ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ಇಬ್ಬರ ದುರ್ಮರಣ!
ತೀರ್ಥಹಳ್ಳಿ : ಪಿಕಪ್ ವಾಹನ ಹಾಗೂ ಬೈಕ್ ನಡುವೆ ಭೀಕರ ಅಪಘಾತವಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಅಗಸರಕೋಣೆ ಬಳಿ ನಡೆದಿದೆ.
ಆಗುಂಬೆ ವ್ಯಾಪ್ತಿಯ ಬಿದರಗೋಡು ಸಮೀಪದ ಅಗಸರ ಕೋಣೆಯ ಬಳಿ ಮಂಗಳವಾರ ಮಧ್ಯಾಹ್ನ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬರುತ್ತಿದ್ದ ಪಿಕಪ್ ನಡುವೆ ಡಿಕ್ಕಿಯಾಗಿದೆ.
ಅತೀ ವೇಗದ ಚಾಲನೆಯಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು ಅಪಘಾತದ ರಭಸಕ್ಕೆ ಬೈಕ್ ನಲ್ಲಿದ್ದ ಒಬ್ಬ ವ್ಯಕ್ತಿ ಹಾಗೂ ಪಿಕಪ್ ನಲ್ಲಿದ್ದ ಮತ್ತೊರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತಪಟ್ಟವರು ಅಗಸರಕೋಣೆಯ ಶರತ್ ಹಾಗೂ ಮತ್ತೊಬ್ಬರು ಕೇರಳದ ಮೂಲದವರು ಎಂದು ತಿಳಿದು ಬಂದಿದೆ. ಪಿಕಪ್ ವಾಹನದ ಚಾಲಕ ಪರಾರಿಯಾಗಿದ್ದಾನೆ.
ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…