ಎರಡು ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ | ಹೊಸನಗರ ತಾಲೂಕಿನಲ್ಲೊಂದು ಹೃದಯವಿದ್ರಾವಕ ಘಟನೆ
ಎರಡು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು ತಾನು ಕೂಡ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಕೈ ವ್ಯಾಪ್ತಿಯಲ್ಲಿ ನಡೆದಿದೆ.
ಮತ್ತಿಕೈ ಸಮೀಪದ ಚಂಪಕಾಪುರ ಗ್ರಾಮದ ವಾಣಿ(32), ಮಕ್ಕಳಾದ ಸಮರ್ಥ(12), ಸಂಪದ (6) ಮೃತ ದುರ್ಧೈವಿಗಳು.
ಚಂಪಕಾಪುರ ನಿವಾಸಿ ರಾಜೇಶ್ ಎಂಬುವವರ ಪತ್ನಿ ವಾಣಿ ಎಂಬುವವರು ತಮ್ಮ ಎರಡು ಮಕ್ಕಳನ್ನು ಬಾವಿಗೆ ಎಸೆದು ತಾನು ಕೂಡಾ ಬಾವಿಗೆ ಹಾರಿ ಮೃತಪಟ್ಟಿದ್ದಾರೆ.
ಗುರುವಾರ ರಾತ್ರಿ ಈ ಘಟನೆ ನಡೆದಿದೆ ಎನ್ನಲಾಗುತಿದ್ದು ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನು ತಿಳಿದು ಬಂದಿಲ್ಲ.
ಸ್ಥಳಕ್ಕೆ ನಗರ ಪೊಲೀಸ್ ಠಾಣೆ ಪಿಎಸ್ಐ ರಮೇಶ್ ಸಿಬ್ಬಂದಿಗಳೊಂದಿಗೆ ಧಾವಿಸಿ ಪರಿಶೀಲನೆ ನಡೆಸುತಿದ್ದಾರೆ.
ಮೃತದೇಹಗಳನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದ್ದು ಮರಣೋತ್ತರ ಪರೀಕ್ಷೆಗೆ ನಗರ ಆಸ್ಪತ್ರೆಗೆ ಕರೆತರಲಾಗಿದೆ.
ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…
ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…
ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…
ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…
ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…
ಗುಟ್ಕಾ- ಪಾನ್ ಮಸಾಲಾ ಬ್ಯಾನ್ಗೆ ಬಿಗ್ ಟ್ವಿಸ್ಟ್: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…