ವೈನ್ ಶಾಪ್ ನಲ್ಲಿ ಎಣ್ಣೆ ಸಾಲ ಕೊಡಲಿಲ್ಲವೆಂದು ರಸ್ತೆ ತಡೆ ನಡೆಸಿದ ಯುವಕ – ಹೀಗೊಂದು ಕುಡುಕನ ಕಿರಿಕ್ , ವೀಡಿಯೋ ವೈರಲ್ |
ವೈನ್ ಶಾಪ್ ನಲ್ಲಿ ಎಣ್ಣೇ ಸಾಲ ಕೊಟ್ಟಿಲ್ಲ ಎಂದು ಯುವಕನೊಬ್ಬ ನಡುರೋಡ್ನಲ್ಲಿ ಛತ್ರಿ ಹಿಡಿದು ರಸ್ತೆತಡೆಯನ್ನೆ ನಡೆಸಿರುವ ವಿಚಿತ್ರ ಘಟನೆಯೊಂದು ಶಿವಮೊಗ್ಗದ ಎನ್ ಟಿ ರಸ್ತೆಯಲ್ಲಿ ನಡೆದಿದೆ.
ಶಿವಮೊಗ್ಗದ ಹೊಸ ತೀರ್ಥಹಳ್ಳಿ(NT) ರೋಡ್ನಲ್ಲಿರುವ ಮದ್ಯದಂಗಡಿಗೆ ತೆರಳಿದ ಯುವಕನೊಬ್ಬ ಎಣ್ಣೆ ಕೊಡಿ ಆದರೆ ದುಡ್ಡು ಇಲ್ಲ ಅಂದಿದ್ದಾನೆ. ಹಣ ಕೊಡದೇ ಹೇಗಪ್ಪ ಎಣ್ಣೆ ಕೊಡೋದು ಎಂದು ಅಂಗಡಿಯವನು ಕೇಳಿದ್ದಾನೆ.? ಆಮೇಲೆ ಕೊಡುತ್ತೇನೆ ಎಣ್ಣೆ ಕೊಡು ಎಂದರು ಅಂಗಡಿಯಾತ ಎಣ್ಣೆ ಕೊಡದೇ ಓಡಿಸಿದ್ದಾನೆ.
ಅದಾಗಲೇ ಕಂಠಪೂರ್ತಿ ಕುಡಿದು ತೂರಾಡುತ್ತಿದ್ದ ಯುವಕ ಎಣ್ಣೆಸಾಲ ಕೊಡಲ್ಲ ಎಂದು ಸಿಟ್ಟಿಗೆದ್ದು ಸೀದಾ ರೋಡಿಗೆ ಇಳಿದಿದ್ದಾನೆ. ಸುರಿಯುವ ಮಳೆಯ ನಡುವೆ ಶಿಸ್ತಾಗಿ ಛತ್ರಿ ಹಿಡಿದು ಎನ್ಟಿ ರೋಡ್ ಮಧ್ಯೆ ನಿಂತು ಪ್ರತಿಭಟನೆಗೆ ಇಳಿದಿದ್ದಾನೆ.ಯಾರು ಏನು ಹೇಳಿದರು ಕೇಳದೆ ಬರುವ ವಾಹನಗಳು ಮೈಮೇಲೆ ಬಂದಂತೆ ಬಂದರೂ ಜಗ್ಗದೆ ಕುಗ್ಗದೆ ನಿಂತು ಎಣ್ಣೆ ಬೇಕು ಎಂದು ಮೌನ ಪ್ರತಿಭಟನೆ ಮಾಡುತ್ತಿದ್ದ.
ಇನ್ನೂ ಇದೇ ವೇಳೆ ಅಲ್ಲಿಗೆ ಬಸ್ಸೊಂದು ಬಂದಿದೆ.ಎಷ್ಟೆ ಹಾರ್ನ್ ಮಾಡಿದರು ಈತ ಮಾತ್ರ ಜಪ್ಪಯ್ಯ ಅನ್ನಲಿಲ್ಲ. ಆ ಬಳಿಕ ಬಸ್ನ ಕಂಡಕ್ಟರ್ ಕೆಳಕ್ಕೆ ಇಳಿದು ಎಣ್ಣೆ ಆಸಾಮಿಯ ಅಹವಾಲನ್ನ ಕೇಳಿ ಆತನನ್ನ ಪಕ್ಕಕ್ಕೆ ಜರುಗಿಸಿ ಮುಂದಕ್ಕೆ ಸಾಗಿದ್ದಾರೆ. ಸುಮಾರು 20 ನಿಮಿಷ ಎಣ್ನೇ ಪ್ರೇಮಿಯ ಅವಾಂತರ ಎನ್ಟಿ ರೋಡ್ನಲ್ಲಿ ಸಾಗಿತ್ತು.
ಆ ಬಳಿಕ ಸ್ಥಳೀಯರು ಯುವಕನಿಗೆ ಬೈದು ರಸ್ತೆ ಬದಿಗೆ ಕರೆದುಕೊಂಡು ಬಂದಿದ್ದಾರೆ. ಅಷ್ಟರಲ್ಲಿ ಹಲವು ಮೊಬೈಲ್ಗಳು ಕುಡುಕನ ವಿಶೇಷ ಪ್ರತಿಭಟನೆಯನ್ನು ಸೆರೆ ಹಿಡಿದಿತ್ತು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್