ಪಿಕಪ್ ಚಾನೆಲ್ ಗೆ ಹಾನಿ – ಸ್ಥಳಕ್ಕೆ ಭೇಟಿ ನೀಡಿದ ಶಾಸಕರ ಆಪ್ತ ಕಾರ್ಯದರ್ಶಿ ,ದುರಸ್ತಿ ಕಾರ್ಯಕ್ಕೆ ಚಾಲನೆ
ಮನೆ ಮೇಲೆ ಬಿದ್ದ ತೆಂಗಿನ ಮರ – ಪರಿಹಾರದ ಭರವಸೆ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮದಿಂದಾಗಿ ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಸುಗುಂಡಿಯ ಪಿಕಪ್ ಚಾನೆಲ್ ಹಾಗೂ ಹೆಚ್. ಕುನ್ನೂರು ಗ್ರಾಮದ ಕಾನ್ ಕೆರೆಯ ದಂಡೆಗೂ ಅಪಾರ ಮಳೆಯಿಂದ ಹಾನಿ ಆಗಿದೆ ಒಡೆದು ನೀರು ಸುತ್ತಮುತ್ತಲಿನ ಕೃಷಿ ಜಮೀನಿಗೆ ನುಗ್ಗಿದ ಪರಿಣಾಮವಾಗಿ ಅಪಾರ ನಷ್ಟ ಸಂಭವಿಸಿದೆ.
ವಿಷಯ ತಿಳಿಯುತ್ತಿದ್ದಂತೆ ಹಾನಿಯುಂಟಾಗಿರುವ ಸ್ಥಳಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಸೂಚನೆಯಂತೆ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ತೆರಳಿ ಕೂಡಲೇ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಸ್ಥಳೀಯ ಗ್ರಾಮಾಡಳಿತಕ್ಕೆ ಸೂಚಿಸಿದ್ದಾರೆ.
ಕೂಡಲೇ ಗ್ರಾಮ ಪಂಚಾಯತಿ ಆಡಳಿತ ವರ್ಗ ಜೆಸಿಬಿ ಯಂತ್ರ ಬಳಸಿ, ತಾತ್ಕಾಲಿಕವಾಗಿ ಚಾನೆಲ್ ದುರಸ್ತಿ ಕಾರ್ಯ ಕೈಗೊಂಡಿದೆ.
ಮನೆ ಮೇಲೆ ಬಿದ್ದ ತೆಂಗಿನ ಮರ – ಪರಿಹಾರದ ಭರವಸೆ
ಇನ್ನು ಇಲ್ಲಿನ ಕಾರಕ್ಕಿ ಗ್ರಾಮದ ಆರಗೋಡಿ ನಾಗರಾಜ ಎಂಬುವರ ಮನೆ ಮೇಲೆ ಇಂದು ಮಧ್ಯಾಹ್ನ ತೆಂಗಿನ ಮರ ಬಿದ್ದು ಮನೆಯ ಮೇಲ್ಚಾವಣಿ ಸಂಪೂರ್ಣ ಹಾನಿಗೊಳಗಾಗಿದೆ. ಭಾರೀ ಮಳೆ ಮತ್ತು ಗಾಳಿಯ ಪರಿಣಾಮವಾಗಿ ಮನೆಯ ಸಮೀಪವೇ ಇದ್ದ ತೆಂಗಿನಮರ ಬುಡ ಸಹಿತ ಮನೆ ಮೇಲೆ ಬಿದ್ದು ಸಾವಿರಾರು ರೂಪಾಯಿ ನಷ್ಟವಾಗಿದ್ದು, ಮನೆಯ ಸದಸ್ಯರು ಅಪಾಯದಿಂದ ಪಾರಾಗಿದ್ದರು.
ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ರವರು ಸೂಕ್ತ ಪರಿಹಾರದ ಭರವಸೆ ನೀಡಿ ಕುಟುಂಬ ವರ್ಗಕ್ಕೆ ಧೈರ್ಯ ತುಂಬಿದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್