ಡೆಂಗ್ಯೂ ಭೀತಿ – ಒಂದು ದಿನ ಗೈರಾದರೇ ಒಂದು ತಿಂಗಳ ವೇತನ ಕಟ್ – ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಶಾಸಕ ಬೇಳೂರು ಖಡಕ್ ವಾರ್ನಿಂಗ್ | Dengue
ಸಾಗರ : ಡೆಂಗ್ಯೂ ಹೆಚ್ಚುತ್ತಿರುವ ಈ ತುರ್ತು ಸಂದರ್ಭದಲ್ಲಿ ವೈದ್ಯರು ಒಂದು ದಿನ ಕರ್ತವ್ಯಕ್ಕೆ ಗೈರಾದರೆ ಅವರ ಒಂದು ತಿಂಗಳ ವೇತನ ತಡೆ ಹಿಡಿಯುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಸಿವಿಲ್ ಸರ್ಜನ್ಗೆ ಆದೇಶ ಮಾಡಿದ್ದಾರೆ.
ಇಲ್ಲಿನ ಉಪವಿಭಾಗೀಯ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿ ಡೆಂಗ್ಯೂ ಪೀಡಿತ ರೋಗಿಗಳ ವಾರ್ಡ್ನ ಸೌಲಭ್ಯ ಪರಿಶೀಲನೆ ನಡೆಸಿ ಮಾತನಾಡಿದ ಅವರು, ವೈದ್ಯರು ಯಾವುದೇ ಕಾರಣಕ್ಕೂ ಕರ್ತವ್ಯಕ್ಕೆ ಗೈರಾಗುವುದು, ವಿಳಂಬವಾಗಿ ಹಾಜರಾಗುವುದು ಮಾಡಬೇಡಿ.ಸಾರ್ವಜನಿಕರು ವೈದ್ಯಸಿಬ್ಬಂದಿಗಳ ಸೇವೆಯನ್ನು ಪಡೆಯಬೇಕು. ಅನಗತ್ಯ ಗೊಂದಲ ಸೃಷ್ಟಿ ಮಾಡಬಾರದು ಎಂದು ತಿಳಿಸಿದರು.
ತಾಲೂಕಿನಲ್ಲಿ ಡೆಂಗ್ಯೂ ಪೀಡಿತರ ಸಂಖ್ಯೆ ಕಡಿಮೆಯಾಗಿದ್ದು, ಅಕ್ಕಪಕ್ಕದ ತಾಲೂಕುಗಳಿಂದ ಹೆಚ್ಚಿನ ರೋಗಿಗಳು ಉತ್ತಮ ಸೇವೆ ಸಿಗುತ್ತದೆ ಎಂದು ಬರುತ್ತಿದ್ದಾರೆ. ಎಲ್ಲರಿಗೂ ಉತ್ತಮವಾದ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಉಪವಿಭಾಗೀಯ ಆಸ್ಪತ್ರೆಗೆ1.85ಕೋಟಿ ರೂ., ತಾಯಿಮಗು ಆಸ್ಪತ್ರೆಗೆ 1.65ಕೋಟಿ ರೂ. ತುರ್ತು ಅನುದಾನ ಬಿಡುಗಡೆಯಾಗಿದೆ. ಈ ಹಣದಲ್ಲಿ ಆಸ್ಪತ್ರೆ ಮೂಲಭೂತ ಸೌಲಭ್ಯ ಉದ್ಯಾನವನ, ಸುತ್ತಲೂ ಮೆಸ್ ಅಳವಡಿಕೆ ಮಾಡಲಾಗುತ್ತಿದೆ. ಡಯಾಲಿಸಿಸ್ ಘಟಕ ನಾನು ಬರುವಾಗ ನಾಲ್ಕು ಯಂತ್ರ ಹೊಂದಿತ್ತು. ಈಗ 16 ಯಂತ್ರ ಅಳವಡಿಸಲಾಗಿದ್ದು, ಸಂಸ್ಥೆಯೊಂದು ಉತ್ತಮವಾಗಿ ನಡೆಸಿಕೊಂಡು ಹೋಗುತ್ತಿದೆ ಎಂದು ಹೇಳಿದರು.
ಎರಡೂ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಮನವಿ ಮಾಡಲಾಗಿದೆ. ರೋಗಿಗಳಿಗೆ ಕೊಡುವ ಆಹಾರದಲ್ಲೂ ಗುಣಮಟ್ಟ ಕಾಪಾಡುವಂತೆ ಸೂಚನೆ ನೀಡಲಾಗಿದೆ. ಗ್ರಾಮೀಣ ಆಸ್ಪತ್ರೆಗಳ ಅಭಿವೃದ್ಧಿಗೂ ಹಣ ಬಂದಿದೆ. ಬಡ ರೋಗಿಗಳು ಚಿಕಿತ್ಸೆಗೆ ಬರುತ್ತಿದ್ದು ಯಾವುದೇ ಕೊರತೆ ಆಗದಂತೆ ನೋಡಿಕೊಳ್ಳಲಾಗುತ್ತಿದೆ. 14 ವೈದ್ಯರು ಉಪವಿಭಾಗೀಯ ಆಸ್ಪತ್ರೆ, 6 ವೈದ್ಯರು ತಾಯಿಮಗು ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು ವೈದ್ಯರ ಕೊರತೆ ಇಲ್ಲ. ಈ ಹಿಂದೆ ಸಾಗರ ನಂ. 1 ಆಸ್ಪತ್ರೆ ಎಂದು ರಾಜ್ಯದಲ್ಲಿ ಗುರುತಿಸಿಕೊಂಡಿದ್ದು ಈ ಬಾರಿ ಸಹ ಸಾಗರ ಆಸ್ಪತ್ರೆ ನಂ. 1 ಸ್ಥಾನಕ್ಕೆ ಹೋಗುವುದು ಖಚಿತ. ವಿಶೇಷವಾಗಿ ಡೆಂಗ್ಯೂ ಪೀಡಿತರ ಬೆಡ್ಗಳಿಗೆ ಸೈಂಟಿಫಿಕ್ ಸೊಳ್ಳೆ ಪರದೆಯನ್ನು ಅಳವಡಿಸಲಾಗಿದೆ. ಪರದೆ ಮೇಲೆ ಸೊಳ್ಳೆ ಕುಳಿತರೆ ಅದು ತಾನಾಗಿಯೇ ಸತ್ತು ಹೋಗುತ್ತದೆ. ಒಟ್ಟಾರೆ ಡೆಂಗ್ಯೂ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್