ಕೋಡೂರು , ಬೆಳ್ಳೂರು ಮತ್ತು ಅರಸಾಳು ಗ್ರಾಪಂ ವ್ಯಾಪ್ತಿಯಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಅಪ್ತ ಕಾರ್ಯದರ್ಶಿ ಭೇಟಿ
ರಿಪ್ಪನ್ಪೇಟೆ : ಕೋಡೂರು,ಅರಸಾಳು ಹಾಗೂ ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಭಾರಿ ಮಳೆಗೆ ಮನೆಗಳಿಗೆ ಹಾನಿಯುಂಟಾಗಿರುವ ಹಿನ್ನಲೆಯಲ್ಲಿ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಾಸಕ ಬೇಳೂರು ಗೋಪಾಲಕೃಷ್ಣ ರವರ ಸೂಚನೆಯ ಮೇರೆಗೆ ಮಳೆಹಾನಿ ಪ್ರದೇಶಗಳಿಗೆ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಭೇಟಿ ನೀಡಿ ಸಾಂತ್ವಾನ ಹೇಳಿ ಧೈರ್ಯ ತುಂಬಿದರು.
ಕೋಡೂರು ಗ್ರಾಮದಲ್ಲಿರುವ ಮಸೀದಿ ಗುರುಗಳ ಮನೆ ಗೋಡೆ ಬಾರಿ ಮಳೆಗೆ ಕುಸಿದಿತ್ತು ಇಂದ ಹಾನಿ ಆಗಿದ್ದ ಸ್ಥಳಕ್ಕೇ ಬೇಟಿ ಪರಿಶೀಲಿಸಿ ಸೂಕ್ತ ಪರಿಹಾರದ ಭರವಸೆ ನೀಡಿದರು.
ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳ್ಳೂರು ಚೆಕ್ ಡ್ಯಾಂ ಹಾನಿಯಾದ ಸ್ಥಳಕ್ಕೇ ಬೇಟಿ ನೀಡಿ ಪರಿಶೀಲಿಸಿ ದುರಸ್ತಿ ಕಾರ್ಯಕ್ಕೆ ಸೂಚನೆ ನೀಡಿದ್ದಾರೆ.ಅರಸಾಳು ಗ್ರಾಮ ಪಂಚಾಯಿತಿ ತಮ್ಮಡಿಕೊಪ್ಪ ಗ್ರಾಮದ ಹೊಟ್ಳಾಪುರದ ಪ್ರಭಾಕರ್ ರವರ ಮನೆ ಮಳೆಯಿಂದಾಗಿ ಗೋಡೆ ಬಿದ್ದಿತ್ತು, ಸ್ಥಳಕ್ಕೆ ಬೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿ ಸೂಕ್ತ ಪರಿಹಾರದ ಭರವಸೆ ನೀಡಿದರು.
ಈ ಸಂಧರ್ಭದಲ್ಲಿ ಅರಸಾಳು ಗ್ರಾಪಂ ಮಾಜಿ ಅಧ್ಯಕ್ಷರಾದ ಉಮಾಕರ್ ಮುಖಂಡರಾದ ಯೋಗೇಶ್ ಬೆಳ್ಳೂರು ಹಾಗೂ ಇನ್ನಿತರರಿದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್