ಶಿರೂರಿನಲ್ಲಿ ಗುಡ್ಡ ಕುಸಿತ – ಏಳು ಜನರ ದಾರುಣ ಸಾವು.!
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಂಕೋಲಾ(ankola) ತಾಲೂಕಿನ ಶಿರೂರು(shiruru) ಬಳಿ ಗುಡ್ಡ ಕುಸಿದು ಒಟ್ಟು ಏಳು ಜನರು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.
ಈ ಬಗ್ಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಹಿತಿ ನೀಡಿದ್ದು, ಭಾರಿ ಮಳೆಯಿಂದಾಗಿ ಗುಡ್ಡ ಕುಸಿದು ಬಿದ್ದಿದೆ. ಘಟನೆಯಲ್ಲಿ ನಿಖರವಾಗಿ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಆದರೆ ಜಿಲ್ಲಾಧಿಕಾರಿ ನೀಡಿರುವ ಮಾಹಿತಿ ಪ್ರಕಾರ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ. ಉಳಿದಂತೆ ಮಣ್ಣಿನಡಿ ಸಿಲುಕಿದವರಿಗಾಗಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಪ್ರಸ್ತುತ ಜಿಲ್ಲೆಯಲ್ಲಿ ಮಳೆ ಜೋರಾಗಿರುವುದರಿಂದ ಎಲ್ಲೆಡೆ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತವಾಗುತ್ತಿದೆ. ಹೊರಗಡೆ ತಿರುಗಾಡುವವರು ಕೊಂಚ ಜಾಗೃತಿ ವಹಿಸುವಂತೆ ಸಂಸದರು ಮನವಿ ಮಾಡಿದ್ದಾರೆ.
ಪ್ರಸ್ತುತ ಘಟನಾ ಸ್ಥಳದಲ್ಲಿ ರಕ್ಷಣಾ ತಂಡಗಳು ಬೀಡು ಬಿಟ್ಟಿದ್ದು, ಗುಡ್ಡದಡಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ಮುಂದು ವರೆದಿದೆ. ಮಾಹಿತಿ ಪ್ರಕಾರ ಒಟ್ಟು 9 ಜನರು ಗುಡ್ಡದಡಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ.
ಈ ಪೈಕಿ ಈಗಾಗಲೇ 7 ಜನರು ಸಾವನ್ನಪ್ಪಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿರುವುದಾಗಿ ಸಂಸದರು ಮಾಹಿತಿ ಹಂಚಿಕೊಂಡಿದ್ದಾರೆ.
RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀರ್ ಪಿ , ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆಯ್ಕೆ –…
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…
ಆಗುಂಬೆಯಿಂದ ರಿಪ್ಪನ್ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…
ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…
ಸಾಗರ ಬಸ್ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…