ಮಿನಿ ಒಲಿಂಪಿಕ್ ಕಬ್ಬಡಿ ತಂಡಕ್ಕೆ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ಆಯ್ಕೆ | mini Olympics
ರಿಪ್ಪನ್ಪೇಟೆ : ಕರ್ನಾಟಕ ರಾಜ್ಯದ ಮೂರನೇ ಒಲಿಂಪಿಕ್ ನ ಕಬ್ಬಡಿ ತಂಡಕ್ಕೆ ಪಟ್ಟಣದ ರಾಮಕೃಷ್ಣ ವಿದ್ಯಾಲಯದ ಐವರು ವಿದ್ಯಾರ್ಥಿಗಳು ಹಾಗೂ ಆನಂದಪುರ ಪ್ರಾರ್ಥನಾ ರಾಮಕೃಷ್ಣ ವಿದ್ಯಾಲಯ ಓರ್ವ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ 17/07/2024 ರಂದು ನಡೆದ ರಾಜ್ಯ ಒಲಿಂಪಿಕ್ಸ್ ಚಾಂಪಿಯನ್ ಶಿಪ್ ಗೆ ತಂಡಗಳ ಅಯ್ಕೆ ಪ್ರಕ್ರಿಯೆಯಲ್ಲಿ ಕಬ್ಬಡಿ ತಂಡಕ್ಕೆ ಪಟ್ಟಣದ ರಾಮಕೃಷ್ಣ ವಿದ್ಯಾಲಯದ ಐವರು ವಿದ್ಯಾರ್ಥಿಗಳು ಹಾಗೂ ಆನಂದಪುರ ಪ್ರಾರ್ಥನಾ ರಾಮಕೃಷ್ಣ ವಿದ್ಯಾಲಯದ ಒಂದು ವಿದ್ಯಾರ್ಥಿನಿ ಆಯ್ಕೆಯಾಗಿದ್ದಾರೆ.
ಡಿಪಾರ್ಟ್ಮೆಂಟ್ ಆಫ್ ಯೂತ್ ಎಂಪೈಮೆಂಟ್ ಆಂಡ್ ಸ್ಪೋರ್ಟ್ಸ್ ಮತ್ತು ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಹಾಗೂ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇವರ ಸಹಯೋಗದಲ್ಲಿ ದಿನಾಂಕ 24.08.2024 ರಿಂದ 30.8. 2024 ವರೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಮೂರನೇ ಮಿನಿ ಒಲಂಪಿಕ್ ಕಬಡ್ಡಿ ಚಾಂಪಿಯನ್ ಶಿಪ್ ನಲ್ಲಿ ಈ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
8 ನೇ ತರಗತಿಯ ಅನುಷ್ಕಾ, ಏಳನೇ ತರಗತಿಯ ಸೋನಾಲಿ , ಏಳನೆ ತರಗತಿಯ ಅವನ್ಯ , ಆರನೇ ತರಗತಿಯ ಆಯುಶ್ರೀ, ಒಂಬತ್ತನೆ ತರಗತಿಯ ವಂದನ , ಬಾಲಕರ ವಿಭಾಗದಲ್ಲಿ 8 ನೇ ತರಗತಿಯ ನಿಶಾಂತ್ 14 ವರ್ಷ ಒಳಗಿನ ರಾಜ್ಯ ಒಲಂಪಿಕ್ ತಂಡಕ್ಕೆ ಆಯ್ಕೆಯಾಗಿರುತ್ತಾರೆ.
ರಾಮಕೃಷ್ಣ ವಿದ್ಯಾಲಯದ ದೈಹಿಕ ಶಿಕ್ಷಕರಾದ ವಿನಯ್ ಎಂ ರವರು ಶಿವಮೊಗ್ಗ ತಂಡಕ್ಕೆ ತರಬೇತುದಾರರಾಗಿ ಆಯ್ಕೆಯಾಗಿರುತ್ತಾರೆ.
ಅದ್ವಿತೀಯ ಸಾಧನೆಗೈಯುವ ಮೂಲಕ ಮಿನಿ ಒಲಿಂಪಿಕ್ ಪಂದ್ಯಾವಳಿಗೆ ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳು ಹಾಗೂ ಜಿಲ್ಲಾ ತರಬೇತುದಾರರಾಗಿ ಆಯ್ಕೆಯಾದ ವಿನಯ್ ರವರಿಗೆ ಶಿವಮೊಗ್ಗ ಜಿಲ್ಲಾ ಕಬ್ಬಡಿ ಅಸೋಸಿಯೇಷನ್, ರಾಮಕೃಷ್ಣ ವಿದ್ಯಾಲಯದ ಮುಖ್ಯಸ್ಥರಾದ ಡಿ ಎಂ ದೇವರಾಜ್ ಹಾಗೂ ಶಾಲಾ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು. ಆಡಳಿತ ಮಂಡಳಿ ಶುಭ ಕೋರಿರುತ್ತಾರೆ. ವ್
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್