ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಅಡ್ಡಿ – ರಕ್ಷಣೆಗಾಗಿ ಅಂಗಲಾಚುತ್ತಿರುವ ಪ್ರೇಮಿಗಳು | Caste barrier for lovers married in love

ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಅಡ್ಡಿ – ರಕ್ಷಣೆಗಾಗಿ ಅಂಗಲಾಚುತ್ತಿರುವ ಪ್ರೇಮಿಗಳು

ಶಿವಮೊಗ್ಗ:  ಪ್ರೀತಿ ಮಾಡಬಾರದು, ಮಾಡಿದರೆ ಜಗಕೆ ಹೆದರಬಾರದು’ ಹಾಡಿನಂತೆ ಪ್ರೇಮಿಗಳಿಬ್ಬರು ಪ್ರೀತಿ ಮಾಡಿ ಎಲ್ಲರನ್ನೂ ಎದುರಿಸಿ ನಿಂತಿದ್ದಾರೆ, ಇದೀಗ ಈ ಪ್ರೇಮಿಗಳು ಜಾತಿ ಕಾರಣಕ್ಕೆ ಭಯದಲ್ಲೇ ಬದುಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಹೌದು ಶಿವಮೊಗ್ಗ ನಗರದ ನವುಲೆ ನಿವಾಸಿಗಳಾದ ಲೇಖನ ಹಾಗೂ ಬಸವರಾಜ್ ಕಳೆದ ಎರಡು ವರ್ಷದಿಂದ ಪ್ರೀತಿ ಮಾಡಿದ್ದರು. ಇದೀಗ ಪ್ರೀತಿ ಮಾಡಿದ ಪರಸ್ಪರ ಒಪ್ಪಿಗೆ ಮೇರೆಗೆ ಕಳೆದ ನಾಲ್ಕು ದಿನದ ಹಿಂದೆ ಮದುವೆಯಾಗಿದ್ದಾರೆ. ಇದೀಗ ಹುಡುಗಿ ಮನೆಯವರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿ ಜೀವ ಬೆದರಿಕೆ ಹಾಕಿದ್ದಾರೆಂದು ಪ್ರೇಮಿಗಳು ಆರೋಪ ಮಾಡಿದ್ದು ಠಾಣೆ ಮೆಟ್ಟಿಲೇರಿ ನಮಗೆ ರಕ್ಷಣೆ ನೀಡಿ ಎಂದು ವಿನೋಬನಗರದ ಪೊಲೀಸರ ಮೊರೆ ಹೋಗಿದ್ದಾರೆ.

ಇನ್ನು ಈ ಜೋಡಿಗೆ ಯುವಕನ ಕಡೆಯವರು ಒಪ್ಪಿಗೆ ಸೂಚಿಸಿದ್ದು ಯುವಕ ಯುವತಿಯ ಬೆನ್ನಿಗೆ ನಿಂತಿದ್ದಾರೆ. ಆದರೆ ಪ್ರೀತಿ ಮಾಡಿ ಮದುವೆಯಾದ ನವಜೋಡಿ ಭಯದಲ್ಲೇ ಬದುಕಿದ್ದು ಪೊಲೀಸರು ನಮಗೆ ರಕ್ಷಣೆ ನೀಡಬೇಕು, ನಮಗೆ ಏನಾದರು ಆದರೆ ನಮ್ಮ ಮನೆಯವರೇ ಕಾರಣ ಎಂದು ಯುವತಿ ಆರೋಪ ಮಾಡಿದ್ದಾರೆ. ನಾವು ಪರಸ್ಪರ ಪ್ರೀತಿಸಿ ಇದೀಗ ಮದುವೆಯಾಗಿ ಹೊಸ ಜೀವನ‌ಕಟ್ಟಿಕೊಂಡಿದ್ದೇವೆ, ನಮಗೆ ಬದುಕಲು ಬಿಡಿ ಎಂದು ನವಜೋಡಿ ಆಗ್ರಹ ಮಾಡಿದೆ.

ಇನ್ನೂ ನಾಲ್ಕು ದಿನಗಳ ಕೆಳಗೆ ಈ ಜೋಡಿ ಹೊಳೆಹೊನ್ನೂರು ಸಮೀಪದಲ್ಲಿ ಮದುವೆಯಾಗಿದೆ. ಆ ಬಳಿಕ ಯುವಕನ ಪೋಷಕರು ಯುವತಿಯನ್ನ ಮನೆ ತುಂಬಿಸಿಕೊಂಡಿದ್ದಾರಂತೆ. ಆದರೆ ಯುವತಿ ಕಡೆಯವರು ಜೀವ ಬೆದರಿಕೆ ಹಾಕಿದ್ದಾರೆ ಎನ್ನುವುದು ಆರೋಪ. ಇನ್ನು ಯುವತಿ ನಾನು ನನ್ನಿಷ್ಟದಂತೆ ಮದುವೆಯಾಗಿದ್ದು, ಆತನ ಜೊತೆಗೆ ಸಂಸಾರ ನಡೆಸ್ತೇನೆ, ದಯವಿಟ್ಟು ಅವಕಾಶ ಮಾಡಿಕೊಡಿ ಎಂದು ಪೋಷಕರ ಬಳಿ ಮನವಿ ಮಾಡಿದ್ದಾಳೆ. ಸದ್ಯ ಪೊಲೀಸರು ಪ್ರಕರಣದ ಪರಿಶೀಲನೆ ನಡೆಸುತ್ತಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀಂದ್ರ ಪೂಜಾರಿ , ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆಯ್ಕೆ – ಪದಾಧಿಕಾರಿಗಳ ವಿವರ ಇಲ್ಲಿದೆ

RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀರ್ ಪಿ , ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆಯ್ಕೆ –…

2 hours ago

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…

18 hours ago

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…

20 hours ago

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ – ಗ್ರಾಮಸ್ಥರಲ್ಲಿ ಅಚ್ಚರಿ

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…

20 hours ago

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ – ನಗದು ಸಹಿತ ಆರೋಪಿ ವಶಕ್ಕೆ

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…

2 days ago

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…

2 days ago