Anandapura | ಭಾರಿ ಮಳೆಗೆ ಮನೆಯ ಮೇಲ್ಚಾವಣಿ ಕುಸಿತ – ಅಪಾಯದಿಂದ ಪಾರಾದ ಕುಟುಂಬ
ಕಳೆದ ನಾಲ್ಕು ದಿನಗಳಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಆನಂದಪುರ(Anandapura) ಸುತ್ತಮುತ್ತಲ ಪ್ರದೇಶಗಳಲ್ಲಿ ಮನೆ ಹಾಗೂ ದನದ ಕೊಟ್ಟಿಗೆಗಳು ಬಿದ್ದು ಹಾನಿ ಸಂಭವಿಸಿದೆ.
ಆಚಾಪುರ ಗ್ರಾಮ ಪಂಚಾಯಿತಿಯ, ಮುರುಘಾ ಮಠ ಗ್ರಾಮದಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆ(Heavy rain)ಯಿಂದಾಗಿ ಮೈದ್ದೀನ್ ಸಾಬ್ ಎಂಬುವರ ವಾಸದ ಮನೆಯ ಮೇಲ್ಛಾವಣಿ ಮಧ್ಯರಾತ್ರಿ ಕುಸಿದಿದ್ದು ಮನೆಯಲ್ಲಿದ್ದ ಮೂರು ಮಕ್ಕಳು ಸೇರಿದಂತೆ, ನಾಲ್ವರು ಅಪಾಯದಿಂದ ಪಾರಾಗಿದ್ದಾರೆ.
ಮೇಲ್ಛಾವಣಿ ಕುಸಿತ ಸಂದರ್ಭದಲ್ಲಿ ಕುಟುಂಬದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಮಧ್ಯರಾತ್ರಿ ಮನೆ ಕುಸಿದ ತಕ್ಷಣ ವಿಷಯ ತಿಳಿದ ಗ್ರಾಮಸ್ಥರು ಧಾವಿಸಿದ್ದು. ಮನೆಯೊಳಗಿದ್ದ ಕುಟುಂಬದವರನ್ನು ಹೊರಗಡೆ ಕರೆತಂದು ಬೇರೆ ಮನೆಯಲ್ಲಿ ಆಶಯ ನೀಡಲಾಯಿತು. ಮನೆಯ ಯಜಮಾನ ಮೈದ್ದೀನ್ ಸಾಬ್ ಎಂಬುವರ ಮೇಲೆ ಹಂಚುಗಳು ಬಿದ್ದಿದ್ದು ಆನಂದಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು.
ವಿಷಯ ತಿಳಿದ ಕಂದಾಯ ಇಲಾಖೆಯ ಪ್ರಭಾರಿ ಉಪ ತಹಸಿಲ್ದಾರ್ ಕವಿರಾಜ್, ಗ್ರಾಮ ಲೆಕ್ಕಾಧಿಕಾರಿ ಚಂದ್ರಮೌಳಿ, ಗ್ರಾಮ ಪಂಚಾಯತ್ ಅಧ್ಯಕ್ಷ ಕಲೀಮುಲ್ಲಾ ಖಾನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಂಗಸ್ವಾಮಿ ಸ್ಥಳಕ್ಕೆ ಭೇಟಿ ನೀಡಿದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್