ಕಾರು ಮತ್ತು ಲಾರಿ ನಡುವೆ ಅಪಘಾತ – 15 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಲಾರಿ | ತಪ್ಪಿದ ಭಾರಿ ಅನಾಹುತ

ಕಾರು ಮತ್ತು ಲಾರಿ ನಡುವೆ ಅಪಘಾತ – 15 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಲಾರಿ | ತಪ್ಪಿದ ಭಾರಿ ಅನಾಹುತ

ಕಾರು ಮತ್ತು ಲಾರಿ ನಡುವೆ ಅಪಘಾತ(accident) ಸಂಭವಿಸಿ ಎರಡು ವಾಹನ ನಜ್ಜುಗುಜ್ಜಾಗಿ ಲಾರಿ 15 ಅಡಿ ಆಳಕ್ಕೆ ಮಗುಚಿ ಬಿದ್ದ ಘಟನೆ  ಶಿವಮೊಗ್ಗ(Shivamogga) ಜಿಲ್ಲೆಯ ಹೊಸನಗರ ತಾಲ್ಲೂಕಿನ ಯಡೂರಿನಲ್ಲಿ(Yaduru) ನಡೆದಿದೆ.


ತೀರ್ಥಹಳ್ಳಿ(Thirthahalli) ಕಡೆಯಿಂದ ಬರುತ್ತಿದ್ದ ಲಾರಿ ಮತ್ತು ಮಾಸ್ತಿಕಟ್ಟೆ(Masthikatte) ಕಡೆಯಿಂದ ತೀರ್ಥಹಳ್ಳಿ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಯಡೂರು ಮುಖ್ಯರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ.

ಕಾರಿನಲ್ಲಿ‌ ನಾಲ್ಕು ಜನರಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಲಾರಿ 15 ಅಡಿ ಕೆಳಗೆ ಬಿದ್ದ ಕಾರಣ ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದೆ. ಗಾಯಳುಗಳಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಕಾರಿನಲ್ಲಿ ಪ್ರಯಾಣಿಸುತಿದ್ದವರು  ಶಿವಮೊಗ್ಗ ಮೂಲದವರೆಂದು ತಿಳಿದು ಬಂದಿದ್ದು, ನಾಲ್ವರು ಪ್ರವಾಸಕ್ಕೆಂದು ಬಂದು ಯಡೂರಿನ ಆಮಂತ್ರಣ ರೆಸಾರ್ಟ್’ನಲ್ಲಿ ಉಳಿದುಕೊಂಡಿದ್ದರು. ಬುಧವಾರ ಹುಲಿಕಲ್ ಫಾಲ್ಸ್(hulikal falls) ನೋಡಿ ವಾಪಾಸಾಗುವ ವೇಳೆಗೆ ಈ ದುರ್ಘಟನೆ ನಡೆದಿದೆ.

ನಗರ(Nagara)ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *