ಮನೆಯಲ್ಲಿ ಬೆಕ್ಕು ಸಾಕುವವರಿಗೆ ಶಾಕಿಂಗ್ ಸುದ್ದಿ.! | ಬೆಕ್ಕು ಕಚ್ಚಿ ಶಿವಮೊಗ್ಗದ ಮಹಿಳೆ ಸಾವು
ಮನೆಯಲ್ಲಿ ಸಾಕಿದ ಬೆಕ್ಕೊಂದು ಮನೆಯ ಮಹಿಳೆಯನ್ನು ಬಲಿ ಪಡೆದುಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟದಲ್ಲಿ ನಡೆದಿದೆ.
ಗಂಗೀಬಾಯಿ (50) ಮನೆಯ ಸಾಕು ಬೆಕ್ಕು ಕಚ್ಚಿ ಸಾವನ್ನಪ್ಪಿದ ಮಹಿಳೆ ಎಂದು ಗುರುತಿಸಲಾಗಿದೆ.
ತರಲಘಟ್ಟದ ಗಂಗೀಬಾಯಿ ಎನ್ನುವವರಿಗೆ ಎರಡು ತಿಂಗಳ ಹಿಂದೆ ಮನೆಯಲ್ಲೇ ಮುದ್ದಾಗಿ ಸಾಕಿದ್ದ ಬೆಕ್ಕು ಕಚ್ಚಿತ್ತು ಎನ್ನಲಾಗಿದೆ. ಈ ಬೆಕ್ಕು ಮೊದಲು ತರಲಘಟ್ಟದ ಕ್ಯಾಂಪ್ನಲ್ಲಿರುವ ಯುವಕನ ಮೇಲೆ ದಾಳಿ ಮಾಡಿತ್ತು. ಬಳಿಕ ಮಹಿಳೆಯ ಮೇಲೂ ದಾಳಿ ಮಾಡಿ ಕಚ್ಚಿ ಗಾಯಗೊಳಿಸಿತ್ತು ಎಂದು ತಿಳಿದು ಬಂದಿದೆ.
ಬೆಕ್ಕು ಕಚ್ಚಿದ ಪರಿಣಾಮ ಗಂಗೀಬಾಯಿ ರೇಬಿಸ್ ಕಾಯಿಲೆಗೆ ತುತ್ತಾಗಿದ್ದಳು. ಬೆಕ್ಕು ಕಚ್ಚಿದ ಬಳಿಕ ಮಹಿಳೆ ಐದು ಇಂಜೆಕ್ಷನ್ ತೆಗೆದುಕೊಳ್ಳಬೇಕಿತ್ತು. ಆದರೆ ಒಂದು ಇಂಜೆಕ್ಷನ್ ಪಡೆದು ಆರೋಗ್ಯವಾಗಿದ್ದೇನೆ ಎಂದುಕೊಂಡ ಗಂಗೀಬಾಯಿ ಉಳಿದ ನಾಲ್ಕು ಇಂಜೆಕ್ಷನ್ ತೆಗೆದುಕೊಳ್ಳದೇ ನಿರ್ಲಕ್ಷ್ಯ ತೋರಿದ್ದಾರೆ ಎನ್ನಲಾಗಿದೆ.
ಮೊದಲ ಇಂಜೆಕ್ಷನ್ ಪಡೆದ ಬಳಿಕ ಗಂಗೀಬಾಯಿ ಆರೋಗ್ಯ ಚೇತರಿಸಿಕೊಂಡಿದ್ದು, ಹುಷಾರಾದ ಬಳಿಕ ಗದ್ದೆಗೆ ನಾಟಿ ಮಾಡಲು ಹೋಗಿದ್ದಾರೆ. ನೀರು ಹಾಗೂ ಕೆಸರಿಗೆ ಇಳಿದ ಕಾರಣ ಬೆಕ್ಕು ಕಚ್ಚಿದ ಗಾಯ ಇನ್ನಷ್ಟು ಉಲ್ಬಣಗೊಂಡಿದೆ. ಜೊತೆಗೆ ರೇಬಿಸ್ ಕಾಯಿಲೆಯ ಲಕ್ಷಣಗಳು ಕೂಡ ಹೆಚ್ಚಾಗಿದ್ದು, ತೀವ್ರ ಅನಾರೋಗ್ಯ ಕಾಡಿ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಈ ಘಟನೆ ಬಳಿಕ ಎಚ್ಚೆತ್ತುಕೊಂಡ ಜಿಲ್ಲಾ ಆರೋಗ್ಯ ಅಧಿಕಾರಿಗಳು ನಾಯಿ ಮಾತ್ರವಲ್ಲ ಬೆಕ್ಕು ಕಚ್ಚಿದರೂ ಸಹ ರೇಬಿಸ್ ರೋಗ ಬರುತ್ತದೆ ಎಂದು ತರಲಘಟ್ಟ ಜನರಿಗೆ ತಿಳಿ ಹೇಳಿದ್ದಾರೆ. ಅಲ್ಲದೇ ಒಂದು ವೇಳೆ ಮನೆಯ ಸಾಕು ಪ್ರಾಣಿಗಳು ಕಚ್ಚಿದರೆ ತಕ್ಷಣವೇ ಚಿಕಿತ್ಸೆ ಪಡೆಯುವಂತೆ ತಿಳಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್