ಆನ್ ಲೈನ್ ಆಪ್ ನಂಬಿ ಹಣ ಕಳೆದುಕೊಂಡ ಯುವಕ – ಮನನೊಂದು ಆತ್ಮಹತ್ಯೆ
ಆನ್ಲೈನ್ನಲ್ಲಿ ಬರುವಂತಹ ಆಪ್ ಗಳನ್ನು ನಂಬಿ ಅನೇಕ ಜನರು ಸಾವಿರಾರು ರೂಪಾಯಿಗಳನ್ನು ಹಾಕಿ ಕೈ ಸುಟ್ಟುಕೊಂಡಿರುವಂತಹ ಉದಾಹರಣೆಗಳು ನಮ್ಮ ಮುಂದೆ ಇವೆ. ಅದರಂತೆ ಇದೀಗ ಶಿವಮೊಗ್ಗದಲ್ಲಿ ಯುವಕನೊಬ್ಬ ಆನ್ಲೈನ್ ಆಪ್ ಅನ್ನು ನಂಬಿ ಹಣ ಡಬಲ್ ಆಗುತ್ತದೆ ಎಂದು ಸಾವಿರಾರು ರೂಪಾಯಿ ಹಣ ಹೂಡಿಕೆ ಮಾಡಿದ್ದಾನೆ.ಆದರೆ ಮರಳಿ ಹಣ ಬಾರದೆ ಇರುವುದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಹೌದು ಆನ್ಲೈನ್ ಆಪ್ ನಂಬಿ ಹಣ ಕಳೆದುಕೊಂಡ ಯುವಕನೊಬ್ಬ ಹಣ ಕಳೆದುಕೊಂಡಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಪೇಪರ್ ಟೌನ್ ಲೇಔಟ್ ನಲ್ಲಿ ಘಟನೆ ನಡೆದಿದ್ದು, ಹಣ ಕಳೆದುಕೊಂಡಿದ್ದಕ್ಕೆ ನೊಂದು ಪ್ರದೀಪ್ (27) ಎಂಬ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಆನ್ಲೈನ್ ನಲ್ಲಿ ಹಣ ಹಾಕಿದರೆ ಡಬಲ್ ಆಗುತ್ತೆ ಎಂದು ನಂಬಿ ಸುಮಾರು ಕಡೆ ಸಾಲ ಮಾಡಿ ಪ್ರದೀಪ್ 91 ಸಾವಿರ ರೂಪಾಯಿಗಳನ್ನು ಹೂಡಿಕೆ ಮಾಡಿದ್ದ. ಆದರೆ ಹಣ ವಾಪಸ್ ಬಾರದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಕುರಿತಂತೆ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…
ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…
ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…
ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…
ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…
ಗುಟ್ಕಾ- ಪಾನ್ ಮಸಾಲಾ ಬ್ಯಾನ್ಗೆ ಬಿಗ್ ಟ್ವಿಸ್ಟ್: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…