ಖಾಕಿಯೊಳಗಿನ ಮಾನವೀಯತೆ – ಇದು ರಿಪ್ಪನ್‌ಪೇಟೆ ಪೊಲೀಸ್ ಸ್ಟೋರಿ |help desk

ಖಾಕಿಯೊಳಗಿನ ಮಾನವೀಯತೆ – ಇದು ರಿಪ್ಪನ್‌ಪೇಟೆ ಪೊಲೀಸ್ ಸ್ಟೋರಿ |help desk

ರಿಪ್ಪನ್‌ಪೇಟೆ : ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಇಬ್ಬರು ಪುಟ್ಟ ಮಕ್ಕಳ ಬಡ ಕುಟುಂಬದ ನೋವಿಗೆ ಪಟ್ಟಣದ ಖಾಕಿಗಳು ಹೆಗಲು ಕೊಟ್ಟಿದ್ದಾರೆ.


ಪಟ್ಟಣದ ಬರುವೆ ಗ್ರಾಮದ ನಿವಾಸಿಗಳಾದ ರಾಮು ಎಂಬಾತನ ಮೂರು ವರ್ಷದ ದರ್ಶನ್ ಹಾಗೂ ಬರುವೆ ಗ್ರಾಮದ ಶೇಖರಪ್ಪ ರವರ  ಹನ್ನೆರಡು ವರ್ಷದ ವಿನೋದ್ ಗೆ ಹುಟ್ಟಿನಿಂದಲೇ ಹೃದಯ ಸಂಬಂಧಿ ಖಾಯಿಲೆಯಿದ್ದು ಕುಟುಂಬಸ್ಥರು ಸ್ಥಳೀಯ ಆಸ್ಪತ್ರೆಗೆ ತೋರಿಸಿ ತಕ್ಕಮಟ್ಟಿಗೆ ಚಿಕಿತ್ಸೆ ಕೊಡಿಸಿಕೊಂಡು ಬಂದಿದ್ದಾರೆ ಆದರೆ ಈಗ ಮಗುವಿಗೆ ಕೂಡಲೇ ಆಪರೇಷನ್ ಅಗತ್ಯವಿರುವ ಬಗ್ಗೆ ವೈದ್ಯರು ತಿಳಿಸಿದ್ದಾರೆ. ಆದರೆ ಬಡ ಕುಟುಂಬಕ್ಕೆ ಅಷ್ಟು ಆರ್ಥಿಕ ಶಕ್ತಿ ಇಲ್ಲದೇ ಇರುವುದರಿಂದ ದೇವರ ಮೇಲೆ ಭಾರ ಹಾಕಿ ಕೈ ಚೆಲ್ಲಿ ಕುಳಿತು ಬಿಟ್ಟಿದ್ದರು.


ಇತ್ತೀಚೆಗೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ರವರಿಗೆ ವಾರ್ಡ್ ವಾರು ಸಾರ್ವಜನಿಕರ ಮೀಟಿಂಗ್ ಮಾಡುವಾಗ ಈ ವಿಷಯ ತಿಳಿದಿದೆ ಕೂಡಲೇ ಪೋಷಕರನ್ನು ತರಾಟೆಗೆ ತೆಗೆದುಕೊಂಡು ಕೈ ಚೆಲ್ಲಿ ಕೂರದೇ ಚಿಕಿತ್ಸೆ ಮುಂದುವರೆಸಿ ನನ್ನ ಕೈಲಾದ ಆರ್ಥಿಕ ಸಹಾಯ ಮಾಡುತ್ತೇನೆ ಎಂದು ಭರವಸೆ ನೀಡಿದ್ದರು.

