆಚ್ಚು ಚೆನ್ನಾಗಿ ಮನವರಿಕೆ ಆಯಿತು. ಪ್ರತಿಯೊಬ್ಬರೂ ವೈದ್ಯರನ್ನು ಪ್ರೀತಿಸಿ ಗೌರವಿಸುವ ಮನೋಭಾವ ಬೆಳೆಸಿಕೊಳ್ಳಬೇಕೆಂದು. ಅಂತೆಯೇ ಪ್ರತಿ ವೈದರೂ ಡಾ.ಬಿ.ಸಿ.ರಾಯ್ ಅವರ ಆದರ್ಶ, ಮಾನವೀಯ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಶಿಗ್ಗಾವಿ ತಾಲೂಕಿನ ಬಂಕಾಪುರದ ಆಲದಕಟ್ಟಿ ಸಮುದಾಯ ಆರೋಗ್ಯ ಕೇಂದ್ರದವರು ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಸಂಜೀವಿನಿ ಅಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಅದೇರೀತಿ ಸತತವಾಗಿ ಮುರುಬಾರಿ ಕಾಯಕಲ್ಪಪ್ರಶಸ್ತಿ ಹಾಗೂ ಸ್ವಚ್ಚ ಭಾರತ ರತ್ನ ಪ್ರಶಸ್ತಿ ಕೂಡಾ ದೊರಕಿದೆ.ಸುತ್ತಮುತ್ತಲಿನ ಜನರು ಪಾಲಿಗೆ ಆಲದಕಟ್ಟಿ ಸಮುದಾಯ ಆರೋಗ್ಯ ಕೇಂದ್ರ ಎಂದರೆ ಅಚ್ಚು ಮೆಚ್ಚು ಇಲ್ಲಿಗೆ ತೆರಳಿ ಚಿಕಿತ್ಸೆ ಪಡೆದಲ್ಲಿ ರೋಗ ಗುಣಮುಖ ಎಂಬುದು ಸಾಬೀತಾಗಿರುವ ಸತ್ಯ. ಅಷ್ಟರ ಮಟ್ಟಿಗೆ ಇಲ್ಲಿನ ವೈದ್ಯರು ಜನರಿಗೆ ಗುಣಮಟ್ಟದ ಚಿಕಿತ್ಸೆ ನೀಡಿ ಮನೆ ಮಾತಾಗಿದ್ದಾರೆ. ಇವರು ಸಂಪನ್ಮೂಲ ಬಳಸಿಕೊಂಡು ರೋಗಿಗಳನ್ನು ಗುಣಪಡಿಸಿ ಕಳಿಸುವ ವೈದ್ಯರು ಪ್ರೀತಿ ಚಿಕಿತ್ಸೆಗೆ ಜನರಲ್ಲಿ ದುಗುಡ ಭಯ ಮಾಯವಾಗುತ್ತಿದೆ.

ಸರ್ಕಾರಿ ಆಸ್ಪತ್ರೆಗಳು ಎಂದರೆ ಸರಿಯಾದ ಚಿಕಿತ್ಸೆ ಹಾಗೂ ಆರೈಕೆ ಸಿಗಲ್ಲ ವೈದ್ಯರು ಸರಿಯಾಗಿ ಕಾರ್ಯ ನಿರ್ವಹಿಸಲ್ಲ ಎಂದು ಮೂಗು ಮುರಿಯುವ ಜನರ ಮಧ್ಯದಲ್ಲಿ ಪಟ್ಟಣದ ಆಸ್ಪತ್ರೆಗೆ ಬೇರೆ ಬೇರೆ ಜಿಲ್ಲೆಗಳಿಂದ ಚಿಕಿತ್ಸೆ ಪಡೆಯಲು ಬರುತ್ತಾರೆ ಎಂದರೆ ಇಲ್ಲಿನ ವೈದ್ಯರು ನೀಡುತ್ತಿರುವ ಚಿಕಿತ್ಸೆ ಹಾಗೂ ಸೇವೆ ಅನನ್ಯವಾಗಿದೆ. ಯಾರಲ್ಲೂ ಬೇದ ಭಾವ ಮಾಡದೆ ಪ್ರತಿಯೊಬ್ಬ ರೋಗಿಯನ್ನು ಸಹ ಅತ್ಯಂತ ಪ್ರೀತಿ,ಕಾಳಜಿ,ಮಮತೆಯಿಂದ ಆರೈಕೆ  ಮಾಡುವ ವೈದ್ಯರು ಹಾಗೂ ಸಿಬ್ಬಂದಿ ಎಲ್ಲರ ಮೆಚ್ಚುಗೆ ಪಾತ್ರವಾಗಿದ್ದಾರೆ.

ಈ ಸಂಧರ್ಭದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆರಕ್ಷಕ ಇಲಾಖೆ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಇದ್ದರು.

ವರದಿ: ನಿಂಗರಾಜ್ ಕೂಡಲ
ಹಾವೇರಿ ಜಿಲ್ಲೆ ಬಂಕಾಪುರ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…

5 hours ago

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete's Apeksha K. secured second place and runner-up…

8 hours ago

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…

9 hours ago

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…

24 hours ago

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

24 hours ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

1 day ago