ಬಡ ಮಕ್ಕಳ ಬಗ್ಗೆ ಡಿವೈಎಸ್ಪಿ ಗಜಾನನ ವಾಮನ ಸುತಾರ ,ಮತ್ತು ಸಿಪಿಐ ಗುರಣ್ಣ ಹೆಬ್ಬಾಳ್ ರವರ ಗಮನಕ್ಕೆ ತಂದ ಪಿಎಸ್ ಐ ಪ್ರವೀಣ್ ಠಾಣೆಯ ಎಲ್ಲಾ ಸಿಬ್ಬಂದಿಗಳು ಹಾಗೂ ಅಧಿಕಾರಿಗಳ ಸಹಕಾರದಿಂದ ಇಂದು ಬರುವೆ ಗ್ರಾಮದ ಅಂಗನವಾಡಿಗೆ ತೆರಳಿ ಎರಡು ಕುಟುಂಬಸ್ಥರನ್ನು ಕರೆಸಿ ಧನಸಹಾಯ ಮಾಡುವುದರೊಂದಿಗೆ ಆತ್ಮಸ್ಥೈರ್ಯ ತುಂಬಿದ್ದಾರೆ.

ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕವಾಗಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ.

ಈ ಸಂಧರ್ಭದಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಎ ಎಸ್ ಐ ಹಾಲಪ್ಪ , ಸಿಬ್ಬಂದಿಗಳಾದ ಉಮೇಶ್ , ಸಂತೋಷ್ , ಚೆನ್ನಪ್ಪ , ಮಧುಸೂಧನ್ , ಮಂಜುನಾಥ್ , ಸೋಮಶೇಖರ್  ಹಾಗೂ ಗ್ರಾಪಂ ಸದಸ್ಯರಾದ ಆಸೀಫ಼್, ನಿರೂಪ್ ಕುಮಾರ್ ಇದ್ದರು.

ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಎರಡು ಮಕ್ಕಳ ಜವಬ್ದಾರಿಯನ್ನು ಪೋಸ್ಟ್ ನ್ಯೂಸ್ ಬಳಗ ವಹಿಸಿಕೊಂಡಿದ್ದು ಪಿಎಸ್‌ಐ ಪ್ರವೀಣ್ ಎಸ್ ಪಿ ರವರ ಮಾರ್ಗದರ್ಶನದಲ್ಲಿ ಮಕ್ಕಳಿಗೆ ಬೇಕಾದ ಎಲ್ಲಾ ರೀತಿಯ ಚಿಕಿತ್ಸೆಯನ್ನು ಕೊಡಿಸುವ ಜವಬ್ದಾರಿಯನ್ನು ಸಹೃದಯ ದಾನಿಗಳ ನೆರವಿನಿಂದ ವಹಿಸಿಕೊಂಡಿದ್ದೇವೆ.ಈ ನಮ್ಮ ಕಾರ್ಯಕ್ಕೆ ಗ್ರಾಪಂ ಸದಸ್ಯರಾದ ಆಸೀಫ಼್ ಭಾಷಾ ಹಾಗೂ ನಿರೂಪ್ ಕುಮಾರ್ ಕೈ ಜೋಡಿಸಿದ್ದಾರೆ.

ಮಕ್ಕಳ ಪೋಷಕರ ಬ್ಯಾಂಕ್ ಖಾತೆಯಲ್ಲಿ ಸಮಸ್ಯೆ ಇರುವುದರಿಂದ ಇನ್ನೆರಡು ದಿನಗಳಲ್ಲಿ ಯುಪಿಐ ಸ್ಕ್ಯಾನರ್ ಹಾಗೂ ಅಕೌಂಟ್ ಮಾಹಿತಿಯನ್ನು ಹಂಚಿಕೊಳ್ಳಲಾಗುತ್ತದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕದ ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…

40 minutes ago

ಸಿಎಂ ಡಿಕೆಶಿ ಮನವೊಲಿಕೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ

ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…

8 hours ago

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ!

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…

12 hours ago

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of…

12 hours ago

ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು!

ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು! ಅಧಿಕಾರದ ದರ್ಪದಲ್ಲಿ ನೈತಿಕತೆಯೇ ಬಲಿ,…

24 hours ago

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: 19 ನೂತನ ಸಚಿವರ ಪ್ರಮಾಣವಚನ, ಲೋಕಭವನದಲ್ಲಿ ಸರಳ ಸಮಾರಂಭ

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: 19 ನೂತನ ಸಚಿವರ ಪ್ರಮಾಣವಚನ, ಲೋಕಭವನದಲ್ಲಿ ಸರಳ ಸಮಾರಂಭ Karnataka Cabinet Expansion 2026:…

1 day ago